ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!
Team Udayavani, Oct 28, 2021, 6:23 PM IST
ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರಾದ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಗುರುವಾರ ನೆಡೆದಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸಿದ್ದಾರೆ.
ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಬನಂ ಹಾಗೂ ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಜ್ಯೋತಿ ಮೋಹನ್ ಹಾಗೂ ರವೀಶ್ ( ಬಾಬೀ ) ನಾಮಪತ್ರ ಸಲ್ಲಿಸಿದ್ದರು.
ಆಪರೇಷನ್ ಕಮಲದ ಬಗ್ಗೆ ತೀರ್ಥಹಳ್ಳಿಯಲ್ಲಿ ಬಾರಿ ಚರ್ಚೆ ನೆಡೆದಿದ್ದರೂ, ಗುರುವಾರ ಬೆಳಿಗ್ಗೆ ಪಟ್ಟಣ ಪಂಚಾಯತಿ ಸದಸ್ಯ ಸಂದೇಶ್ ಜವಳಿ ಮಾತನಾಡಿ ”ನಾವು ಆಪರೇಷನ್ ಮಾಡುವುದಿಲ್ಲ. ಕಾಂಗ್ರೆಸ್ ನವರು ರೆಸಾರ್ಟ್ ರಾಜಕೀಯ ಮಾಡುವುದರ ಮೂಲಕ ಕೀಳು ರಾಜಕೀಯ ಮಾಡಿದ್ದಾರೆ ನಾವು ಇಲ್ಲಿಯವರೆಗೆ 25:ವರ್ಷ ಆಡಳಿತ ನೆಡೆಸಿದ್ದೇವೆ ಈ ಬಾರಿ ಅವರಿಗೆ ಜನರೇ ಅವಕಾಶ ನೀಡಿದ್ದಾರೆ ಕಾದು ನೋಡೋಣ” ಎಂದು ಹೇಳಿದರು.
ಇನ್ನು ಮತ ಎಣಿಕೆಯಲ್ಲಿ 9 ಸ್ಥಾನ ಪಡೆದು ಅಧ್ಯಕ್ಷರಾಗಿ ಶಬನಂ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಶಬನಂ ಪಟ್ಟಣದ ಗಾಂಧಿ ನಗರ ವಾರ್ಡ್ ನಲ್ಲಿ ಎರಡನೇ ಬಾರಿಗೆ ಆಯ್ಕೆಯಾಗಿದ್ದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಆರ್. ಎಂ. ಮಂಜುನಾಥ ಗೌಡರು, ಸುಂದರೇಶ್ ಹಾಗೂ ಕಾಂಗ್ರೆಸ್ ನ ಪಟ್ಟಣ ಪಂಚಾಯತಿ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ