ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ


Team Udayavani, Nov 30, 2021, 10:47 AM IST

5banahatti

ಗಂಗಾವತಿ: ಪ್ರತಿಯೊಬ್ಬರ ಮೂಲ ಊರು ಬೇರೆ ಆಗಿರುತ್ತದೆ ನಾನು ಸಹ ಬೆಳಗಾವಿ ಜಿಲ್ಲೆಯಿಂದ ರಾಯಚೂರು ಜಿಲ್ಲೆಗೆ ವಲಸೆ ಬಂದು ಇಲ್ಲಿಯೇ ನೆಲೆಸಿದ್ದೇನೆ. ಕಾಂಗ್ರೆಸ್ ಪಕ್ಷದವರು ನಾನು ಸ್ಥಳೀಯನಲ್ಲ ಎನ್ನುವ ಅಪಪ್ರಚಾರವನ್ನು ಕೂಡಲೇ ನಿಲ್ಲಿಸುವಂತೆ ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಆಗ್ರಹ ವ್ಯಕ್ತಪಡಿಸಿದರು.

ಅವರು ಮಂಗಳವಾರ ಮಾಜಿ ಸಂಸದ ಎಚ್ ಜಿ ರಾಮುಲು ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಎಚ್ ಜಿ ರಾಮುಲು ಹಾಗೂ ಎಚ್ ಆರ್ ಶ್ರೀನಾಥ್ ಅಖಂಡ ರಾಯಚೂರು ಜಿಲ್ಲೆಯ ಪ್ರಮುಖ ಮುಖಂಡರಾಗಿದ್ದು ಸಮಗ್ರ ಜಿಲ್ಲೆಯ ಅಭಿವೃದ್ಧಿಗಾಗಿ ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸವೆಸಿದ್ದು ಎಂಎಲ್ಸಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ ರಾಯಚೂರು ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯತ್ ನಗರಸಭೆ ಜಿಪಂ ತಾಪಂ ಅಭಿವೃದ್ಧಿಗಾಗಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದು ಹಿರಿಯರಾದ ರಾಮುಲು ಆಶೀರ್ವಾದ ಮಾಡಿದ್ದಾರೆ ಎಂದರು.

ವಿಶ್ವ ಕಂಡ ಅಪ್ರತಿಮ ನಾಯಕ ನರೇಂದ್ರ ಮೋದಿ ಹಾಗೂ ರಾಜ್ಯದ ರೈತ ಗ್ರಾಮೀಣ ಭಾಗದ ಜನರ ಆಶಾಕಿರಣ ಬಿ.ಎಸ್ ಯಡಿಯೂರಪ್ಪ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಮಾಡಿದ ಕಾರ್ಯಗಳನ್ನು ಮೆಚ್ಚಿ ಗ್ರಾಮ ಪಂಚಾಯತ್ ಮತ್ತು ನಗರಸಭೆ ಸದಸ್ಯರು ತಮ್ಮನ್ನು ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ನವರು ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ. ಹಣದ ಆಮಿಷ ಒಡ್ಡಿ ಗ್ರಾಮಪಂಚಾಯತ್ ನಗರಸಭೆಯ ಸದಸ್ಯರ ಮತಗಳನ್ನು ಪಡೆಯುವುದು ಅಸಾಧ್ಯ. ಇದನ್ನು ಕಾಂಗ್ರೆಸ್ ನವರು ಮಾಡುತ್ತಿರುವುದು ಕೀಳು ರಾಜಕಾರಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

ಕಾಂಗ್ರೆಸ್ ಪಕ್ಷದವರು ಜಾತಿಯ ರಾಜಕಾರಣ ಮಾಡುತ್ತಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಗೆ ಪ್ರಧಾನಿ ನರೇಂದ್ರ ಮೋದಿ ಬಿ ಎಸ್ ಯಡಿಯೂರಪ್ಪ ವ್ಯಾಪಕವಾದಂತಹ ಶಕ್ತಿ ತುಂಬಿದ್ದಾರೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಮೂಲಕ ಗ್ರಾಮ ಪಂಚಾಯತ್ ನಗರಸಭೆ ಸದಸ್ಯರು ಜನರ ಮೂಲ ಸೌಕರ್ಯಗಳಿಗೆ ಸ್ಪಂದಿಸುವ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಲಿದೆ. ವಿಧಾನಪರಿಷತ್ ನಲ್ಲಿ ಗ್ರಾಪಂ, ಜಿಪಂ, ತಾಪಂ, ನಗರಸಭೆಗಳಿಗೆ ಇನ್ನಷ್ಟು ಅಧಿಕಾರ ಮತ್ತು ವೈಜ್ಞಾನಿಕ ಸಲಹೆ ಸೂಚನೆಗಳು ಲಭಿಸುವಂತಹ ಕಾರ್ಯವನ್ನು ತಾವು ಮಾಡುವುದಾಗಿ ಹೇಳಿದರು.

ಮಾಜಿ ಸಂಸದ ಎಚ್.ಜಿ. ರಾಮುಲು ಮಾತನಾಡಿ ಸಂವಿಧಾನದ ಆಶಯದಂತೆ ಇದುವರೆಗೂ ಅಧಿಕಾರ ನಡೆಸಿದ ಅವರಿಗೆ ರಾಜಕೀಯ ಶಕ್ತಿ ದೊರಕಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ವಿಶ್ವನಾಥ್ ಬನಹಟ್ಟಿ ಗೆಲುವು ಸಾಧಿಸಿ ಗ್ರಾಪಂ, ಜಿಪಂ, ತಾಪಂ, ನಗರಸಭೆಗಳಿಗೆ ಇನ್ನಷ್ಟು ಶಕ್ತಿ ತುಂಬುವ ಕಾರ್ಯವನ್ನು ಮಾಡಲಿ ಎಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ ಮುಖಂಡರಾದ ವೀರನಗೌಡ, ಜೋಗದ ಲಿಂಗಪ್ಪ ನಾಯ್ಕ ,ಹನುಮಂತ ರಾಯ, ಭಾಗಣ್ಣ ಕಡ್ಲಿ ಸೇರಿದಂತೆ ಅನೇಕ ಮುಖಂಡರಿದ್ದರು.

 

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Former CM Chandrababu Naidu ಅಕ್ರಮ ಬಂಧನ ಖಂಡಿಸಿ ತೆಲುಗು ಭಾಷಿಕರಿಂದ ಪ್ರತಿಭಟನೆ

Former CM Chandrababu Naidu ಬಂಧನ ಖಂಡಿಸಿ ತೆಲುಗು ಭಾಷಿಕರಿಂದ ಪ್ರತಿಭಟನೆ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

1-sadadasd

Panchamasali ಸಮುದಾಯದವರು ಸಿಎಂ ಆದರೂ 2-ಎ ಹೋರಾಟ ನಿಲ್ಲದು

1-aa

Kishkindha ಜಿಲ್ಲೆ ಘೋಷಣೆ ಅಸಾಧ್ಯ,ಆದರೂ ಹೋರಾಟ ಅಗತ್ಯ: ಜನಾರ್ದನ ರೆಡ್ಡಿ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.