ರಾಜ್ಯದ ಅಭಿವೃದ್ಧಿ ಯೋಜನೆ ಕುರಿತು ಎರಡು ತಿಂಗಳಿಗೊಮ್ಮೆ ಸಂಸದರೊಂದಿಗೆ ಸಭೆ: ಸಿಎಂ
Team Udayavani, Nov 27, 2020, 10:30 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕರೆದಿದ್ದ ಅನೌಪಚಾರಿಕ ಸಭೆಯಲ್ಲಿ 10 ಮಂದಿ ಸಂಸದರು, ಒಬ್ಬ ರಾಜ್ಯಸಭಾ ಸದಸ್ಯರು ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಇತರರು ಪಕ್ಷ ಚಟುವಟಿಕೆ ಹಾಗೂ ಇತರ ಕಾರ್ಯ ನಿಮಿತ್ತ ಗೈರಾಗಿದ್ದು, ಈ ಬಗ್ಗೆ ಪೂರ್ವಮಾಹಿತಿ ನೀಡಿದ್ದರು ಎನ್ನಲಾಗಿದೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಸಂಜೆ 4ರಿಂದ 5.15ರ ವರಗೆ ಸಭೆ ನಡೆಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಪ್ರತಾಪ್ಸಿಂಹ, ಸಂಗಣ್ಣ ಕರಡಿ, ರಾಜ ಅಮರೇಶ್ ನಾಯಕ್, ಡಾ| ಉಮೇಶ್ ಜಾಧವ್, ಶಿವಕುಮಾರ್ ಉದಾಸಿ, ದೇವೇಂದ್ರಪ್ಪ, ಜಿ.ಎಸ್.ಬಸವರಾಜು, ಎ.ನಾರಾಯಣಸ್ವಾಮಿ, ಪಿ.ಸಿ. ಗದ್ದಿಗೌಡರ್, ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಇತರರು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳ ಜಾರಿಯ ಪ್ರಗತಿ ವೇಗವನ್ನು ಹೆಚ್ಚಿಸಲು ಇನ್ನು ಮುಂದೆ ರಾಜ್ಯದ ಸಂಸದರೊಂದಿಗೆ ಎರಡು ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು. ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು (ಎಂಪಿಎಲ್ಎಡಿ ಫಂಡ್) ಮುಂದುವರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಕಲ್ಲಿದ್ದಲು ಹೊಗೆಯಿಂದ ಉಸಿರುಗಟ್ಟಿ ಯುವತಿ ಸಾವು, ಮೂವರು ಅಸ್ವಸ್ಥ
ಸಂಸದರ ಪ್ರಮುಖ ಸಲಹೆ
ರಾಜ್ಯದಲ್ಲಿ ಈ ಬಾರಿ ಮೆಕ್ಕೆ ಜೋಳ, ಭತ್ತದ ಇಳುವರಿ ಹೆಚ್ಚಾಗಿದ್ದು, ಬೆಲೆ ಕುಸಿತ ತಡೆಯಲು ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ನೀಡಬೇಕು. ಸಂಸದರಿಗೆ ಕನಿಷ್ಠ 3 ಕೋಟಿ ರೂ. ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿ ಒದಗಿಸಬೇಕು. ಕಲಬುರಗಿಯ ಇಎಸ್ಐ ಆಸ್ಪತ್ರೆ ಉನ್ನತೀಕರಣಕ್ಕೆ 860 ಎಕರೆ ಭೂಮಿಯಿದ್ದು, 150 ಎಕರೆ ಪ್ರದೇಶದಲ್ಲಿ ಪ್ರಯೋಗಾಲಯ ಇತರ ಸೌಲಭ್ಯ ಕಲ್ಪಿಸಲು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದು, ರಾಜ್ಯ ಅನುಮತಿ ನೀಡಬೇಕು ಸಹಿತ ಹಲವು ಸಲಹೆಗಳನ್ನು ಸಂಸದರು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ