ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ; ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಅಗತ್ಯವಿದೆ;ಮೊಯ್ಲಿ
ಪಶ್ಚಿಮಬಂಗಾಳದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡಿದೆ ಎಂದು ಜಿತಿನ್ ವಿರುದ್ಧ ವಾಗ್ದಾಳಿ ನಡೆಸಿದರು.
Team Udayavani, Jun 11, 2021, 11:21 AM IST
ನವದೆಹಲಿ: ಜಿತಿನ್ ಪ್ರಸಾದ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಗೊಂಡ ಬೆನ್ನಲ್ಲೇ ನೂರು ವರ್ಷಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಆಗಬೇಕಾದ ಅಗತ್ಯವಿದೆ, ಅಲ್ಲದೇ ಕೇವಲ ಪರಂಪರೆಯನ್ನು ಅವಲಂಬಿಸಬೇಕಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪೆಟ್ರೋಲ್ 100 ನಾಟೌಟ್: ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಪಕ್ಷದ ವರಿಷ್ಠರು ಜವಾಬ್ದಾರಿಯನ್ನು ವಹಿಸುವಾಗ ಸೈದ್ಧಾಂತಿಕ ಬದ್ಧತೆಗೆ ಆದ್ಯತೆ ನೀಡಬೇಕು ಎಂದು ಮೊಯ್ಲಿ ಸಲಹೆ ನೀಡಿದ್ದಾರೆ. ಜಿತಿನ್ ಪ್ರಸಾದ್ ಅವರ ಕುರಿತು ಮಾತನಾಡಿದ ಮೊಯ್ಲಿ, ಜಿತಿನ್ ಪ್ರಸಾದ್ ವೈಯಕ್ತಿಕ ಹಿತಾಸಕ್ತಿಯಿಂದ ಪಕ್ಷಾಂತರ ಮಾಡಿದ್ದಾರೆ ಎಂದು ಆರೋಪಿಸಿದರು. ಉತ್ತರಪ್ರದೇಶದ ಈ ನಾಯಕನ ಸೈದ್ಧಾಂತಿಕ ಬದ್ಧತೆಯ ಬಗ್ಗೆ ಮೊದಲಿನಿಂದಲೂ ಸಂಶಯ ಇತ್ತು. ಅಲ್ಲದೇ ಇವರ ಉಸ್ತುವಾರಿಯಲ್ಲಿ ಪಶ್ಚಿಮಬಂಗಾಳದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡಿದೆ ಎಂದು ಜಿತಿನ್ ವಿರುದ್ಧ ವಾಗ್ದಾಳಿ ನಡೆಸಿದರು.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ, ಪಕ್ಷದ ವರಿಷ್ಠರು ಮುಖ್ಯವಾಗಿ ನಾಯಕರ ಬಗ್ಗೆ ಮೌಲ್ಯಮಾಪನ ಮಾಡಬೇಕು, ಅಲ್ಲದೇ ಅರ್ಹತೆ ಇಲ್ಲದ ವ್ಯಕ್ತಿಯನ್ನು ನಾಯಕನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮರು ಚಿಂತನೆ ನಡೆಸಬೇಕಾಗಿದೆ. ಅಷ್ಟೇ ಅಲ್ಲ ಹೊಸ ಕಾರ್ಯತಂತ್ರವನ್ನು ರೂಪಿಸುವ ಮೂಲಕ ಮಾತ್ರ ಕಾಂಗ್ರೆಸ್ ಪಕ್ಷ ಏಳಿಗೆ ಕಾಣಲು ಸಾಧ್ಯ ಎಂದು ಹೇಳಿದರು.
ಪಕ್ಷದೊಳಗಿನ ಸೂಕ್ತ ಜನರನ್ನು ಗುರುತಿಸಿ ಹುದ್ದೆಯನ್ನು ನೀಡಬೇಕು.ಯಾರಿಗೆ ಸಾಮರ್ಥ್ಯ ಇಲ್ಲವೋ ಅಂತಹ ಅಸಮರ್ಥರನ್ನು ಜವಾಬ್ದಾರಿಯುತ ಸ್ಥಾನದಲ್ಲಿ ಕೂರಿಸಬಾರದು. ಇದೊಂದು ಪಕ್ಷಕ್ಕೆ ಪಾಠವಾಗಿದೆ. ಪಕ್ಷದ ಬೆಳವಣಿಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಮೊಯ್ಲಿ ಪಕ್ಷದ ಹೈಕಮಾಂಡ್ ಗೆ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್