ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಖರ್ಗೆ ಪರ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು
Team Udayavani, Oct 14, 2022, 12:56 PM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ ಖರ್ಗೆ ಪರ ಮತಯಾಚನೆ ಪ್ರಾರಂಭಿಸಿದ್ದಾರೆ.
ಮಾಜಿ ಸಚಿವ ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ, ಶಾಸಕರಾದ ಹ್ಯಾರಿಸ್, ಬೈರತಿ ಸುರೇಶ್, ಯು.ಬಿ.ವೆಂಕಟೇಶ್, ಶಿವಣ್ಣ ನೇತೃತ್ವದ ಕಾಂಗ್ರೆಸ್ ನಾಯಕರು ರಾಜ್ಯದ ಎಲ್ಲ ಪಿಸಿಸಿ ಸದಸ್ಯರ ಪರ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದ 479 ಪಿಸಿಸಿ ಪ್ರತಿನಿಧಿಗಳು, ಕಾಂಗ್ರೆಸ್ ಶಾಸಕಾಂಗ ಪಕ್ಷದ 15 ಸದಸ್ಯರು ಈ ಚುನಾವಣೆಯಲ್ಲಿ ಮತ ಹಾಕುವ ಅರ್ಹತೆ ಹೊಂದಿದ್ದಾರೆ. ಇವರೆಲ್ಲರೂ ಖರ್ಗೆ ಪರ ಮತ ಚಲಾಯಿಸುವಂತೆ ಕಾಂಗ್ರೆಸ್ ಪ್ರಚಾರ ನಿಯೋಗ ಮನವಿ ಮಾಡಿದೆ.
ಇದನ್ನೂ ಓದಿ:ಗುಜರಾತ್ ಆಪ್ ಮುಖಂಡರಿಂದ ಪ್ರಧಾನಿ ಮೋದಿ ತಾಯಿಗೆ ಅವಮಾನ: ಸ್ಮೃತಿ ಇರಾನಿ ಆಕ್ರೋಶ
ಖರ್ಗೆಯವರು ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಹಲವು ಮಜಲುಗಳನ್ನು ಕಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಿಜಲಿಂಗಪ್ಪ ಅವರ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಿಭಾಯಿಸುವ ಅವಕಾಶ ಈಗ ಲಭಿಸಿದೆ. ಕಾಂಗ್ರೆಸ್ ಇತಿಹಾಸದಲ್ಲಿ ಐದನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಖರ್ಗೆಯವರನ್ನು ಗೆಲ್ಲಿಸುವ ಪ್ರಯತ್ನ ನಡೆಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ