ಟೂರಿಸಂ, ಮೀನುಗಾರಿಕೆ, ಬಂದರು ಅಭಿವೃದ್ಧಿಗೆ ಬದ್ಧ- ಸಚಿವ ಮಂಕಾಳ ವೈದ್ಯ

ಬಂದರುಗಳ ಸಮ್ಮೇಳನ ಸಮಾಪನ

Team Udayavani, Jul 15, 2023, 7:39 AM IST

MANKAL VAIDYA IMP

ಮಂಗಳೂರು: ಕರಾವಳಿಯಲ್ಲಿನ ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ಬಂದರುಗಳ ಅಭಿವೃದ್ಧಿ ಈ ಭಾಗದ ಪ್ರಗತಿಗೆ ಅತ್ಯವಶ್ಯಕ, ಅದಕ್ಕಾಗಿ ಯಾವುದೇ ರೀತಿಯ ಸಹಕಾರ ನೀಡಲು ಸರಕಾರ ಸಿದ್ಧವಿದೆ, ಉದ್ಯಮ ವಲಯದಿಂದಲೂ ಅದೇ ರೀತಿಯ ಪ್ರತಿಸ್ಪಂದನ ಬೇಕು ಎಂದು ರಾಜ್ಯ ಬಂದರು, ಮೀನುಗಾರಿಕೆ ಖಾತೆ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ.

ಕಾನ್ಫಿಡರೇಶನ್‌ ಆಫ್‌ ಇಂಡಿಯನ್‌ ಇಂಡಸ್ಟ್ರಿ (ಸಿಐಐ) ವತಿ ಯಿಂದ ಮಂಗಳೂರಿನಲ್ಲಿ ಶುಕ್ರವಾರ ಹಮ್ಮಿ ಕೊಳ್ಳಲಾದ “ಬಂದರು- ಭಾರತದ ಆರ್ಥಿಕತೆ ಮತ್ತು ಆತ್ಮನಿರ್ಭರ ಭಾರತದ ಬೆನ್ನೆಲುಬು’ ಪರಿಕಲ್ಪನೆಯಲ್ಲಿ ನಡೆದ “ಸಿಐಐ ಕರ್ನಾಟಕ ಬಂದರು ಗಳ ಸಮ್ಮೇಳನ-2023’ರ ಸಮಾ ರೋಪದಲ್ಲಿ ಅವರು ಮಾತನಾಡಿ ಈ ಮೂರೂ ಕ್ಷೇತ್ರಗಳ ಅಭಿವೃದ್ಧಿಯಿಂದ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆ, ಇವುಗಳ ಅಭಿವೃದ್ಧಿ ಪೂರಕವಾಗಿ ಆಗಬೇಕು, ಕರಾವಳಿ ಅಭಿವೃದ್ಧಿಗೆ ಏನೇನು ಆಗಬೇಕೋ ಅದಕ್ಕೆ ನೆರವಾಗುವಂತೆ ಸಿಎಂ ಕೂಡ ಸೂಚನೆ ನೀಡಿದ್ದಾರೆ ಎಂದರು.

ಬಡವರಿಗೂ ಸಿಗಲಿ ಫಲ!
ಇದೇ ವೇಳೆ ಉದ್ಯಮಿಗಳ ಜತೆ ಸಂವಾದದ ಸಂದರ್ಭ ಮಾತನಾಡಿದ ವೈದ್ಯ ಅವರು, 400 ಕೋಟಿ ರೂ.ನಷ್ಟು ಮೊತ್ತದ ಡೀಸೆಲ್‌ ಸಬ್ಸಿಡಿ ಬಹುತೇಕ ದೊಡ್ಡ ದೊಡ್ಡ ಬೋಟ್‌ನವರ ಪಾಲಾಗುತ್ತದೆ, ಅದು ಬಡ ಮೀನುಗಾರರಿಗೂ ಸಿಗುವಂತಾಗಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ವಿಳಂಬಿಸಿದರೆ ಕಪ್ಪು ಪಟ್ಟಿಗೆ
ಬಂದರು, ಮೀನುಗಾರಿಕಾ ಇಲಾಖೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಇನ್ನು ವಿಳಂಬ ವಾಗಬಾರದು, ಹಾಗಾಗಿ ನಿಗದಿತ ಸಮಯದೊಳಗೆ ಮುಗಿಸದಿದ್ದರೆ ಟೆಂಡರ್‌ ರದ್ದುಗೊಳಿಸಿ, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ನವಮಂಗಳೂರು ಬಂದರು ಮಂಡಳಿ ಉಪಾಧ್ಯಕ್ಷ ಕೆ.ಜಿ.ನಾಥ್‌, ಸಿಐಐ ಕರ್ನಾಟಕ ಇದರ ಸಂಚಾಲಕ ಪವನ್‌ ಕುಮಾರ್‌ ಸಿಂಗ್‌, ಉಪನಿರ್ದೇಶಕ ಸೋಲೊಮನ್‌, ಸಿಐಐ ಮಂಗಳೂರು ಅಧ್ಯಕ್ಷ ಪ್ರವೀಣ್‌ ಕುಮಾರ್‌ ಕಲಾºವಿ ಉಪ ಸ್ಥಿತರಿದ್ದರು. ಸಿಐಐ ಮಂಗಳೂರು ಮಾಜಿ ಅಧ್ಯಕ್ಷ ಗೌರವ್‌ ಹೆಗ್ಡೆ ನಿರೂಪಿಸಿದರು. ಉಪಾಧ್ಯಕ್ಷ ಅಜಿತ್‌ ಕಾಮತ್‌ ವಂದಿಸಿದರು.

ಸಿಆರ್‌ಝಡ್‌ ಸಮಸ್ಯೆ
ಸಿಆರ್‌ಝಡ್‌, ಅರಣ್ಯ ಇಲಾಖೆ ಇತ್ಯಾದಿಗಳ ತೊಡಕಿನಿಂದಾಗಿ ಸಾಗರಮಾಲಾದ 1 ಸಾವಿರ ಕೋಟಿ ರೂ.ಗಳ 26ರಷ್ಟು ಯೋಜನೆಗಳು ಪ್ರಗತಿ ಕಾಣುತ್ತಿಲ್ಲ. ಸಿಆರ್‌ಝಡ್‌ನಿಂದ ಹಲವು ಕ್ಲಿಯರೆನ್ಸ್‌ 30 ದಿನದೊಳಗೆ ಆಗಬೇಕಿರುವುದು 2017 ರಿಂದೀಚೆಗೆ ಆಗಿಲ್ಲ. ನಾನು ಸಚಿವನಾದೊಡನೆಯೇ ಸಭೆ ಕರೆದು, ಕ್ಲಿಯರೆನ್ಸ್‌ ನೀಡಲು ಸೂಚಿಸಿದ್ದೇನೆ ಎಂದರು.
ಒಂದು ವೇಳೆ ಸಾಗರಮಾಲಾದ 1000 ಕೋಟಿ ರೂ.ನ ಯೋಜನೆಗಳು ಮುಂದೆ ಹೋಗಿದ್ದರೆ ಮತ್ತಷ್ಟು ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬರುತ್ತಿತ್ತು ಎಂದ ಅವರು ಶಿರಾಡಿ ಘಾಟಿ ರಸ್ತೆ ಸಂಪರ್ಕ ಇನ್ನೊಂದು ವರ್ಷದಲ್ಲಿ ಸುಧಾರಣೆಯಾಗುವ ಆಶಾಭಾವ ಇದೆ, ಹಾಗಾಗಿ ಬಂದರಿಗೆ ಬರುವ ಸರಕಿನ ಪ್ರಮಾಣ ಹೆಚ್ಚಬಹುದು ಎಂದರು.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.