ರಾಮದಾಸ್, ಸಿಂಹ ಕೋಲ್ಡ್ ವಾರ್ : ಮೈಸೂರು ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ
ವಿಧಾನಸೌಧದ ವಾಸ್ತು ಸರಿ ಇಲ್ಲವೇ ?
Team Udayavani, Jan 27, 2022, 4:55 PM IST
ಮೈಸೂರು : ಸಂಸದ ಪ್ರತಾಪ್ಸಿಂಹ ಮತ್ತು ಶಾಸಕ ಎಸ್.ಎ.ರಾಮದಾಸ್ ನಡುವೆ ಶೀತಲ ಸಮರ ಮುಂದುವರೆದಿದೆ. ಮನೆಮನೆಗೆ ಗ್ಯಾಸ್ ಸಂಪರ್ಕ ಯೋಜನೆಗೆ ಅನುಮತಿ ನೀಡದಂತೆ ಶಾಸಕ ರಾಮದಾಸ್ ಪತ್ರ ಬರೆದಿರುವುದಕ್ಕೆ ಪ್ರತಾಪ ಸಿಂಹ ಕೆಂಡಾಮಂಡಲರಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ರಾಮದಾಸ್ ಮೋದಿಗಿಂತ ಸೀನಿಯರ್.ಅವರಿಗಿಂತ ಬುದ್ದಿವಂತರು ಜ್ಞಾನಿಗಳು.ಕೇವಲ ಬ್ಯಾನರ್ ಅಲ್ಲಿ ಮೋದಿ ಪೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗುವುದಿಲ್ಲ.ಮೋದಿ ಯೋಜನೆಗಳನ್ನು ವಿರೋಧಿಸಿದರೆ ಜನ ಪಾಠ ಕಲಿಸುತ್ತಾರೆ ಎಂದರು.
ಯೋಜನೆಯನ್ನು ಕಾಂಗ್ರೆಸ್ ಜೆಡಿಎಸ್ ಶಾಸಕರು ವಿರೋಧಿಸಿಲ್ಲ. ನಮ್ಮದೇ ಪಕ್ಷದ ಶಾಸಕರು ವಿರೋಧಿಸಿದ್ದಾರೆ. ಅವರನ್ನು ತಾಯಿ ಚಾಮುಂಡೇಶ್ವರಿ, ಮೈಸೂರಿನ ಜನ ನೋಡಿಕೊಳ್ಳುತ್ತಾರೆ. ಈ ರೀತಿ ಚಿಲ್ಲರೆ ರಾಜಕಾರಣ ಮಾಡಬೇಡಿ. ಇದ್ಯಾವುದಕ್ಕೂ ನಾನು ಕೇರ್ ಮಾಡುವುದಿಲ್ಲ ಎಂದಿದ್ದಾರೆ.
ಕೆ.ಆರ್.ಕ್ಷೇತ್ರದ ಕಸವನ್ನ ಎತ್ತಿಸೋದು ನಾನೆ.ಈ ಯೋಜನೆಯನ್ನೂ ನಾನೆ ಪೂರ್ಣ ಮಾಡುತ್ತೇನೆ. ಯಾವುದಕ್ಕೂ ನಾನು ಕೇರ್ ಮಾಡುವುದಿಲ್ಲ. ಎಂದು ಶಾಸಕ ರಾಮದಾಸ್ ಅವರಿಗೆ ಪ್ರತಾಪ್ಸಿಂಹ ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ವಾಸ್ತು ಸರಿ ಇಲ್ಲ!
ಸ್ಥಳೀಯರಿಗೆ ಸಚಿವ ಸ್ಥಾನ ನೀಡಲು ದನಿಗೂಡಿಸದ ಆರೋಪಕ್ಕೆ ಪ್ರತಿಕ್ರಿಯಿಸಿದ ಸಂಸದ ಸಿಂಹ, ನಾನು ಈಗಾಗಲೇ ಹೇಳಿರುವಂತೆ ವಿಧಾನಸೌಧದ ವಾಸ್ತು ಸರಿ ಇಲ್ಲ.ಗೆದ್ದ 224 ಮಂದಿ ಶಾಸಕರೆಲ್ಲಾ ನಾನು ಮಂತ್ರಿ ಆಗ್ಬೇಕು ಅಂತ ಬಯಸ್ತಾರೆ. ಆದರೆ ಕೇಂದ್ರ, ರಾಜ್ಯ ನಾಯಕರು ತೀರ್ಮಾನ ಮಾಡಿ ಮಂತ್ರಿ ಮಾಡುತ್ತಾರೆ. ಸ್ಥಳೀಯರಿಗೆ ಸಚಿವ ಸ್ಥಾನ ನೀಡಬೇಕಾ ಬೇಡವ ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?