ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!
ಕ್ಷುಲ್ಲಕ ಕಾರಣಕ್ಕೆ ಗುರುಗ್ರಾಮದಲ್ಲಿ ನಡೆದ ಬೆಚ್ಚಿ ಬೀಳಿಸುವ ಘಟನೆ
Team Udayavani, Mar 30, 2023, 12:54 PM IST
ಗುರುಗ್ರಾಮ: ಕಚೇರಿಯಲ್ಲಿ ಕುರ್ಚಿ ವಿಚಾರವಾಗಿ ನಡೆದ ವಾದ ವಿವಾದದ ಹಿನ್ನೆಲೆಯಲ್ಲಿ ಹಣಕಾಸು ಸಂಸ್ಥೆಯೊಂದರ ಉದ್ಯೋಗಿಯೊಬ್ಬರಿಗೆ ಆತನ ಸಹೋದ್ಯೋಗಿಯೇ ಗುಂಡು ಹಾರಿಸಿರುವ ಘಟನೆ ಇಲ್ಲಿನ ರಾಮದಾ ಹೋಟೆಲ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಗಂಭೀರವಾಗಿ ಗಾಯಗೊಂಡಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬುಧವಾರ ತಿಳಿಸಿದ್ದು, ಹರ್ಯಾಣದ ಹಿಸಾರ್ ಮೂಲದ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ದಾಳಿಗೊಳಗಾದ ವ್ಯಕ್ತಿಯನ್ನು ಗುರುಗ್ರಾಮ್ನ ಸೆಕ್ಟರ್ 9 ರ ಫಿರೋಜ್ ಗಾಂಧಿ ಕಾಲೋನಿ ನಿವಾಸಿ ವಿಶಾಲ್ (23) ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ವಿಶಾಲ್ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ವಿಶಾಲ್ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು, ಸಹೋದರನ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಕಚೇರಿಯಲ್ಲಿ ಕುರ್ಚಿ ವಿಚಾರವಾಗಿ ತನ್ನ ಸಹೋದ್ಯೋಗಿ ಅಮನ್ ಜಂಗ್ರಾ ಅವರೊಂದಿಗೆ ವಾಗ್ವಾದ ನಡೆಸಿರುವುದಾಗಿ ವಿಶಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬುಧವಾರ, ಅವರು ಅದೇ ವಿಷಯದ ಬಗ್ಗೆ ಮತ್ತೆ ವಾಗ್ವಾದ ನಡೆಸಿದರು ಮತ್ತು ನಂತರ ಅವರು ಕಚೇರಿಯಿಂದ ಹೊರನಡೆದರು ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಮನ್ ಹಿಂದಿನಿಂದ ಬಂದು ಪಿಸ್ತೂಲ್ ತೆಗೆದುಕೊಂಡು ತನ್ನ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವಿಶಾಲ್ ಅವರು ತಿಳಿಸಿದ್ದಾರೆ.
ಆರೋಪಿಯನ್ನು ಗುರುತಿಸಲಾಗಿದೆ ಮತ್ತು ನಾವು ಅವನನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸಲಾಗುವುದು ಎಂದು ಪೂರ್ವ ವಿಭಾಗದ ಡಿಸಿಪಿ ವೀರೇಂದ್ರ ವಿಜ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ