ಪ್ರತಿಭಟನೆ ಹಾದಿ ಹಿಡಿಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ
Team Udayavani, Dec 15, 2021, 12:17 PM IST
ಬೆಳಗಾವಿ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ಬೆಳಗ್ಗೆ ನಡೆಸಿ, ಸುವರ್ಣ ಸೌಧದಲ್ಲಿ ಸರಕಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಎಪಿಎಂಸಿ ಕಾಯಿದೆ ವಾಪಸು ಪಡೆಯುವಂತೆ ನಿಲುವಳಿ ಸೂಚನೆ ಮಂಡನೆ ಮಾಡಲು ನಿರ್ಧರಿಸಲಾಗಿದೆ.
ಭೂ ಸುಧಾರಣಾ ತಿದ್ದುಪಡಿ ಕಾಯಿದೆ, ಗೋಹತ್ಯೆ ನಿಷೇಧ ಕಾಯಿದೆ ವಾಪಸು ಪಡೆಯುವಂತೆ ಒತ್ತಾಯ ಮಾಡುವುದು, ಕರೋನದಿಂದ ಸತ್ತವರಿಗೆ ಪರಿಹಾರ ಕೊಡುವ ವಿಚಾರ, ಮತಾಂತರ ತಿದ್ದುಪಡಿ ವಿಧೇಯಕ ಸರ್ಕಾರ ತಂದ್ರೆ ವಿರೋಧ ಮಾಡುವುದು, 40% ಕಮಿಷನ್ ಆರೋಪ,ಬಿಟ್ ಕಾಯಿನ್ ವಿಚಾರ ಪ್ರಸ್ತಾಪ ಮಾಡುವುದಕ್ಕೆ ನಿರ್ಧರಿಸಲಾಗಿದೆ.
ಪರಿಷತ್ ಮತ್ತು ವಿಧಾನ ಸಭೆಯಲ್ಲಿ ಯಾರು ಪ್ರಸ್ತಾಪ ಮಾಡಬೇಕು, ಯಾರು ಚರ್ಚೆ ಮಾಡಬೇಕು ಅಂತ ಇವತ್ತಿನ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನೂತನ ವಿಧಾನಪರಿಷತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.
ಕೆಲವು ಕ್ಷೇತ್ರಗಳಲ್ಲಿ ಅನಿರೀಕ್ಷಿತ ಸೋಲಾಗಿರುವ ಬಗ್ಗೆ ಕೈ ನಾಯಕರ ಬೇಸರ ವ್ಯಕ್ತಪಡಿಸಿದರು. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ಸೋಲಿನ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ನಿನ್ನೆ ವಿಧಾನಪರಿಷತ್ ಕಲಾಪದಲ್ಲಿ ಈಶ್ವರಪ್ಪ ರೋಲ್ಯಾಕ್ಸ್ ವಾಚ್ ಪ್ರಕರಣ ಪ್ರಸ್ತಾಪಿಸಿದ್ದರು, ಅದಕ್ಕೆ ಸಿ ಎಂ ಇಬ್ರಾಹಿಂ.ತಿರುಗೇಟು ನೀಡಿದ್ದರು.
ಸಭೆಯಲ್ಲಿ ನಂಜುಡಪ್ಪ ವರದಿ ಅನುಷ್ಠಾನದ ಬಗ್ಗೆ ಚರ್ಚೆ ಮಾಡಿ, ವರದಿ ಜಾರಿ ವಿಚಾರ ಚರ್ಚೆಗೆ ಅವಕಾಶ ಕೇಳಲು ನಿರ್ಧಾರ ಮಾಡಲಾಗಿದೆ. ನಂಜುಂಡಪ್ಪ ವರದಿ ವಿಚಾರವಾಗಿ ನಿಲುವಳಿ ಸೂಚನೆ ಮಂಡಿಸುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಾಕಿ ಇರುವ 3 ಲಕ್ಷ ಕೋಟಿ ವಿಚಾರವಾಗಿಯೂ ಚರ್ಚೆ ನಡೆಸಲಾಗಿದೆ.
40% ಕಮಿಷನ್ ವಿಚಾರವಾಗಿ ಸದನದಲ್ಲಿ ಗಂಭೀರ ಚರ್ಚೆ ನಡೆಸಲು ತೀರ್ಮಾನ ಮಾಡಲಾಗಿದೆ.
40% ಕಮಿಷನ್ ವಿಚಾರವಾಗಿಯೂ ನಿಲುವಳಿ ಸೂಚನೆ ನೀಡಿ ಎಂದು ಹಿರಿಯ ನಾಯಕರು ಸಲಹೆ ನೀಡಿದ್ದಾರೆ.
ಸ್ಪೀಕರ್ ಅನುಮತಿ ನೀಡದೇ ಇದ್ದರೆ ಪ್ರತಿಭಟನೆ ಹಾದಿ ಹಿಡಿಯಬೇಕು. ನಾಳೆಯಿಂದ ಬೆಂಗಳೂರು ಮಾದರಿಯಲ್ಲಿ ದಿನಕ್ಕೊಂದು ಪ್ರತಿಭಟನಾ ಮೆರವಣಿಗೆಗೆ ನಿರ್ಧಾರ ಮಾಡಲಾಗಿದೆ.
ಪರಿಷತ್ ಕಲಾಪದಲ್ಲಿ ಜಾಡಿಸಿ ಬಿಸಾಡಿ ಅಂತ ಸಲಹೆ ಕೊಟ್ಟ ಸಿದ್ದರಾಮಯ್ಯ.
ಆ ಈಶ್ವರಪ್ಪನಿಗೆ ಜಾಡಿಸಿ ಅಂತ ಸಿ ಎಂ ಇಬ್ರಾಹಿಂ ಗೆ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು, ಪ್ರತಿಕ್ರಿಯಿಸಿದ ಸಿ ಎಂ ಇಬ್ರಾಹಿಂ ನಿನ್ನೆಯೆ ಜಾಡಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್