ಢಿಕ್ಕಿ: ಗಾಯಾಳು ಅಪರಿಚಿತ ವ್ಯಕ್ತಿ ಸಾವು
Team Udayavani, Jun 10, 2023, 5:29 AM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಯುನಿಟಿ ಹಾಲ್ ಬಳಿ ಟೋಯಿಂಗ್ ವಾಹನ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ವೃದ್ಧರೋರ್ವರು ಚಿಕಿತ್ಸೆ ಫಲಕಾರಿಯಾಗದೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಂಗಳೂರು ಕಡೆಯಿಂದ ತಲಪಾಡಿ ಕಡೆ ಹೋಗುವ ಹೆದ್ದಾರಿಯಲ್ಲಿ ವೃದ್ಧರೋರ್ವರು ಕೈಯಲ್ಲಿ ಚೀಲ ಹಿಡಿದುಕೊಂಡು ರಸ್ತೆಯ ಬಲಭಾಗದ ಡಿವೈಡರ್ ಕಡೆಗೆ ಹೋಗುತ್ತಿದ್ದಾಗ ಮಂಗಳೂರಿನಿಂದ ಅತೀ ವೇಗವಾಗಿ ತೊಕ್ಕೊಟ್ಟು ಕಡೆ ಸಂಚರಿಸುತ್ತಿದ್ದ ಟೋಯಿಂಗ್ ವಾಹನ ಢಿಕ್ಕಿ ಹೊಡದು ಗಂಭೀರ ಗಾಯಗೊಂಡಿದ್ದರು.
ಟೋಯಿಂಗ್ ಚಾಲಕ ಶಿವರಾಜ್ ಆಳ್ವ ಗಾಯಗೊಂಡಿದ್ದ ವ್ಯಕ್ತಿಯನ್ನು ಸಹಾರ ಆಸ್ಪತ್ರೆಗೆ ರಿಕ್ಷಾದಲ್ಲಿ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು 60 ವಯಸ್ಸಿನ ಈ ವ್ಯಕ್ತಿಯ ಕುತ್ತಿಗೆ ಮತ್ತು ಸೊಂಟದ ಮೇಲೆ ಕಪ್ಪು ಎಳ್ಳು ಮಚ್ಚೆ ಇದೆ. ಕೈಯಲ್ಲಿ ಮುರುಗಾ ಚಿತ್ರದ ಹಚ್ಚೆ ಹಾಕಿಸಿಕೊಂಡಿದ್ದು, ಮೃತದೇಹ ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿದ್ದು, ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ