ಹಾಲು ದರ ಏರಿಕೆ ಮರು ಪರಿಶೀಲನೆಗೆ ಸಿಎಂ ಸೂಚನೆ
ಚೆಂಡು ಮತ್ತೆ ಕೆಎಂಎಫ್ ಅಂಗಳಕ್ಕೆ
Team Udayavani, Nov 21, 2022, 10:11 PM IST
ಬೆಂಗಳೂರು: ಹಾಲು ಹಾಗೂ ಮೊಸರಿನ ದರ ಏರಿಕೆ ಚೆಂಡು ಮತ್ತೆ ಕೆಎಂಎಫ್ ಅಂಗಳಕ್ಕೆ ಬಿದ್ದಿದೆ. ರೈತರಿಗೆ ತೊಂದರೆ ಆಗದಂತೆ ಹಾಗೂ ಗ್ರಾಹಕರಿಗೂ ಹೊರೆಯಾಗದಂತೆ ಸೂತ್ರ ರಚಿಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಎಂಎಫ್ ಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಗೂ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು, ದರ ಏರಿಕೆ ಬಗ್ಗೆ ಮತ್ತೂಮ್ಮೆ ಸಭೆ ನಡೆಸಿ ಸರ್ವಸಮ್ಮತ ಸೂತ್ರ ರಚಿಸಿ ನಿರ್ಧಾರ ಕೈಗೊಳ್ಳಿ ಎಂದು ಹೇಳಿದ್ದಾರೆ.
ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ, ಬೇರೆ ಬೇರೆ ರಾಜ್ಯಗಳಲ್ಲಿ ಎಷ್ಟು ದರ ಇದೆ. ಹಾಲು ಉತ್ಪಾದನೆ ವೆಚ್ಚ, ಯಾಕೆ ದರ ಹೆಚ್ಚಳ ಮತ್ತಿತರ ಮಾಹಿತಿ ಪಡೆದಿದ್ದೇನೆ. ರೈತರಿಗೆ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೆ ಹೊರೆಯಾಗದಂತೆ ಸೂತ್ರ ರಚಿಸಿ ತೀರ್ಮಾನ ಕೈಗೊಳ್ಳಿ ಎಂದು ಹೇಳಿದ್ದೇನೆ. ಕೆಎಂಎಫ್ ನವರು 2 ದಿನ ಸಮಯ ಪಡೆದುಕೊಂಡಿದ್ದು, ತೀರ್ಮಾನ ಕೈಗೊಳ್ಳಲಿ ದ್ದಾರೆ. ಹಿಂದಿನ ದರ ಬೇಡ ಎಂದು ಹೇಳಿದ್ದೇನೆ ಎಂದು ತಿಳಿಸಿದರು.
ಹೀಗಾಗಿ ಬಹುತೇಕ ಪ್ರತಿ ಲೀ. 2 ರೂ. ವರೆಗೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಕಳೆದ ವಾರ ಹಾಲು ಮತ್ತು ಮೊಸರು ದರ ಪ್ರತಿ ಲೀ.ಗೆ 3 ರೂ. ಹೆಚ್ಚಿಸಲು ಕೆಎಂಎಫ್ ತೀರ್ಮಾನ ಕೈಗೊಂಡಿತ್ತು. ಅದಕ್ಕೆ ಮುಖ್ಯಮಂತ್ರಿ ತಡೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ