ಮೊದಲ ದಿನವೇ CM ಸಿದ್ದರಾಮಯ್ಯ ವಾಗ್ಧಾಳಿ


Team Udayavani, May 21, 2023, 6:32 AM IST

SIDDARAMAYYA 1

ಬೆಂಗಳೂರು: ಜಿಎಸ್‌ಟಿ ಸೇರಿ ವಾರ್ಷಿಕ 4 ಲಕ್ಷ ಕೋಟಿ ರೂ. ತೆರಿಗೆಯನ್ನು ನಾವು (ಕರ್ನಾಟಕ ) ಕಟ್ಟುತ್ತೇವೆ. ಆದರೆ ಹದಿನೈದನೇ ಹಣಕಾಸು ಆಯೋಗ ನಿಗದಿ ಮಾಡಿದ್ದ 5,495 ಕೋಟಿ ರೂ. ಅನುದಾನವನ್ನೂ “ಆ ಯಮ್ಮ” (ನಿರ್ಮಲಾ ಸೀತಾರಾಮನ್‌) ತೆಗೆದು ಬಿಟ್ಟರು. ರಾಜ್ಯಕ್ಕೆ ಇದಕ್ಕಿಂತ ಹೆಚ್ಚು ಅನ್ಯಾಯ ಮಾಡಿದ ಸರಕಾರ ಬೇಕಾ? ಎಂದು ಕೇಂದ್ರ ಸರಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತಮ್ಮ ಮೊದಲ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಈ ಮೂಲಕ ಮೋದಿ ಸರಕಾರದ ವಿರುದ್ಧ ತಿಕ್ಕಾಟ ನಡೆಸುವ ಸಂದೇಶವನ್ನು ಮೊದಲ ದಿನವೇ ರವಾನಿಸಿದ್ದಾರೆ.

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕರ್ನಾಟಕದಿಂದಲೇ ರಾಜ್ಯ ಸಭೆಗೆ ಆಯ್ಕೆಯಾಗಿದ್ದಾರೆ. ಆದರೂ ಕೇಂದ್ರದ ತೆರಿಗೆಯಲ್ಲಿ ರಾಜ್ಯ ನ್ಯಾಯಯುತ ಪಾಲು ಪಡೆಯುವುದಕ್ಕೆ ಅಡ್ಡಿಯನ್ನುಂಟು ಮಾಡಿದ್ದಾರೆ. ಆ ಯಮ್ಮ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಂದ ರಾಜ್ಯ ಅತಿ ಹೆಚ್ಚು ತೊಂದರೆ ಅನುಭವಿಸಿದೆ. ಬೊಮ್ಮಾಯಿ ಜಿಎಸ್‌ಟಿ ಕೌನ್ಸಿಲ್‌ ಸದಸ್ಯರಾಗಿದ್ದರೂ ರಾಜ್ಯದ ಪರ ಧ್ವನಿ ಎತ್ತಿಲ್ಲ. ಇನ್ನು 25 ಸಂಸದರೂ ಈ ಬಗ್ಗೆ ಮಾತನಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಜನರಿಗಾಗಿ ಈ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಹೊರಟರೆ, ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಲು ಕಾಂಗ್ರೆಸ್‌ ಹೊರಟಿದೆ ಎಂದು ಪ್ರಧಾನಿ ಮೋದಿಯವರು ತಮ್ಮ ಮನ್‌ ಕಿ ಬಾತ್‌ನಲ್ಲಿ ಟೀಕಿಸಿದರು. ಆದರೆ ದೇಶವನ್ನು ಸಾಲದ ಸುಳಿಗೆ ಸಿಲುಕಿಸಿದ್ದೇ ನರೇಂದ್ರ ಮೋದಿ. ಸ್ವಾತಂತ್ರ್ಯ ನಂತರ ಮನಮೋಹನ್‌ ಸಿಂಗ್‌ ಸರಕಾರದವರೆಗೆ ಕೇಂದ್ರ ಸರಕಾರ 53,11,000 ಕೋಟಿ ರೂ. ಸಾಲ ಮಾಡಲಾಗಿತ್ತು. ಆದರೆ ಮೋದಿ ಆಳ್ವಿಕೆಯ 9 ವರ್ಷದಲ್ಲಿ 155 ಲಕ್ಷ ಕೋಟಿ ಸಾಲ ಮಾಡಲಾಗಿದೆ. ರಾಜ್ಯದಲ್ಲಿ ನಾನು ಮುಖ್ಯಮಂತ್ರಿಯಾಗಿ ಅಧಿಕಾರದಿಂದ ನಿರ್ಗಮಿಸುವವರೆಗೆ 2.42 ಲಕ್ಷ ಕೋಟಿ ರೂ. ಸಾಲ ಇತ್ತು. ಆದರೆ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರವೂ ಸೇರಿ ಬಿಜೆಪಿ ಅಧಿಕಾರದ ಕೊನೆಯಲ್ಲಿ 5.64 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಈ ವರ್ಷವೊಂದರಲ್ಲೇ ನಾವು 56 ಸಾವಿರ ಕೋಟಿ ಅಸಲು-ಬಡ್ಡಿ ಕಟ್ಟಬೇಕಿದೆ. ವಾಸ್ತವವಾಗಿ ರಾಜ್ಯ ಹಾಗೂ ರಾಷ್ಟ್ರವನ್ನು ಸಾಲದ ಸುಳಿಗೆ ಹಾಕಿದವರೇ ಬಿಜೆಪಿಯವರು. ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸದೇ ಈ ಐದು ಯೋಜನೆ ಜಾರಿ ಮಾಡುತ್ತೇವೆಂಬ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಹೇಳಿದರು.

ಕೇಂದ್ರ ತೆರಿಗೆ ಪಾಲಿನಲ್ಲಿ ನಮಗೆ ಕೇವಲ 50 ಸಾವಿರ ಕೋಟಿ ರೂ. ಮಾತ್ರ ಲಭಿಸುತ್ತಿದೆ. ವಾಸ್ತವದಲ್ಲಿ ನಮಗೆ 1 ಲಕ್ಷ ಕೋಟಿ ರೂ. ಸಿಗಬೇಕು. ಆದರೆ ಕೇಂದ್ರದಿಂದ ನಮಗೆ ನಿರಂತರ ಅನ್ಯಾಯವಾಗಿದೆ. ನಮ್ಮ ಗ್ಯಾರಂಟಿ ಯೋಜನೆಜಾರಿಗೆ ತತ್‌ಕ್ಷಣದಲ್ಲಿ 50 ಸಾವಿರ ಕೋಟಿ ರೂ. ಬೇಕಾಗಬಹುದು. ಎಷ್ಟೇ ಕಷ್ಟವಾದರೂ ಸರಿ ನಾವು ಈ ಯೋಜನೆಯನ್ನು ಜಾರಿ ಮಾಡುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಎಲ್ಲ ಭರವಸೆಗಳನ್ನು ಒಂದು ವರ್ಷದ ಅವಧಿಯಲ್ಲಿ ಈಡೇರಿಸುತ್ತೇವೆ. ಆದರೆ ಐದು ಗ್ಯಾರಂಟಿಗಳಿಗೆ ಮಾತ್ರ ಮೊದಲ ಸಂಪುಟ ಸಭೆಯಲ್ಲೇ ತಾತ್ವಿಕ ಒಪ್ಪಿಗೆ ನೀಡಿದ್ದೇವೆ. ವಿಪಕ್ಷಗಳು ಜನರನ್ನು ತಪ್ಪು ದಾರಿಗೆ ಎಳೆಯುವ ಆವಶ್ಯಕತೆ ಇಲ್ಲ. ನಮ್ಮದು ನುಡಿದಂತೆ ನಡೆಯುವ ಸರಕಾರ. ನಾವು ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳ ಪೈಕಿ 158ನ್ನು ಈಡೇರಿಸಿದ್ದೆವು ಎಂದು ಹೇಳಿದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.