ಹಾಲು ದರ ಏರಿಕೆ ಮರು ಪರಿಶೀಲನೆಗೆ ಸಿಎಂ ಸೂಚನೆ
ಚೆಂಡು ಮತ್ತೆ ಕೆಎಂಎಫ್ ಅಂಗಳಕ್ಕೆ
Team Udayavani, Nov 21, 2022, 10:11 PM IST
ಬೆಂಗಳೂರು: ಹಾಲು ಹಾಗೂ ಮೊಸರಿನ ದರ ಏರಿಕೆ ಚೆಂಡು ಮತ್ತೆ ಕೆಎಂಎಫ್ ಅಂಗಳಕ್ಕೆ ಬಿದ್ದಿದೆ. ರೈತರಿಗೆ ತೊಂದರೆ ಆಗದಂತೆ ಹಾಗೂ ಗ್ರಾಹಕರಿಗೂ ಹೊರೆಯಾಗದಂತೆ ಸೂತ್ರ ರಚಿಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಎಂಎಫ್ ಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು, ದರ ಏರಿಕೆ ಬಗ್ಗೆ ಮತ್ತೂಮ್ಮೆ ಸಭೆ ನಡೆಸಿ ಸರ್ವಸಮ್ಮತ ಸೂತ್ರ ರಚಿಸಿ ನಿರ್ಧಾರ ಕೈಗೊಳ್ಳಿ ಎಂದು ಹೇಳಿದ್ದಾರೆ.
ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಬೇರೆ ಬೇರೆ ರಾಜ್ಯಗಳಲ್ಲಿ ಎಷ್ಟು ದರ ಇದೆ. ಹಾಲು ಉತ್ಪಾದನೆ ವೆಚ್ಚ, ಯಾಕೆ ದರ ಹೆಚ್ಚಳ ಮತ್ತಿತರ ಮಾಹಿತಿ ಪಡೆದಿದ್ದೇನೆ. ರೈತರಿಗೆ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೆ ಹೊರೆಯಾಗದಂತೆ ಸೂತ್ರ ರಚಿಸಿ ತೀರ್ಮಾನ ಕೈಗೊಳ್ಳಿ ಎಂದು ಹೇಳಿದ್ದೇನೆ. ಕೆಎಂಎಫ್ ನವರು 2 ದಿನ ಸಮಯ ಪಡೆದುಕೊಂಡಿದ್ದು, ತೀರ್ಮಾನ ಕೈಗೊಳ್ಳಲಿ ದ್ದಾರೆ. ಹಿಂದಿನ ದರ ಬೇಡ ಎಂದು ಹೇಳಿದ್ದೇನೆ ಎಂದು ತಿಳಿಸಿದರು.
ಹೀಗಾಗಿ ಬಹುತೇಕ ಪ್ರತಿ ಲೀ. 2 ರೂ. ವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಕಳೆದ ವಾರ ಹಾಲು ಮತ್ತು ಮೊಸರು ದರ ಪ್ರತಿ ಲೀ.ಗೆ 3 ರೂ. ಹೆಚ್ಚಿಸಲು ಕೆಎಂಎಫ್ ತೀರ್ಮಾನ ಕೈಗೊಂಡಿತ್ತು. ಅದಕ್ಕೆ ಮುಖ್ಯಮಂತ್ರಿ ತಡೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ
ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ
ಎಪ್ರಿಲ್ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್ ಪಟ್ಟಿ
ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್ ಶೋ
MUST WATCH
ಹೊಸ ಸೇರ್ಪಡೆ
64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ
ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್ನೀಡಲು ಸ್ವಾಮೀಜಿಗಳಿಂದ ಒತ್ತಾಯ
ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…
ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ
ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮಹತ್ವದ ಒಪ್ಪಂದ