ಕಾಂಗ್ರೆಸ್ಗೆ ಜನಪರ ಕಾಳಜಿ ಇಲ್ಲ: ನಳಿನ್ ಕುಮಾರ್ ಕಟೀಲು
Team Udayavani, Aug 3, 2022, 10:57 PM IST
ಬೆಂಗಳೂರು: ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಜನರನ್ನು ಮರೆತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಜನ್ಮದಿನ ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪದಿಂದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳು ಮಾಡುವುದರಲ್ಲಿ ಕಾಂಗ್ರೆಸ್ ಎತ್ತಿದ ಕೈ. ಇದೆಲ್ಲವನ್ನೂ ಮರೆತಿರುವ, ಸಮಾಜವಾದಿ ಹಣೆಪಟ್ಟಿ ಕಟ್ಟಿಕೊಂಡಿರುವ ಮಜಾವಾದಿ ಸಿದ್ದರಾಮಯ್ಯ ಅವರು ಸುಮಾರು 75 ಕೋಟಿ ರೂ. ಗಿಂತಲೂ ಹೆಚ್ಚು ಖರ್ಚು ಮಾಡಿ ತಮ್ಮ ಬೆಂಬಲಿಗರಿಂದ ಜನ್ಮದಿನೋತ್ಸವ ಆಚರಿಸಿಕೊಳ್ಳುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಬಿಜೆಪಿ ಸರಕಾರವು ರಾಜ್ಯದ ಜನರ ಸಂಕಷ್ಟ ಮತ್ತು ಕಾನೂನು – ಸುವ್ಯವಸ್ಥೆ ದೃಷ್ಟಿಯಿಂದ ಜನೋತ್ಸವ ಆಚರಣೆಯನ್ನೇ ರದ್ದು ಮಾಡಿತ್ತು. ಆದರೆ ಕಾಂಗ್ರೆಸ್ಸಿಗರ ಒಂದು ಬಣವು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಎಂದು ಬಿಂಬಿಸಲು ಈ ಅದ್ದೂರಿ ಹಾಗೂ ಸಂಭ್ರಮದ ಕಾರ್ಯಕ್ರಮಕ್ಕೆ ದುಂದುವೆಚ್ಚ ಮಾಡಿದೆ. ಆ ಪಕ್ಷಕ್ಕೆ ಜನಪರ ಕಾಳಜಿ ಇಲ್ಲ ಎಂಬುದನ್ನು ಈ ಕಾರ್ಯಕ್ರಮ ಸ್ಪಷ್ಟಪಡಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ