ಬಿಜೆಪಿ ಸೇರುವ 36 ರೌಡಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
Team Udayavani, Dec 7, 2022, 6:20 AM IST
ಬೆಂಗಳೂರು: ಆಡಳಿತಾರೂಢ ಬಿಜೆಪಿಗೆ ಮೊದಲ ಹಂತದಲ್ಲಿ ಈಗಾಗಲೇ 36 ರೌಡಿಶೀಟರ್ಗಳು ಸೇರ್ಪಡೆ ಆಗಿದ್ದು ಇನ್ನೂ 24 ರೌಡಿಗಳ ಸೇರ್ಪಡೆ ಬಾಕಿ ಇದೆ ಎಂದು ಕೆಪಿಸಿಸಿ ವಕ್ತಾರರಾದ ರಮೇಶ್ಬಾಬು, ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಒಟ್ಟು 150 ರೌಡಿಗಳನ್ನು ಸೇರಿಸಿಕೊಳ್ಳಲು ಬಿಜೆಪಿ ಪಟ್ಟಿ ಮಾಡಿದೆ ಎಂದು ದೂರಿದರು. ಬಿಜೆಪಿ ಸೇರಲು ಮುಂದಾಗಿರುವ 60 ರೌಡಿಗಳ ಪಟ್ಟಿ ಬಿಡುಗಡೆ ಮಾಡಿದರು.
ಈಗಾಗಲೇ 36 ರೌಡಿಗಳ ಪೈಕಿ ಸೈಲೆಂಟ್ ಸುನೀಲ್ ಹಾಗೂ 9 ಇತರರು. ವಿಲ್ಸನ್ ಗಾರ್ಡನ್ ನಾಗ ಹಾಗೂ 6 ಇತರರು, ನಾಗಮಂಗಲದ ಫೈಟರ್ ರವಿ ಹಾಗೂ 5 ಇತರರು, ಬೆತ್ತನಗೆರೆ ಶಂಕರ ಹಾಗೂ 8 ಇತರರು, ಈತ ಈಗಾಗಲೇ ಹೆಸರು ಬದಲಾವಣೆ ಮಾಡಿಕೊಂಡು ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಒಬ್ಬ ರೌಡಿ ನಲ್ಲೂರು ಶಂಕರೇಗೌಡ ಎಂದು ಹೆಸರು ಬದಲಾವಣೆ ಮಾಡಿಕೊಂಡು ಸಂಸದ ಪ್ರತಾಪ್ ಸಿಂಹ ಹಾಗೂ ಸಿದ್ದರಾಜು ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಆಗಿದ್ದಾನೆ. ಒಂಟೆ ರೋಹಿತ್ ಹಾಗೂ ಇತರರು, ಕುಣಿಗಲ್ ಗಿರಿ ಈತ ಜೈಲಿನಲ್ಲಿದ್ದು, ಅಲ್ಲಿಂದಲೇ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮಂಜುನಾಥ್ ಅಲಿಯಾಸ್ ಉಪ್ಪಿ, ಸೈತಾನ್ ರವಿ (ಸಿ.ಟಿ ರವಿ) ರೌಡಿ ಶಿಟರ್ ಆಗಿದ್ದಾರೆ. ಮೈಸೂರು ಯುವ ದಸರಾದ ಅಧ್ಯಕ್ಷರು ಸೇರಿದಂತೆ ಮುಂದಿನ ಹಂತದಲ್ಲಿ ಉಳಿದ 24ರೌಡಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ಆರ್ಎಸ್ಎಸ್ ಕಡೆಯಿಂದ ನಿರ್ದೇಶನ: ಈ ಬಗ್ಗೆ ಬಿಜೆಪಿ ಸ್ನೇಹಿತರೊಬ್ಬರನ್ನು ಕೇಳಿದಾಗ ನಮಗೆ ಅಮಿತ್ ಶಾ ಹಾಗೂ ಆರ್ಎಸ್ಎಸ್ ಕಡೆಯಿಂದ ನಿರ್ದೇಶನವಿದೆ. ಈ ವಿಚಾರವಾಗಿ ಗುಜರಾತ್ ಹಾಗೂ ಉತ್ತರ ಪ್ರದೇಶದಲ್ಲಿ ಪ್ರಯೋಗ ಮಾಡಿದ್ದಾರೆ. ಎಲ್ಲಿ ಮತ ಸಿಗುವುದಿಲ್ಲವೋ ಅಲ್ಲಿ ರೌಡಿಗಳನ್ನು ಕಳಿಸಿ ಪ್ರಚಾರ ಮಾಡಿಸಿ ಯಶಸ್ವಿಯಾಗಿದ್ದೇವೆ. ಈಗ ಅದನ್ನು ಕರ್ನಾಟಕದಲ್ಲಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.
ಸಿ.ಟಿ.ರವಿ ಮನೆ ಮೇಲೂ ರೈಡ್ ಆಗಿದೆ: ಸಿ.ಟಿ.ರವಿ ಅವರು ನನ್ನ ಮೇಲೂ ರೌಡಿ ಶೀಟರ್ ಇತ್ತು ಎಂದು ಒಪ್ಪಿಕೊಂಡಿದ್ದಾರೆ. ಸಿ.ಟಿ.ರವಿ ಅವರ ಮೇಲೆ 8 ಜೂನ್ 2012ರಲ್ಲಿ ಐಟಿ ರೈಡ್ ಆಗಿತ್ತು. ಆರ್ ಟಿಐ ಕಾರ್ಯಕರ್ತ ಎ.ಸಿ.ಕುಮಾರ್ ಎಂಬುವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿ, 2004ರಲ್ಲಿ ಚುನಾವಣಾ ಆಯೋಗಕ್ಕೆ ರವಿ ಅವರು ಸಲ್ಲಿಸಿರುವ ಅಫಿಡವಿಟ್ ನಲ್ಲಿ ಒಟ್ಟು ಆಸ್ತಿ 10.1 ಲಕ್ಷ ರೂ.ಹಾಗೂ 1.2 ಲಕ್ಷ ರೂ ವಾರ್ಷಿಕ ಆದಾಯ ಎಂದು ನಮೂದಿಸಲಾಗಿತ್ತು. ಆದರೆ 2012ರ ಅಫಿಡವಿಟ್ ನಲ್ಲಿ ಇವರ ಆದಾಯ 50 ಕೋಟಿ ಘೋಷಣೆ ಮಾಡಿದ್ದಾರೆ ಎಂದು ದೂರು ನೀಡಿದ್ದಾಗ ಐಟಿ ದಾಳಿ ಆಗಿತ್ತು. ಈಗ ನಮ್ಮ ಪ್ರಕಾರ ಸಿ.ಟಿ.ರವಿ ಅವರು ಬೇನಾಮಿ ಹೆಸರಿನಲ್ಲಿ 3 ಸಾವಿರ ಕೋಟಿ ರೂ.ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ