ಕುಷ್ಟಗಿ ಕ್ಷೇತ್ರಕ್ಕೆ ರೆಡ್ಡಿ ಪಕ್ಷದಿಂದ ಸಿ.ಎಂ.ಹಿರೇಮಠ ಅಭ್ಯರ್ಥಿಯಾಗುವುದು ಬಹುತೇಕ ಖಚಿತ

ಜೆಡಿಎಸ್ ತೊರೆದು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷಕ್ಕೆ

Team Udayavani, Feb 1, 2023, 5:09 PM IST

1-sadsdsad

ಕುಷ್ಟಗಿ: ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಸಿ.ಎಂ.ಹಿರೇಮಠ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.

ಜೆಡಿಎಸ್ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿರುವ ಸಿ.ಎಂ. ಹಿರೇಮಠ ಅವರು ಕಳೆದ ಸೋಮವಾರ ಪಂಚರತ್ನ ರಥಯಾತ್ರೆ ಹಾಗೂ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ‌ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಇದು ಅವರ ಜೆಡಿಎಸ್ ಪಕ್ಷದ ಕೊನೆಯ ಕಾರ್ಯಕ್ರಮವಾಗಿತ್ತು.

ಸಾಮೂಹಿಕ ರಾಜಿನಾಮೆ

ನಿವೃತ್ತ ತಹಶೀಲ್ದಾರ ಸಿ.ಎಂ. ಹಿರೇಮಠ ಅವರು ಜೆಡಿಎಸ್ ರಾಜ್ಯ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಫೆ.3 ರಂದು ಅಧಿಕೃತವಾಗಿ ಗಾಲಿ ಜನಾರ್ದನ ರಡ್ಡಿ ಅವರ ಹೊಸ ಪಕ್ಷ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸೇರುವುದಾಗಿ ತಿಳಿಸಿದರು.

ಇಲ್ಲಿನ ಹಳೆಯ ಪ್ರವಾಸಿ ಮಂದಿರದಲ್ಲಿ ತುರ್ತು ಸುದ್ದೀಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 16 ವರ್ಷಗಳಿಂದ ಜೆಡಿಎಸ್ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ನನಗೆ ಸ್ಥಳೀಯ, ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶರಣಪ್ಪ ಕುಂಬಾರ ನಡಾವಳಿಕೆಯಿಂದಾಗಿ ಕಡೇಗಾಣಿಸಲಾಗಿದೆ. ಈ ಬಗ್ಗೆ ಮಾಜಿ ಸಿಎಂ. ಕುಮಾರಸ್ವಾಮಿ ಅವರ ಗಮನಕ್ಕೆ ತಂದಾಗ್ಯೂ ಆ ವ್ಯಕ್ತಿ ನಡವಳಿಕೆ ಬದಲಿಸಿಕೊಳ್ಳದೇ ಅದೇ ವೃತ್ತಿ ಮುಂದುವರಿಸಿರುವುದು ಮನಸ್ಸಿಗೆ ನೋವಾಗಿದೆ. ಈ ಒಂದು ಕಾರಣದಿಂದ ಜೆಡಿಎಸ್ ಪಕ್ಷ ತೊರೆಯುತ್ತಿದ್ದು 16 ವರ್ಷವರೆಗೂ ಅಧಿಕಾರ ಇರಲಿ, ಇರದೇ ಇರಲಿ ಅತ್ಯಂತ ಶಿಸ್ತಿನಿಂದ ಪಕ್ಷ ಸಂಘಟನೆಯಲ್ಲಿರುವ ನನಗೆ, ಇದೀಗ ಪಕ್ಷ ತೊರೆಯುವುದಕ್ಕೆ ಮನಸ್ಸು ಭಾರವೆನಿಸುತ್ತದೆ ಎಂದು ಗದ್ಗದಿತರಾದರು.

ನನ್ನೊಂದಿಗೆ ಹಿಂದುಳಿದ ವರ್ಗದ ಜೆಡಿಎಸ್ ಘಟಕದ ಅಧ್ಯಕ್ಷ ಶಿವಶಂಕರಪ್ಪ ಕುರಿ, ಯುವ ಘಟಕದ ಶಶಿಧರ ಕುಂಬಾರ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಕ್ಬರ್ ನದಾಫ್, ಎಸ್ಸಿ ಘಟಕದ ಕೃಷ್ಣ ಕಲ್ಲಭಾವಿ, ರಾಜಾಸಾಬ್ ಕಲಾಲಬಂಡಿ ಮತ್ತೀತರರು ಸಾಮೂಹಿಕ ರಾಜಿನಾಮೆ ಸಲ್ಲಿಸಿದ್ದು, ಸದರಿ ರಾಜಿನಾಮೆ ಪತ್ರಗಳನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದರು. ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ, ಜೆಡಿಎಸ್ ತಾಲೂಕಾ ಮಾಜಿ ಅಧ್ಯಕ್ಷ ಬಸವರಾಜ್ ನಾಯಕ, ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣ ಕುಂಬಾರ ಅವರು ಸಹ ರಾಜಿನಾಮೆ ನೀಡಿ ಕೆಆರ್ ಪಿಪಿ ಸೇರಲಿದ್ದಾರೆ ಎಂದು ಸಿ.ಎಂ. ಹಿರೇಮಠ ತಿಳಿಸಿದರು.

ಇವರೊಂದಿಗೆ ಈಗಾಗಲೇ ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷ ಸ್ಥಾನಕ್ಕೆ ಬಸವರಾಜ ನಾಯಕ ರಾಜೀನಾಮೆ ನೀಡಿದ್ದು, ಜಿಲ್ಲಾ ಜೆಡಿಎಸ್ ನಿಕಟಪೂರ್ವ ಅಧ್ಯಕ್ಷ ಎ.ಅಮರೇಗೌಡ ಪಾಟೀಲ ಅವರು ಸಹ ಕೆಆರ್ ಪಿಪಿ ಸೇರಲಿದ್ದಾರೆ.

ಟಾಪ್ ನ್ಯೂಸ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿ ವರುಣಾ ಕ್ಷೇತ್ರ ಹೈವೋಲ್ಟೇಜ್ ಅಖಾಡ…ಹಿಂದಿನ ಚುನಾವಣೆಯಲ್ಲಿ ಮತದಾರರ ಒಲವು ಹೇಗಿತ್ತು?

ಈ ಬಾರಿ ವರುಣಾ ಕ್ಷೇತ್ರ ಹೈವೋಲ್ಟೇಜ್ ಅಖಾಡ…ಹಿಂದಿನ ಚುನಾವಣೆಯಲ್ಲಿ ಮತದಾರರ ಒಲವು ಹೇಗಿತ್ತು?

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

Karnataka Poll 2023; ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ; ನೀತಿ ಸಂಹಿತೆ ಜಾರಿ

Karnataka Poll 2023;ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ; ನೀತಿ ಸಂಹಿತೆ ಜಾರಿ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ