ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಗರ್ಭಗುಡಿ ಕಾರ್ಯಕ್ಕೆ ಸಿಎಂ ಯೋಗಿ ವಿಧ್ಯುಕ್ತ ಚಾಲನೆ
ದ್ರಾವಿಡ ಶೈಲಿಯ ಶ್ರೀರಾಮ್ ಲಾಲಾ ಸದನ್ ದೇವಾಲಯವನ್ನು ಉದ್ಘಾಟಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Jun 1, 2022, 12:14 PM IST
ಉತ್ತರಪ್ರದೇಶ(ಅಯೋಧ್ಯೆ): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ (ಜೂನ್ 01) ಶ್ರೀರಾಮ ಮಂದಿರದ ಗರ್ಭ ಗುಡಿ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ.
ಕೆತ್ತಿರುವ ಮೊದಲ ಇಟ್ಟಿಗೆಯನ್ನು ಗರ್ಭಗೃಹದಲ್ಲಿಟ್ಟು ಸಿಮೆಂಟ್ ಅನ್ನು ಹಾಕುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗರ್ಭಗುಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹಿಜಾಬ್ ವಿವಾದ: ವಿದ್ಯಾರ್ಥಿನಿಯರ ಆರೋಪ ರಾಜಕೀಯ ಪ್ರೇರಿತ; ಯು.ಟಿ.ಖಾದರ್ ಸ್ಪಷ್ಟನೆ
ಗರ್ಭಗುಡಿ ಶಿಲಾನ್ಯಾಸ ಸಮಾರಂಭದಲ್ಲಿ ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, 90 ಮಠಗಳ ಮಹಾಂತರು, ಸಾಧುಗಳು ಹಾಗೂ ರಾಮಮಂದಿರದ ಟ್ರಸ್ಟಿಗಳು ಹಾಜರಿದ್ದರು. ಅಯೋಧ್ಯಗೆ ಆಗಮಿಸಿರುವ ಸಿಎಂ ಯೋಗಿ ಅವರು ಗರ್ಭಗೃಹದ ಶಿಲಾನ್ಯಾಸ ನೆರವೇರಿಸಿದ ಬಳಿಕ ದ್ರಾವಿಡ ಶೈಲಿಯ ಶ್ರೀರಾಮ್ ಲಾಲಾ ಸದನ್ ದೇವಾಲಯವನ್ನು ಉದ್ಘಾಟಿಸಿರುವುದಾಗಿ ವರದಿ ವಿವರಿಸಿದೆ.
ರಾಮಮಂದಿರ ಗರ್ಭಗೃಹ ನಿರ್ಮಾಣದ ಹಿನ್ನೆಲೆಯಲ್ಲಿ ರಾಮನಾಮ, ದುರ್ಗಾ ಸಪ್ತಶತಿ, ರುದ್ರಾಭಿಷೇಕ, ರಾಮರಕ್ಷಾ ಸ್ತೋತ್ರ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ, ಸುಂದರಕಾಂಡ ಪಾರಾಯಣ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ರಾಮಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಗರ್ಭಗುಡಿಯ ನಿರ್ಮಾಣ ಕಾರ್ಯ 2023ರ ಡಿಸೆಂಬರ್ ನೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದೆ.
#WATCH | Uttar Pradesh Chief Minister Yogi Adityanath pours cement on the stones during the foundation stone laying ceremony of Ram Mandir’s Garbhagriha in Ayodhya. pic.twitter.com/XfONb0sYCs
— ANI UP/Uttarakhand (@ANINewsUP) June 1, 2022
ಗರ್ಭಗೃಹ ನಿರ್ಮಾಣಕ್ಕೆ ರಾಜಸ್ಥಾನದ ಮಕ್ರನಾ ಪರ್ವತದ ಅಮೃತಶಿಲೆಯನ್ನು ಬಳಸಿಕೊಳ್ಳಲಾಗುತ್ತದೆ. ಒಟ್ಟು 13,300 ಕ್ಯೂಬಿಕ್ ಅಡಿಗಳಷ್ಟು ಶಿಲೆಗಳು ಇಲ್ಲಿ ಬಳಕೆಯಾಗಲಿವೆ. ಇವನ್ನೆಲ್ಲ ಸುಂದರ ಕೆತ್ತನೆಗಳಿಂದ ಅಲಂಕರಿಸಲಾಗಿದೆ. ಇಡೀ ಶ್ರೀರಾಮ ದೇಗುಲ ನಿರ್ಮಾಣಕ್ಕೆ 8ರಿಂದ 9 ಲಕ್ಷ ಕ್ಯೂಬಿಕ್ ಅಡಿಗಳಷ್ಟು ಮರಳಗಲ್ಲು, 6.37 ಲಕ್ಷ ಗ್ರಾನೈಟ್, 4.70 ಲಕ್ಷ ಕ್ಯೂಬಿಕ್ ಅಡಿಗಳಷ್ಟು ಗುಲಾಬಿ ಮರಳಗಲ್ಲನ್ನು ಬಳಸಿಕೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ