Congress ವಿದ್ಯುತ್‌ ಉಚಿತ: ನಿಗದಿತ ಶುಲ್ಕ ಖಚಿತ!

ಬಳಸಿ, ಬಿಡಿ-ಬಿಲ್‌ ಪಾವತಿ ಮಾತ್ರ ಗ್ಯಾರಂಟಿ

Team Udayavani, May 20, 2023, 7:42 AM IST

power lines

ಬೆಂಗಳೂರು: ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಎಲ್ಲೆಡೆ ವಿದ್ಯುತ್‌ ಬಿಲ್‌ ಪಾವತಿಗೆ ನಿರಾಕರಣೆ ಕೂಗು ಕೇಳಿಬರುತ್ತಿದೆ. ಆದರೆ ಜನರು ವಿದ್ಯುತ್‌ ಬಳಸಿ ಅಥವಾ ಬಿಡಿ; ನಿಗದಿತ ಶುಲ್ಕ ಪಾವತಿಸುವುದು ತಪ್ಪದು!

ಕಾಂಗ್ರೆಸ್‌ ಈಗಾಗಲೇ 5 ಗ್ಯಾರಂಟಿ ಗಳನ್ನು ಘೋಷಿಸಿದ್ದು, ಆ ಪೈಕಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಕೂಡ ಒಂದಾಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ನಡೆಯ ಲಿರುವ ಮೊದಲ ಸಚಿವ ಸಂಪುಟ ಸಭೆ ಯಲ್ಲಿ ಉಚಿತ ವಿದ್ಯುತ್‌ ಘೋಷಣೆ ಯನ್ನು ಅಂಗೀಕರಿಸುವ ಸಾಧ್ಯತೆ ಇದೆ. ಆದರೆ ಸರಕಾರ ವಿದ್ಯುತ್‌ ಉಚಿತ ವಾಗಿ ಕೊಟ್ಟರೂ ಗ್ರಾಹಕರಿಗೆ ನಿಗದಿತ ಶುಲ್ಕದ ರೂಪದಲ್ಲಿ ಬಿಲ್‌ ಪಾವತಿ ಸುವುದರಿಂದ ಮುಕ್ತಿ ಸಿಗುವುದು ಅನುಮಾನ.

ಯಾಕೆಂದರೆ ಪ್ರತೀ ತಿಂಗಳು ಬರುವ ವಿದ್ಯುತ್‌ ಬಿಲ್‌ನಲ್ಲಿ ನಿಗದಿತ ಶುಲ್ಕ ಮತ್ತು ಬಳಕೆ ಶುಲ್ಕ ಎಂಬ 2 ವಿಭಾಗಗಳು ಇರುತ್ತವೆ. ಕಾಂಗ್ರೆಸ್‌ ಹೇಳಿದ್ದು 200 ಯೂನಿಟ್‌ವರೆಗೆ ವಿದ್ಯುತ್‌ ಉಚಿತ ಎಂದಷ್ಟೇ. ಹೀಗಾಗಿ ನಿಗದಿತ ಶುಲ್ಕವನ್ನು ಎಂದಿನಂತೆ ಭರಿಸಬೇಕಾಗುತ್ತದೆ. ಪ್ರಸ್ತುತ ಗೃಹ ಬಳಕೆದಾರರಿಗೆ ಕನಿಷ್ಠ 110 ರಿಂದ ಗರಿಷ್ಠ 210 ರೂ. ನಿಗದಿತ ಶುಲ್ಕ ಇದೆ.

ಇತ್ತೀಚೆಗಿನ ವರ್ಷಗಳಲ್ಲಿ ವಿದ್ಯುತ್‌ ಬಳಕೆ ಶುಲ್ಕಕ್ಕಿಂತ ನಿಗದಿತ ಶುಲ್ಕಕ್ಕೆ ಎಲ್ಲ ವಿದ್ಯುತ್‌ ಸರಬರಾಜು ಕಂಪೆನಿ (ಎಸ್ಕಾಂ)ಗಳು ಒತ್ತು ನೀಡುತ್ತಿವೆ. ಕಳೆದ ಒಂದು ವರ್ಷದ ಅಂತರದಲ್ಲಿ ಎರಡು ಬಾರಿ ವಿದ್ಯುತ್‌ ದರ ಪರಿಷ್ಕರಣೆ ಆಗಿದ್ದು, ಶುಲ್ಕವನ್ನು 2022 ರಲ್ಲಿ ಪ್ರತೀ ಯೂನಿಟ್‌ಗೆ 48 ಪೈಸೆ ಮತ್ತು 2023ರಲ್ಲಿ 70 ಪೈಸೆ ಹೆಚ್ಚಿಸ ಲಾಗಿದೆ. 48 ಪೈಸೆಯಲ್ಲಿ 30 ಪೈಸೆ ಹಾಗೂ 70 ಪೈಸೆಯಲ್ಲಿ 55 ಪೈಸೆ ನಿಗದಿತ ಶುಲ್ಕವಾಗಿದೆ. ಮುಂಬರುವ ದಿನಗಳಲ್ಲೂ ಇದೇ ಮಾದರಿಯನ್ನು ಅನುಸರಿಸುವ ಸಾಧ್ಯತೆಗಳೇ ಹೆಚ್ಚು ಎನ್ನಲಾಗುತ್ತಿದೆ. ಹೀಗಾಗಿ “ಉಚಿತ ವಿದ್ಯುತ್‌ ಗ್ಯಾರಂಟಿ’ಯಿಂದ ಗ್ರಾಹಕರಿಗೆ ನಿರೀಕ್ಷಿತ ಮಟ್ಟದ ಲಾಭ ಸಿಗುವುದು ಅನುಮಾನ ಎಂದು ತಜ್ಞರು ವಿಶ್ಲೇಷಿಸುತ್ತಾರೆ.

ಷರತ್ತುಗಳ ಸುಳಿವು
ಈ ಮಧ್ಯೆ ಷರತ್ತುಗಳ ಸುಳಿವನ್ನು ಕಾಂಗ್ರೆಸ್‌ ನಾಯಕರು ನೀಡಿದ್ದಾರೆ. 200 ಯೂನಿಟ್‌ ದಾಟಿದವರಿಗೆ ಅಂದರೆ, ಉದಾಹರಣೆಗೆ, 201 ಯೂನಿಟ್‌ ಬಳಕೆಯಾಗಿದ್ದರೆ ಪೂರ್ತಿ ಬಿಲ್‌ ಪಾವತಿಸಬೇಕಾಗುತ್ತದೆಯೇ? 250 ಯೂನಿಟ್‌ ಬಳಕೆಯಾಗಿದ್ದರೆ ಕೇವಲ 50 ಯೂನಿಟ್‌ಗೆ ಬಿಲ್‌ ಪಾವತಿಸಿದರೆ ಸಾಕೇ? ಬಿಪಿಎಲ್‌ನವರಿಗೆ ಮಾತ್ರ ಇದು ಅನ್ವಯವೇ? -ಇಂತಹ ಹಲವು ಗೊಂದಲಗಳಿಗೆ ಶನಿವಾರ ತೆರೆಬೀಳುವ ಸಾಧ್ಯತೆ ಇದೆ.

100 ಯೂನಿಟ್‌ಗಿಂತ ಕಡಿಮೆ ಬಳಕೆದಾರರು 1 ಕೋಟಿ
200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಘೋಷಣೆಯಿಂದ ಗ್ರಾಹಕರಿಗೆ ಅನುಕೂಲ ಆಗುವುದಿಲ್ಲ ಎಂದಲ್ಲ; ರಾಜ್ಯದಲ್ಲಿ 1.92 ಕೋಟಿ ಗೃಹ ಬಳಕೆದಾರರಿದ್ದಾರೆ. ಅವರಲ್ಲಿ ಸುಮಾರು ಶೇ. 50ರಷ್ಟು ಅಂದರೆ ಒಂದು ಕೋಟಿ ಗ್ರಾಹಕರು ತಿಂಗಳಿಗೆ 100 ಯೂನಿಟ್‌ಗಿಂತ ಕಡಿಮೆ ಬಳಕೆ ಮಾಡುವವರೇ ಇದ್ದಾರೆ. ಅವರೆಲ್ಲರಿಗೂ ಯೋಜನೆಯಿಂದ ಪ್ರಯೋಜನವಾಗಲಿದೆ. ಆದರೆ ಸರಕಾರ ಯಾವ ರೀತಿಯ ಷರತ್ತುಗಳನ್ನು ವಿಧಿಸುತ್ತದೆ ಎನ್ನುವುದನ್ನು ಕಾದು ನೋಡ ಬೇಕು ಎಂದು ಕೆಇಆರ್‌ಸಿ ಸಲಹಾ ಸಮಿತಿ ಮಾಜಿ ಸದಸ್ಯ ಎಂ.ಜಿ. ಪ್ರಭಾಕರ್‌ ತಿಳಿಸಿದ್ದಾರೆ.

ಅಂಕಿ-ಅಂಶಗಳ ಪ್ರಕಾರ, ಗೃಹಬಳಕೆಗೆ ವಾರ್ಷಿಕ 14,089 ದಶ ಲಕ್ಷ ಯೂನಿಟ್‌ಗೆ ಅನುಮೋದನೆ ನೀಡಲಾ ಗಿದೆ. ಪ್ರತೀ ಯೂನಿಟ್‌ಗೆ 9.12 ರೂ. ವೆಚ್ಚ ಆಗುತ್ತದೆ. 14,089 ದಶ ಲ ಕ್ಷ ಯೂನಿಟ್‌ಗೆ ಲೆಕ್ಕ ಹಾಕಿದರೆ 12,849 ಕೋಟಿ ರೂ. ಆಗುತ್ತದೆ. ಇದರಲ್ಲಿ ಅರ್ಧಕ್ಕರ್ಧ ಗ್ರಾಹಕರು 100 ಯೂನಿಟ್‌ಗಿಂತ ಕಡಿಮೆ ಬಳಸುವವರು ಎಂದಾದರೆ, ಅಂದಾಜು 6,400 ಕೋ. ರೂ. ಆಗುತ್ತದೆ. ಇದರ ಜತೆಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ, ಪಂಪ್‌ಸೆಟ್‌ಗಳಿಗೆ ನೀಡಿದ ವಿದ್ಯುತ್‌ಗೆ ಪ್ರತಿಯಾಗಿ ವಾರ್ಷಿಕ ಸುಮಾರು 14,500 ಕೋ. ರೂ. ಆಗುತ್ತದೆ. ಇದರ ಹಳೆಯ ಬಾಕಿ ಕೂಡ ಸಾವಿರಾರು ಕೋ. ರೂ. ಇದೆ ಎಂದೂ ಹೇಳಿದ್ದಾರೆ.

 ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.