ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಹೆಚ್ ಡಿಕೆ ಖಂಡನೆ
ಬಿಜೆಪಿಯದ್ದು ಏಕಭಾಷೆ ಮೆರೆಸುವ ಹುನ್ನಾರ
Team Udayavani, Sep 28, 2022, 9:41 PM IST
ಬೆಂಗಳೂರು: ಮೈಸೂರು ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವ ರಾಜ್ಯ ಬಿಜೆಪಿ ಸರಕಾರ ಮತ್ತು ದಸರಾ ಸಮಿತಿಯ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಜತೆಗೆ ಮಾಧ್ಯಮ ಹೇಳಿಕೆಯನ್ನೂ ನೀಡಿ ಸರಕಾರವನ್ನು ಖಂಡಿಸಿದ್ದಾರೆ.ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ.ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ ಹಾಗೂ ಕರಾವಳಿಯಲ್ಲಿ ಅನೇಕರ ನಿತ್ಯನುಡಿ. ಕೇವಲ ಒಂದು ಸಮುದಾಯದವರು ಮಾತನಾಡುತ್ತಾರೆ ಎನ್ನುವ ಕಾರಣಕ್ಕೆ ಬ್ಯಾರಿಯನ್ನು ಬೇಡವೆನ್ನುವುದು ತಪ್ಪು. ರಾಜ್ಯ ಬಿಜೆಪಿ ಸರಕಾರದ್ದು ಏಕಪಕ್ಷೀಯ ನಡೆ ಎಂದಿದ್ದಾರೆ.
ಈ ವರ್ಷದ ದಸರಾ ಕವಿಗೋಷ್ಠಿಯಲ್ಲಿ ಕನ್ನಡದೊಂದಿಗೆ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಭಾಷೆಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ರಾಜ್ಯ ಬಿಜೆಪಿ ಸರಕಾರದ ಸಂಕುಚಿತ ಮನೋಭಾವಕ್ಕೆ ಸಾಕ್ಷಿ ಎಂದು ಅವರು ಟೀಕಿಸಿದ್ದಾರೆ.
ಏಕಭಾಷೆಯನ್ನು ಮೆರೆಸುವ ಬಿಜೆಪಿಗೆ ಈ ನೆಲದ ತಾಯಿಭಾಷೆ ಕನ್ನಡವೂ ಸೇರಿ ಇತರೆ ಎಲ್ಲಾ ಉಪಭಾಷೆಗಳನ್ನು ಅಳಿಸಿಹಾಕಬೇಕೆಂಬ ಕೆಟ್ಟ ಮನಃಸ್ಥಿತಿ ಇರುವಂತಿದೆ. ಇದು ಖಂಡಿತಾ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಬ್ಯಾರಿ ಭಾಷೆ ಮಾತಾಡುತ್ತಾರೆ. 2007ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬ್ಯಾರಿ ಭಾಷಿಗರ ಬಹುಕಾಲದ ಬೇಡಿಕೆ ಆಗಿದ್ದ ʼಬ್ಯಾರಿ ಸಾಹಿತ್ಯ ಅಕಾಡೆಮಿʼ ಸ್ಥಾಪನೆಗೆ ಅನುಮೋದನೆ ನೀಡಿದ್ದೆ. ಬ್ಯಾರಿ ಅಕಾಡೆಮಿಯ ಮೂಲಕ ಅತ್ಯುತ್ತಮ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠವನ್ನೂ ಸ್ಥಾಪಿಸಲಾಗಿದೆ. ವಿಶೇಷವೆಂದರೆ, ಬ್ಯಾರಿ ಭಾಷಿಗರು ಕನ್ನಡ ಲಿಪಿಯನ್ನೇ ಬಳಸಿ ಅತ್ಯುತ್ತಮ ಕೃತಿಗಳನ್ನು ರಚಿಸಿದ್ದು, ಅವುಗಳಲ್ಲಿ ಕೆಲ ಕೃತಿಗಳು ಕನ್ನಡಕ್ಕೂ ಅನುವಾದಿಸಲ್ಪಟ್ಟಿವೆ.ವಚನ ಸಾಹಿತ್ಯ ಸೇರಿ ಅನೇಕ ಕನ್ನಡದ ಅಮೂಲ್ಯ ಕೃತಿಗಳು ಬ್ಯಾರಿಗೂ ಅನುವಾದಗೊಂಡಿವೆ. ಕನ್ನಡ ನೆಲದಲ್ಲಿ ಕನ್ನಡ ಲಿಪಿಯೊಂದಿಗೆ ಸಾಮರಸ್ಯದ ಭಾಷೆಯಾಗಿ ಬೆರೆತಿರುವ ಬ್ಯಾರಿ ಭಾಷೆಗೆ ಈ ವರ್ಷ ದಸರಾ ಕವಿಗೋಷ್ಠಿಯಲ್ಲಿ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ. ರಾಜ್ಯ ಬಿಜೆಪಿ ಸರಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?