ಬೆಳಗಿನ ಜಾವದವರೆಗೂ ಸಿಎಂ,ಜೋಶಿ ಮತ್ತು ಪ್ರಭಾವಿ ಸಚಿವರ ಚರ್ಚೆ!
Team Udayavani, Apr 9, 2022, 5:14 PM IST
ಬೆಂಗಳೂರು : ಸಂಪುಟ ವಿಸ್ತರಣೆಗೆ ವರಿಷ್ಠರಿಂದ ಒಪ್ಪಿಗೆ ಪಡೆಯಲು ಸಾಧ್ಯವಾಗದೇ ಬೆಂಗಳೂರಿಗೆ ವಾಪಾಸ್ ಆಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬೆಂಗಳೂರಿನ ಪ್ರಭಾವಿ ಸಚಿವರ ಜತೆಗೆ ಬೆಳಗಿನ ಜಾವದವರೆಗೂ ಚರ್ಚೆ ನಡೆಸಿರುವುದು ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ ಜೋಶಿ ನೇರವಾಗಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬೊಮ್ಮಾಯಿ ನಿವಾಸಕ್ಕೆ ತೆರಳಿದರು. ನಂತರ ಬೆಂಗಳೂರಿನ ಪ್ರಭಾವಿ ಸಚಿವರೊಬ್ಬರಿಗೆ ಕರೆ ಮಾಡಿ ಅವರನ್ನು ಸಿಎಂ ನಿವಾಸಕ್ಕೆ ಕರೆಸಿಕೊಳ್ಳಲಾಗಿದೆ.ಬೆಳಗಿನ ಜಾವ ಮೂರು ಗಂಟೆಯವರೆಗೂ ಈ ಮೂವರು ರಹಸ್ಯ ಸಭೆ ನಡೆಸಿದ್ದಾರೆ. ಆದರೆ ಮಾತುಕತೆಯ ವಿವರ ಏನೆಂಬುದು ತಿಳಿದು ಬಂದಿಲ್ಲ, ಈ ಸಭೆಯ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚಿನ ಚರ್ಚೆ ನಡೆದಿಲ್ಲ.
ಆದರೆ ಬೊಮ್ಮಾಯಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಕ್ಕೆ ದಿಲ್ಲಿಗೆ ಹೋಗಿರಲಿಲ್ಲ. ಬೇರೆ ಬೇರೆ ಕಾರ್ಯಕ್ರಮ ನಿಮಿತ್ತ ಬಂದಿದ್ದರು ಎಂದು ಪ್ರಹ್ಲಾದ್ ಜೋಶಿ ಶನಿವಾರ ಮಧ್ಯಾಹ್ನ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ. ಆದರೆ ಶುಕ್ರವಾರ ತಡರಾತ್ರಿಯಿಂದ ಬೆಳಗಿನ ಜಾವದವರೆಗೆ ನಡೆದ ಸಭೆ ಸುಖಾಸುಮ್ಮನೆ ನಡೆದಿರುವುದಲ್ಲ. ಯಾವುದೋ ರಹಸ್ಯ ವಿಚಾರಕ್ಕಾಗಿಯೇ ಈ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ