ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಟ್ವಿಟರ್ನಲ್ಲಿ ವಾಗ್ಧಾಳಿ
Team Udayavani, Sep 27, 2022, 11:15 PM IST
ಬೆಂಗಳೂರು: “ಯಾರದ್ದು ಡರ್ಟಿ ಪಾಲಿಟಿಕ್ಸ್ “ಪೇ ಸಿಎಂ’ ಬಸವರಾಜ ಬೊಮ್ಮಾಯಿ ಅವರೇ’ ಎಂದು ಕಾಂಗ್ರೆಸ್ ಟ್ವಿಟರ್ನಲ್ಲಿ ವಾಗ್ಧಾಳಿ ನಡೆಸಿದೆ.
ಸರಣಿ ಟ್ವಿಟ್ ಮಾಡಿರುವ ಕಾಂಗ್ರೆಸ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ತಮ್ಮ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳನ್ನು ಜನಮಾನಸದಿಂದ ಮರೆಮಾಚಲು ವಾರಕ್ಕೊಂದು ಕೋಮು ವಿವಾದ ಸೃಷ್ಟಿಸಿ ಸಮಾಜವನ್ನು ಒಡೆದಿದ್ದು, ಪ್ರಜಾಪ್ರಭುತ್ವ ಹಾಗೂ ಸಂವಿಧಾನಗಳ ಆಶಯಕ್ಕೆ ವಿರುದ್ಧವಾದ ಶಕ್ತಿಗಳಿಗೆ ‘ಮೌನ’ದಿಂದ ಬೆಂಬಲಿಸಿದ್ದು ಬಿಜೆಪಿಯ ಡರ್ಟಿ ಪಾಲಿಟಿಕ್ಸ್ ಅಲ್ಲವೆ ಎಂದು ಕುಟುಕಿದೆ.
ಚೀತಾಗಳಿಂದ ಭಾರತೀಯರು ಸಂತಸಗೊಂಡಿದ್ದಾರಂತೆ, ಚೀತಾಗಳಿಗೆ ಹೆಸರಿಡಬೇಕಂತೆ, ಒಳ್ಳೆ ಹೆಸರು ಸೂಚಿಸಿದವರಿಗೆ ಬಹುಮಾನವಂತೆ. ನರೇಂದ್ರ ಮೋದಿ ಅವರು ಪ್ರಧಾನಿಯೋ, ವೇದಿಕೆಯಲ್ಲಿ ರಂಜಿಸುವ ವಿದೂಷಕನೋ, ತಿಳಿಯದಾಗಿದೆ ಎಂದು ಟೀಕಿಸಿದೆ.
ವಿಕಾಸ್, ಅಚ್ಛೆ ದಿನ್, ವಿಶ್ವಗುರು, 5 ಟ್ರಿಲಿಯನ್ ಎಕಾನಮಿ, 15 ಲ್ಯಾಕ್ಸ್, ರಾಜಕೀಯ ಹಿತಾಸಕ್ತಿಗೊಸ್ಕರ ಹಿಜಾಬ್ ಹೆಸರಲ್ಲಿ ಹೆಣ್ಣುಮಕ್ಕಳ ಶಿಕ್ಷಣದ ಹಕ್ಕು ಕಿತ್ತುಕೊಂಡಿದ್ದು , ಸಿಎಂ ಹುದ್ದೆಯ ಜವಾಬ್ದಾರಿ ಮರೆತು ಆಕ್ಷನ್ಗೆ ರಿಯಕ್ಷನ್ ಸಹಜ ಎನ್ನುವ ಮೂಲಕ ಸಮಾಜಘಾತುಕರಿಗೆ ಬೆಂಬಲಿಸಿದ್ದು , ಕೋಮು ಕಲಹಗಳನ್ನು ಹಬ್ಬಿಸಿ ಕಣ್ಮುಚ್ಚಿ ಕುಳಿತಿದ್ದು , ಇದು ಬಿಜೆಪಿಯ ಡಾರ್ಟಿ ಪಾಲಿಟಿಕ್ಸ್ ಅಲ್ಲವೆ ಪೇ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಎಂದು ವಾಗ್ಧಾಳಿ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’