ಜಾತಿವಾದ, ಭ್ರಷ್ಟತೆಯೇ ಕಾಂಗ್ರೆಸ್‌ ಮಾದರಿ: ಮೆಹ್ಸಾನಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ


Team Udayavani, Nov 24, 2022, 12:29 AM IST

ಜಾತಿವಾದ, ಭ್ರಷ್ಟತೆಯೇ ಕಾಂಗ್ರೆಸ್‌ ಮಾದರಿ: ಮೆಹ್ಸಾನಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ಮೆಹ್ಸಾನಾ: “ಕಾಂಗ್ರೆಸ್‌ ಮಾದರಿ ಎಂದರೆ ಜನರ ನಡುವೆ ಕಂದಕ ಸೃಷ್ಟಿಸುವಂಥ ಜಾತಿವಾದ, ಮತ­ಬ್ಯಾಂಕ್‌ ರಾಜಕಾರಣವೇ ಆಗಿದೆ. ಇಡೀ ದೇಶವನ್ನೇ ಹಾಳು ಮಾಡಿರುವಂಥ ಮಾದರಿಯಿದು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗುಜರಾತ್‌ನ ಮೆಹ್ಸಾನಾದಲ್ಲಿ ಬಿಜೆಪಿ ಅಭ್ಯರ್ಥಿ ಪರ ಬುಧವಾರ ನಡೆದ ಪ್ರಚಾರ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ಯಾವತ್ತೂ ತಾರತಮ್ಯ ಮತ್ತು ಓಲೈಕೆ ರಾಜಕಾರಣ ಮಾಡಿಲ್ಲ. ಅದೇ ಕಾರಣಕ್ಕೆ ಆಡಳಿತಾರೂಢ ಪಕ್ಷದ ಮೇಲೆ ಯುವಜನರು ನಂಬಿಕೆಯಿಟ್ಟಿರುವುದು. ಕಾಂಗ್ರೆಸ್‌ ಮಾದರಿ ಎಂದರೆ ಭ್ರಷ್ಟಾಚಾರ, ಸ್ವಜನಪಕ್ಷ­ಪಾತ, ವಂಶಾಡಳಿತ, ಜಾತಿವಾದ’ ಎಂದು ಹೇಳಿದರು.

ಬಳಿಕ, ದಾಹೋದ್‌ನಲ್ಲಿ ರ್‍ಯಾಲಿ ನಡೆಸಿದ ಮೋದಿ, “ವಿಪಕ್ಷ ಕಾಂಗ್ರೆಸ್‌ಗೆ ಬುಡಕಟ್ಟು ಜನಾಂಗದವರ ಮೇಲೆ ಅಷ್ಟೊಂದು ಗೌರವವಿದ್ದರೆ, ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಏಕೆ ಬೆಂಬಲ ನೀಡಲಿಲ್ಲ’ ಎಂದು ಪ್ರಶ್ನಿಸಿದರು.

ಆಪ್‌ನ ಶೋಲೆ ಡೈಲಾಗ್‌: ಆಮ್‌ ಆದ್ಮಿ ಪಕ್ಷದ ಪರವಾಗಿ ಬುಧವಾರ ಅಹ್ಮದಾಬಾದ್‌ನಲ್ಲಿ ಪ್ರಚಾರ ನಡೆಸಿದ ಸಂಸದ ರಾಘವ್‌ ಛಡ್ಡಾ, ಬಾಲಿವುಡ್‌ ಬ್ಲಾಕ್‌ಬಸ್ಟರ್‌ “ಶೋಲೆ’ ಸಿನೆಮಾದ ಡೈಲಾಗ್‌ ಹೇಳುವ ಮೂಲಕ ಗಮನ ಸೆಳೆದಿದ್ದಾರೆ.

ಭ್ರಷ್ಟರಿಗೆ ಕೇಜ್ರಿವಾಲ್‌ ಅವರು ಸಿಂಹಸ್ವಪ್ನ ಎಂದ ಅವರು, “ಶೋಲೆ ಸಿನೆಮಾದಲ್ಲಿ ಸೋ ಜಾ ಬೇಟಾ ವರ್ನಾ ಗಬ್ಬರ್‌ ಆ ಜಾಯೇಗಾ’ ಎಂಬ ಡೈಲಾಗ್‌ ಇದೆ. ಈಗ ಗುಜರಾತ್‌ನಲ್ಲೂ ಯಾವುದೇ ಭ್ರಷ್ಟ ರಾಜಕಾರಣಿ ಸದ್ದು ಮಾಡಲು ಯತ್ನಿಸಿದರೆ, ಆತನ ತಾಯಿ, “ಸೋ ಜಾ ಬೇಟಾ ವರ್ನಾ ಕೇಜ್ರಿವಾಲ್‌ ಆ ಜಾಯೇಗಾ'(ಮಲಗು ಮಗನೇ, ಇಲ್ಲದಿದ್ದರೆ ಕೇಜ್ರಿವಾಲ್‌ ಬರುತ್ತಾರೆ ಮತ್ತು ನಿನ್ನನ್ನು ಜೈಲಿಗಟ್ಟುತ್ತಾರೆ) ಎಂದು ಹೇಳುತ್ತಾರೆ. ಕೇಜ್ರಿವಾಲ್‌ ಹುಟ್ಟಿರುವುದೇ ಭ್ರಷ್ಟಾಚಾರ ಕೊನೆಗಾಣಿ­ಸಲು ಎಂದೂ ರಾಘವ್‌ ಹೇಳಿದ್ದಾರೆ.

ಮತ ಹಾಕದಿದ್ರೆ ಫೈನ್‌!
ರಾಜ್‌ಕೋಟ್‌ನ ರಾಜ್‌ ಸಮಾಧಿಯಾಲಾ ಎಂಬ ಗ್ರಾಮದಲ್ಲಿ ವಿಚಿತ್ರ ನಿಯಮವೊಂದನ್ನು ಜಾರಿ ಮಾಡಲಾಗಿದೆ. ಈ ಗ್ರಾಮದಲ್ಲಿ ರಾಜಕೀಯ ಪ್ರಚಾರಕ್ಕೆ ನಿಷೇಧ ಹೇರಲಾಗಿದೆ. ಪಕ್ಷಗಳು ಪ್ರಚಾರಕ್ಕೆ ಬರುವುದರಿಂದ ಗ್ರಾಮಕ್ಕೆ ತೊಂದರೆ­ಯಾಗುತ್ತದೆ ಎಂಬ ಕಾರಣಕ್ಕೆ ಯಾವುದೇ ಅಭ್ಯರ್ಥಿಯನ್ನೂ ಇಲ್ಲಿಗೆ ಬರಲು ಬಿಡುತ್ತಿಲ್ಲ. ಆದರೆ ಗ್ರಾಮಸ್ಥರೆಲ್ಲರೂ ಹಕ್ಕು ಚಲಾಯಿಸಬೇಕು ಎಂಬ ಆದೇಶವನ್ನೂ ನೀಡಲಾಗಿದೆ. ಯಾರು ಮತ ಚಲಾಯಿಸುವು­ದಿಲ್ಲವೋ ಅವರಿಗೆ 51 ರೂ. ದಂಡ ವಿಧಿಸುವುದಾಗಿ ಎಚ್ಚರಿಸಲಾಗಿದೆ.

ರಾಹುಲ್‌ ಸದ್ದಾಂ ಹುಸೇನ್‌ರಂತೆ ಕಾಣುತ್ತಾರೆ!
ಭಾರತ್‌ ಜೋಡೋ ಯಾತ್ರೆ ನಡೆಸುತ್ತಿರುವ ರಾಹುಲ್‌ ಗಾಂಧಿ ಅವರು ಈಗ “ಸರ್ವಾಧಿಕಾರಿ ಸದ್ದಾಂ ಹುಸೇನ್‌’ರಂತೆ ಕಾಣುತ್ತಾರೆ. ಲುಕ್‌ ಬದಲಿಸಬೇಕೆಂದರೆ ವಲ್ಲಭಭಾಯಿ ಪಟೇಲ್‌ರಂತೆ ಅಥವಾ ನೆಹರೂರಂತಾದರೂ ಪ್ರಯತ್ನ ಮಾಡಬಹುದಿತ್ತು. ಆದರೆ ನೀವು ಸದ್ದಾಂ ಹುಸೇನ್‌ರಂತೆ ಕಾಣುತ್ತಿರುವುದೇಕೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ ಪ್ರಶ್ನಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್‌, “ನಿಮ್ಮ ನಾಯಕ(ಪ್ರಧಾನಿ ಮೋದಿ) ಅಷ್ಟುದ್ದ ಗಡ್ಡ ಬಿಟ್ಟಾಗ ನಾವು ಯಾವುದೇ ಹೇಳಿಕೆ ನೀಡಿರಲಿಲ್ಲ. ಏಕೆಂದರೆ ನಾವು ನೈಜ ಸಮಸ್ಯೆಗಳ ಬಗ್ಗೆ ಮಾತ್ರವೇ ಗಮನಹರಿಸುತ್ತೇವೆ’ ಎಂದಿದೆ.

 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.