
ಬಿಜೆಪಿ ರಾಷ್ಟ್ರೀಯ ಪಕ್ಷ,ಚುನಾವಣಾ ಟಿಕೆಟ್ಗಾಗಿ ಪೈಪೋಟಿ ಸಹಜ: ಸಿಎಂ ಬೊಮ್ಮಾಯಿ
‘ಜನಸಂಕಲ್ಪ ಯಾತ್ರೆ’ ಮುಂದಿನ ದಿನಗಳಲ್ಲಿ ‘ವಿಜಯ ಸಂಕಲ್ಪ ಯಾತ್ರೆ'ಯಾಗಲಿದೆ
Team Udayavani, Dec 7, 2022, 5:31 PM IST

ತುಮಕೂರು : 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಸ್ಪರ್ಧಿಸಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಹಲವಾರು ಆಕಾಂಕ್ಷಿಗಳಿದ್ದು, ಚುನಾವಣಾ ಟಿಕೆಟ್ಗಾಗಿ ಪೈಪೋಟಿ ಇದೆ ಮತ್ತು ರಾಷ್ಟ್ರೀಯ ಪಕ್ಷವಾಗಿ ಎಲ್ಲವೂ ಸಮತೋಲನದಲ್ಲಿರುತ್ತದೆ.ಗೆಲುವಿನ ವಿಶ್ವಾಸ ಹೊಂದಿರುವ ಪಕ್ಷಕ್ಕೆ ಇದು ಸಹಜ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.
ರಾಜ್ಯಾದ್ಯಂತ ನಡೆಯುತ್ತಿರುವ ‘ಜನಸಂಕಲ್ಪ ಯಾತ್ರೆ’ಗೆ ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ‘ವಿಜಯ ಸಂಕಲ್ಪ ಯಾತ್ರೆ’ಯಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.
“ನಾವು ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ, ಕೆಲವು ಕರಾವಳಿ ಜಿಲ್ಲೆಗಳು ಮತ್ತು ಬೆಳಗಾವಿ ಪ್ರದೇಶಗಳಲ್ಲಿ ಪ್ರವಾಸ ಮಾಡಿದ್ದೇವೆ, ನಮಗೆ ಭಾರಿ ಪ್ರತಿಕ್ರಿಯೆ ಸಿಗುತ್ತಿದೆ. ಸಾರ್ವಜನಿಕ ಬೆಂಬಲವನ್ನು ನೋಡಿದರೆ, ಇದು ನಮ್ಮ ನಿರೀಕ್ಷೆಗಳನ್ನು ಮೀರಿದೆ. ಮುಂದಿನ ದಿನಗಳಲ್ಲಿ ಈ ಜನಸಂಕಲ್ಪ ಯಾತ್ರೆ ವಿಜಯ ಸಂಕಲ್ಪವಾಗಿ ಪರಿವರ್ತನೆಯಾಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ ಹೇಳಿದರು.
ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿ ಗದ್ದಲದ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿರುವ ಪಕ್ಷದಲ್ಲಿ ಸ್ಪರ್ಧೆ ಸಹಜ, ಆದರೆ ನಮ್ಮದು ರಾಷ್ಟ್ರೀಯ ಪಕ್ಷವಾದ್ದರಿಂದ. ಎಲ್ಲವನ್ನೂ ಸರಿದೂಗಿಸಿಕೊಂಡು ಗೆಲುವಿನತ್ತ ಕೆಲಸ ಮಾಡುತ್ತೇವೆ ಎಂದರು.
ಎಕ್ಸಿಟ್ ಪೋಲ್ಗಳು ಗುಜರಾತ್ನಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಪರವಾಗಿರುವುದರೊಂದಿಗೆ, ಕರ್ನಾಟಕದಲ್ಲಿಯೂ “ಆಡಳಿತ ಪರ ಜನಾದೇಶ” ಸಾಧ್ಯತೆಯಿದೆ ಎಂದು ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದರು.
ಬಿಜೆಪಿಯು ಅಕ್ಟೋಬರ್ನಲ್ಲಿ ರಾಯಚೂರಿನಿಂದ ‘ಜನಸಂಕಲ್ಪ ಯಾತ್ರೆ’ಯನ್ನು ಪ್ರಾರಂಭಿಸಿತ್ತು. 2023 ರ ಏಪ್ರಿಲ್-ಮೇ ನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, 224 ಸ್ಥಾನಗಳಲ್ಲಿ ಪಕ್ಷ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿ ಯಾತ್ರೆ ನಡೆಸುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಸಲ್ಮಾನ್ ಖಾನ್ ಗೆ ಸಿನಿಮಾ ಆಫರ್ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್ ಮಾಡ್ತಾರ ಮಿ.ಪರ್ಫೆಕ್ಟ್?

ಜಾನಪದ ಕಲೆಗೆ ವಿಶೇಷ ಒತ್ತು ಅಗತ್ಯ