ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ 24 ತಾಸು ಅಹೋರಾತ್ರಿ ಧರಣಿ: ಡಿ.ಕೆ. ಶಿವಕುಮಾರ್

ಏನೇನು ಬಿಚ್ಚಿದ್ದಾರೆ ಈಗಾಗಲೇ ನೋಡಿದ್ದಾರಲ್ಲ: ಜಾರಕಿಹೊಳಿಗೆ ತಿರುಗೇಟು

Team Udayavani, Apr 14, 2022, 5:17 PM IST

1-asdasd

ಬೆಂಗಳೂರು: ‘ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಾನು, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಬೆಂಗಳೂರಿನ ಶಾಸಕರು ವಿಧಾನಸೌಧ ಮತ್ತು ಹೈಕೋರ್ಟ್ ಮುಂಭಾಗದಲ್ಲಿ 24 ತಾಸುಗಳ ಕಾಲ ಅಹೋರಾತ್ರಿ ಧರಣಿ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸಿಎಂ ನಿವಾಸಕ್ಕೆ ಘೇರಾವ್ ಗೆ ಯತ್ನಿಸಿ, ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಕಾಂಗ್ರೆಸ್ ನಾಯಕರು ವಿಧಾನಸೌಧದ ಮುಂದೆ ಪ್ರತಿಭಟನೆ ಆರಂಭಿಸಿದ್ದು, ತಮ್ಮ ಹೋರಾಟದ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ ಶಿವಕುಮಾರ್, ನಾಳೆಯಿಂದ ಆರಂಭವಾಗಬೇಕಿದ್ದ ಜಿಲ್ಲಾವಾರು ಪ್ರತಿಭಟನೆ ಒಂದು ದಿನ ಮುಂದೂಡಲಾಗಿದ್ದು, ಏಪ್ರಿಲ್ 16, ಶನಿವಾರದಿಂದ ಆರಂಭವಾಗಲಿದೆ. ಮುಂದಿನ ಹೋರಾಟದ ಬಗ್ಗೆ ನಂತರ ಮಾಹಿತಿ ನೀಡುತ್ತೇವೆ’ ಎಂದರು.

‘ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿಗಳು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಯವರು ಈ ಭ್ರಷ್ಟಾಚಾರ ಮುಚ್ಚಿಹಾಕಲು ಹುನ್ನಾರ ಮಾಡುತ್ತಿದ್ದು, ಇಂದು ನಾವು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಾಗ ಪೊಲೀಸರು ನಮ್ಮನ್ನು ಬಂಧಿಸಿದರು. ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂದರು.

ಮುಖ್ಯಮಂತ್ರಿಗಳು ಭ್ರಷ್ಟರನ್ನು ರಕ್ಷಣೆ ಮಾಡಿ ಭ್ರಷ್ಟರ ನಾಯಕರಂತೆ ವಾದ ಮಂಡಿಸುತ್ತಿದ್ದಾರೆ. ಇದು ಅವರ ಸ್ಥಾನಕ್ಕೆ ಗೌರವ ತರುವುದಿಲ್ಲ. ನಾವು ನಮ್ಮ ಹೋರಾಟ ಮುಂದುವರಿಸುತ್ತೇವೆ. ಇಂದು ನಾವು 24 ಗಂಟೆಗಳ ಹಗಲು-ರಾತ್ರಿ ಧರಣಿ ಹಮ್ಮಿಕೊಂಡಿದ್ದು, ಶಾಸಕಾಂಗ ಹಾಗೂ ನ್ಯಾಯಾಂಗದ ಬಾಗಿಲಲ್ಲಿ ನಿಂತು ನ್ಯಾಯ ಕೇಳುತ್ತಿದ್ದೇವೆ. ನ್ಯಾಯ ಸಿಗಬೇಕು. ಈ ಸರ್ಕಾರ ಭ್ರಷ್ಟ ಸರ್ಕಾರ. ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಅವನಿಂದಲೇ 40% ಕಮಿಷನ್ ಸುಲಿಗೆ ಮಾಡುತ್ತಿರುವಾಗ ಬೇರೆಯವರಿಂದ ಹೇಗೆ ಸುಲಿಗೆ ಮಾಡುತ್ತಿರಬಹುದು. ಸಂತೋಷ್ ಪಾಟೀಲ್ ಅವರ ಪತ್ನಿ ಹಾಗೂ ತಾಯಿ ನಮಗೆ ಎಲ್ಲ ವಿಚಾರ ತಿಳಿಸಿದ್ದಾರೆ. ಮಾಧ್ಯಮಗಳ ಮುಂದೆ ಸತ್ಯಾಂಶ ಬಿಚ್ಚಿಟ್ಟಿದ್ದಾರೆ. ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಅವರಿಗೆ ಕಪ್ಪು ಮಸಿ ಬಳಿಯಲು ಪ್ರಯತ್ನಿಸುತ್ತಿದೆ ಎಂದು ಕಿಡಿ ಕಾರಿದರು.

ಸಂತೋಷ್ ಪ್ರತಿ ಉಸಿರಿನಲ್ಲೂ ಬಿಜೆಪಿ ಎನ್ನುತ್ತಿದ್ದ, ಆದರೆ ಅದೇ ಬಿಜೆಪಿ ನನ್ನ ಪತಿಯ ಜೀವ ಬಲಿ ಪಡೆದಿದೆ ಎಂದು ಅವರ ಪತ್ನಿ ತಿಳಿಸಿದ್ದಾರೆ. ಸಂತೋಷ್ ಅವರು ನಮ್ಮ ಸಮಾಜದ ಮಹಾನ್ ನಾಯಕ ಎಂದು ಯಡಿಯೂರಪ್ಪನವರು, ಮುಖ್ಯಮಂತ್ರಿಗಳಿಗೆ ಹಾಗೂ ಪ್ರಧಾನಿಗಳಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದರು. ಮುಖ್ಯಮಂತ್ರಿಗಳು ಸಚಿವರ ರಕ್ಷಣೆಗೆ ನಿಂತಿದ್ದಾರೆ. ಆದರೆ ಯಡಿಯೂರಪ್ಪನವರು ಈ ವಿಚಾರದಲ್ಲಿ ಯಾಕೆ ಸುಮ್ಮನಿದ್ದಾರೋ ಗೊತ್ತಿಲ್ಲ. ಇನ್ನು ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದಿದ್ದ ಪ್ರಧಾನಿ ಮೋದಿ ಅವರೇ ಸಂತೋಷ್ ಅವರ ತಾಯಿ ಹಾಗೂ ಪತ್ನಿಯ ಗೋಳು ಕೇಳಿ ಎಂದರು.

ಮುಖ್ಯಮಂತ್ರಿಗಳೇ ನೀವು ಕೂಡ ಅವರ ನೋವು ಕೇಳಬೇಕು. ಸಂತೋಷ್ ಸಹೋದರನ ಭೇಟಿ ಮಾಡಬೇಕು. ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು, ಅವರು ಮಾಡಿರುವ ಕಾಮಗಾರಿ ಬಿಲ್ ಪಾವತಿ ಆಗಬೇಕು. ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ ಸಿಗಬೇಕು, ಅದು ಸಿಗುವವರೆಗೂ ಕಾಂಗ್ರೆಸ್ ಪಕ್ಷ ಖಾಸಗಿ ಕೆಲಸ ನೀಡಲು ಬದ್ಧವಾಗಿದೆ. ಇದು ನಮ್ಮ ಪ್ರತಿಜ್ಞೆ. ನಾವು ಅವರಿಗೆ ಅಲ್ಪ ಸಹಾಯ ಮಾಡಲು 11 ಲಕ್ಷ ಆರ್ಥಿಕ ನೆರವು ನೀಡಲು ಬದ್ಧವಾಗಿದ್ದೇವೆ ಎಂದರು.

ಲಂಚ ಹಾಗೂ ಮಂಚದವರನ್ನು ಪಕ್ಕದಲ್ಲಿ ಇಟ್ಟುಕೊಳ್ಳಲಿ

ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಬೇಕು. ಬಿಜೆಪಿ ಬೇಕಾದರೆ ಅವರಂತಹ ಮುತ್ತುರತ್ನಗಳನ್ನು ತಮ್ಮ ಕಚೇರಿಯಲ್ಲಿ ಇಟ್ಟುಕೊಳ್ಳಲಿ. ಇಂತಹ ಮುತ್ತುರತ್ನಗಳು ನಿಮ್ಮಲ್ಲಿದ್ದರೆನೇ ಒಳ್ಳೆಯದು. ಮಹಿಳೆಯರು ಮೂಗುತಿ ಹಾಗೂ ಓಲೆಯಲ್ಲಿ ಮುತ್ತುರತ್ನಗಳನ್ನು ಇಟ್ಟುಕೊಂಡಂತೆ ಬಿಜೆಪಿ ಲಂಚ ಹಾಗೂ ಮಂಚದವರನ್ನು ಪಕ್ಕದಲ್ಲಿ ಇಟ್ಟುಕೊಳ್ಳಲಿ ಎಂದರು.

ಈಗಾಗಲೇ ನೋಡಿದ್ದಾರಲ್ಲ

ಈ ಪ್ರಕರಣದಲ್ಲಿ ಮಹಾನಾಯಕಿ ಕೈವಾಡ ಸೋಮವಾರ ಬಿಚ್ಚಿಡುತ್ತೇನೆ ಎಂಬ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಅವರು, ‘ಅವರು ಏನುಬೇಕಾದರೂ ಬಿಚ್ಚಿಡಲಿ, ನಾವು ಎಲ್ಲದಕ್ಕೂ ಸಿದ್ಧವಿದ್ದೇವೆ. ಯಾರ್ಯಾರು ಏನೇನು ಬಿಚ್ಚಿದ್ದಾರೆ ಎಂಬುದನ್ನು ಜನ ಈಗಾಗಲೇ ನೋಡಿದ್ದಾರಲ್ಲ’ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.