ತಾಲಿಬಾನಿಗಳಿಗಿರುವುದು ಮತಾಂಧತೆ; ಕಾಂಗ್ರೆಸ್ ನವರಿಗಿರುವುದು ಮತದ ಅಂಧತೆ: ಸಿ.ಟಿ ರವಿ


Team Udayavani, Jan 2, 2022, 12:38 PM IST

ಸಿ ಟಿ ರವಿ

ಬೆಂಗಳೂರು: ಕಾಂಗ್ರೆಸ್ ನವರು ಗೋಹತ್ಯೆ ನಿಷೇಧ, ಮತಾಂತರ, ದೇವಸ್ಥಾನಗಳಿಗೆ ಸ್ವಾತಂತ್ರ್ಯ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಾಲಿಬಾನಿಗಳಿಗೆ ಇರುವುದು ಮತಾಂಧತೆ ಕಾಂಗ್ರೆಸ್ ನವರಿಗೆ ಇರುವುದು ಮತದ ಅಂಧತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಬಹುಸಂಖ್ಯಾತರ ಭಾವನೆಗಳಿಗೆ ಬೆಲೆ ಕೊಡಬೇಕು ಎನ್ನುವ ಮನಸ್ಥಿತಿ ಇಲ್ಲ. ಅವರು ಯಾವಾಗಲೂ ನಕಾರಾತ್ಮಕವಾಗಿಯೇ ನೋಡುತ್ತಾರೆ. ಬ್ರಿಟಿಷರು ದೇವಾಲಯಗಳ ಆದಾಯದ ಮೇಲೆ ಕಣ್ಣಿಟ್ಟು ಅವುಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡರು. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಆದರೂ ದೇವಸ್ಥಾನಗಳಿಗೆ ಸ್ವಾತಂತ್ರ್ಯ ಸಿಕ್ಕಿಲ್ಲ. ಇದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ದೇವಸ್ಥಾನ ಮುಟ್ಟಿದರೆ ಭಸ್ಮವಾಗುತ್ತೀರಿ ಎಂದಧ್ದಾರೆ. ಅವರು ವಸಿಷ್ಠರೂ ಅಲ್ಲ, ವಿಶ್ವಾಮಿತ್ರರೂ ಅಲ್ಲ.  ಅವರು ಭಸ್ಮಾಸುರ ಆಗಿದ್ದರೆ ಅವರನ್ನೇ ಭಸ್ಮ ಮಾಡುವುದು ಹೇಗೆಂದು ನಮಗೆ ಗೊತ್ತು. ಅವರೇ ಸಿಬಿಐ, ಇಡಿ ಬಲೆಯಲ್ಲಿ ಸಿಲುಕಿದ್ದಾರೆ.  ಬೇಲ್ ರದ್ದಾದರೆ, ಮತ್ತೆ ಒಳಗೆ ಹೋಗಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಬಲವಂತದ ಮತಾಂತರಕ್ಕೆ ಬೆಂಬಲ ನಿಡುತ್ತಾರೆಯೇ ಎನ್ನುವುದನ್ನು ಸ್ಪಷ್ಟಪಡಿಸಲಿ. ಜಾತ್ಯಾತೀಯತೆ ಹೆಸರಿನಲ್ಲಿ ಹಿಂದುಗಳ ಮೇಲೆ ದಾಳಿ ಸಹಿಸುವುದಿಲ್ಲ. ಕುಂಬಳಕಾಯಿ ಕಳ್ಳ ಎಂದರೆ ಯಾಕೆ ಹೆಗಲು ಮುಟ್ಟಿಕೊಳ್ಳುತ್ತಾರೆ. ಇದು ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಲ್ಲ. ಸೋನಿಯಾ ಗಾಂಧೀಜಿ ಕಾಂಗ್ರೆಸ್.  ಗಾಂಧಿ ಅಂಬೇಡ್ಕರ್ ಬಲವಂತದ ಮತಾಂತರ ವಿರೋಧಿಸಿದ್ದರು. ಅಂಬೇಡ್ಕರ್ ಮತಾಂತರ ಹೊಂದಲು ಬಯಸಿದಾಗ ಪೋಪ್, ಮುಸ್ಲಿಂ ಧರ್ಮಗುರುಗಳು ಆಹ್ವಾನ ನೀಡಿದ್ದರು. ಆದರೆ ಅಂಬೇಡ್ಕರ್ ಅದನ್ನು ತಿರಸ್ಕಿರಿ ನನ್ನ ಸಾಂಸ್ಕೃತಿಕ ಹಕ್ಕನ್ನು ಕಳೆದುಕೊಳ್ಳುತ್ತೆನೆ ಎಂದು ಬೌದ್ದ ಧರ್ಮಕ್ಕೆ ಸೇರಿದರು ಎಂದರು.

ಇದನ್ನೂ ಓದಿ:ಮಸೀದಿ ಹಣದ ವಿಚಾರದಲ್ಲಿ ಜೀವಬೆದರಿಕೆ: ವಿಮಾನ ನಿಲ್ದಾಣದಲ್ಲಿ ಆರೋಪಿ ವಶಕ್ಕೆ

ಕಾಂಗ್ರೆಸ್ 2018, ,2019 ರ ಚುನಾವಣೆ ಫಲಿತಾಂಶವನ್ನು ಒಮ್ಮೆ ನೋಡಿ, ಭ್ರಷ್ಟ ವ್ಯವಸ್ಥೆಯನ್ನು ಜನರು ಈಗ ಬೆಂಬಲಿಸುವ ಮನಸ್ಥಿತಿಯಲ್ಲಿಲ್ಲ. ನಮ್ಮನ್ನು ಚಹಾ ಮಾರುವ ಪಕ್ಷ ಎಂದು ಲೇವಡಿ ಮಾಡುತ್ತಿದ್ದರು. ಈಗ ಟಿ ಮಾರುವವರನ್ನೇ ಎರಡು ಬಾರಿ ದೇಶದ ಪ್ರಧಾನಿ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಅಧ್ಯಕ್ಷರು ಮುಖ್ಯವೋ, ಪ್ರತಿಪಕ್ಷದ ನಾಯಕ ಮುಖ್ಯವೊ ಎನ್ನುವುದು ತಿಳಿಯುತ್ತಿಲ್ಲ. ಸಿದ್ದರಾಮಯ್ಯ ಅವರನ್ನು ಬಿಟ್ಟು ಡಿಕೆಶಿಗೆ ಒಂದು ಸಭೆ ಮಾಡುವ ಸ್ವಾತಂತ್ರ್ಯವೂ ಇಲ್ಲವೇ ಎಂದು ಟೀಕಿಸಿದರು.

ಸುಳ್ಳು ಪಾದಯಾತ್ರೆ ಯಾಕೆ?: ಮೇಕೆದಾಟು ಯೋಜನೆಗೆ ಪಾದಯಾತ್ರೆ ಗದ್ದುಗೆ ಗುದ್ದಾಟಕ್ಕೂ ನಡೆಸುತ್ತಾರೆ.  ಆರೋಗ್ಯ ಸುಧಾರಣೆಗೆ ಪಾದಯಾತ್ರೆ ಮಾಡಿದರೆ ತೊಂದರೆ ಇಲ್ಲ. ಸುಳ್ಳು ಹೇಳಿಕೊಂಡು ಪಾದಯಾತ್ರೆ ಮಾಡಬಾರದು. ಡಿಕೆಶಿ ಡಿಪಿಆರ್ ತಮ್ಮ ಅವಧಿಯಲ್ಲಿ ಆಗಿದೆ ಅಂತಾರೆ ಆರು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದರು. ರಾಜ್ಯ ಸರ್ಕಾರ ಕೇಂದ್ರ ಜಲ ಶಕ್ತಿ ಇಲಾಖೆ ಜೊತೆ ಮಾಡಿ ಯೋಜನೆ ಜಾರಿಗೆ ಪ್ರಯತ್ನ ನಡೆಸಿದ್ದೇವೆ.ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಪರಿಸರ ಇಲಾಖೆಯ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ. ಯಾರ ವಿರುದ್ಧ ಯಾವ ಉದ್ದೇಶಕ್ಕೆ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಬೇಕು ಎಂದು ಸಿ.ಟಿ.ರವಿ ಹೇಳಿದರು.

ಡಿಕೆಶಿ – ಎಚ್ ಡಿಕೆ ಯಾವಾಗ ಏನು ಮಾಡುತ್ತಾರೆ ಏನ್ನುವುದು ಗೊತ್ತಿಲ್ಲ. ಇಬ್ಬರು ಜೋಡೆತ್ತು ಅಂದುಕೊಂಡಿದ್ದರು. ಈಗ ಇಬ್ಬರೂ ಕಣಿ ಹರಿದುಕೊಂಡಿದ್ದಾರಾ, ಯಾರು ಉಪ್ಪು ತಿಂದಿದ್ದಾರೊ ಅವರು ನೀರು ಕುಡಿಯಲೇಬೇಕು. ಇದಕ್ಕೆ ಡಿಕೆಶಿ ಕಾಂಗ್ರೆಸ್ ನಾಯಕರೇನು ಹೊರತಲ್ಲ. ಅವರೇನು ನಿತ್ಯ ಪತಿವೃತೆಯರಲ್ಲ ಎಂದರು.

ಪಕ್ಷದ ನಾಯಕತ್ವ ಯಾರದು ಎನ್ನುವುದು ಸಂಸದೀಯ ಮಂಡಳಿ ನಿರ್ಣಯ ಮಾಡುತ್ತದೆ.ಸಂಪುಟ ಪುನಾರಚನೆ ಕುರಿತು ಬೈಠಕ್ ನಲ್ಲಿ ಚರ್ಚೆ ಮಾಡುತ್ತೇವೆ. ಚುನಾವಣೆ ಸೋಲಿನ ಕುರಿತು ಚರ್ಚೆ ಮಾಡುತ್ತೇವೆ. ನಾವು ಐದಾರು ಸಾರಿ ಸೊತು ಒಂದೇ ಕುಟುಂಬಕ್ಕೆ ಜೋತು ಬಿದ್ದು ಕುಳಿತಿಲ್ಲ. ಸಚಿವ ಸ್ಥಾನ ಬಿಡುವುದು ತ್ಯಾಗವೂ ಅಲ್ಲ ಬಲಿದಾನವೂ ಅಲ್ಲ. ಇದು ಪಕ್ಷ ವಹಿಸುವ ಜವಾಬ್ದಾರಿ ಪಕ್ಷ ಯಾರಿಗೆ ಸೂಚನೆ ನೀಡುತ್ತದೆಯೋ ಅವರು ಅದರಂತೆ ನಡೆದುಕೊಳ್ಳುತ್ತಾರೆ. ನಾನು ಯಾವುದೇ ಹುದ್ದೆಯ ರೇಸ್ ನಲ್ಲಿ ಇಲ್ಲ. ಪಕ್ಷ ನೀಡುವ ಜಬಾಬ್ದಾರಿ ಮಾತ್ರ ನಿರ್ವಹಿಸುತ್ತೇನೆ ಎಂದು ಸಿ ಟಿ ರವಿ ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.