ಬಜೆಟ್ ಪಾವಿತ್ರ್ಯತೆ ಹಾಳು ಮಾಡಿದ ಕಾಂಗ್ರೆಸ್ಸಿಗರು: ಈಶ್ವರಪ್ಪ ವಾಗ್ದಾಳಿ
ಮತ್ತೆ ಏನೇನು ಇಟ್ಕೊಂಡು ಬರ್ತಾರೋ....!
Team Udayavani, Feb 19, 2023, 6:44 PM IST
ಕಲಬುರಗಿ: ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂ ಇಟ್ಟುಕೊಂಡು ಬರುವ ಮೂಲಕ
ಬಜೆಟ್ ಅಧಿವೇಶನದ ಪಾವಿತ್ರ್ಯತೆ ಅವರು ಹಾಳು ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಟೀಕಿಸಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ 8 ಬಾರಿ ಬಜೆಟ್ ಮಂಡನೆ ಮಾಡಿದವರು ಕಿವಿಯಲ್ಲಿ ಹೂ ಇಟಕೊಂಡು ಬಂದಿದ್ದಾರೆ. ಮುಂದಿನ ಅಧಿವೇಶನದಲ್ಲಿ ಮತ್ತೆ ಏನೇನು ಇಟ್ಕೊಂಡು ಬರ್ತಾರೋ ಎಂದು ವ್ಯಂಗ್ಯವಾಡಿದರು.
ಪ್ರಚಾರ ಗಿಟ್ಟಿಸುವ ನೆಪದಲ್ಲಿ ದೇಶದ ಇತಿಹಾಸ ಹಾಳು ಮಾಡಿದ್ದಾರೆ.ಬಜೆಟ್ ಅಧಿವೇಶನಕ್ಕೆ ಅಪಮಾನ ಮಾಡಿದ್ದಾರೆ ವಾಗ್ದಾಳಿ ನಡೆಸಿದ ಈಶ್ವರಪ್ಪ, ಯಾರದೊ ಮಾತು ಕೇಳಿ ಹೀಗೆ ಮಾಡಿದ್ವಿ ಅಂತ ಅವರು ಕ್ಷಮೆ ಕೇಳಬೇಕೆಂದರು.
ಬಿಜೆಪಿ ಏನು ಭರವಸೆ ಕೊಟ್ಟಿದೆ ಹಾಗೂ ಏನು ಇಲ್ಲ ಎಂಬುದನ್ನು ಜನ ತೀರ್ಮಾನ ಮಾಡ್ತಾರೆ.ನೀವು ಏನು ಕೊಟ್ಟಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ, ಅದಕ್ಕಾಗಿಯೇ ಜನ ನಿಮನ್ನ ತಿರಸ್ಕರಿಸಿದ್ದಾರೆ ಎಂದು ಟೀಕಿಸಿದರು.
ನಮ್ಮ ನಾಯಕರಿಗೆ ಫೇಸ್ ಇದೆ ಅದಕ್ಕೆ ಮೋದಿ, ಶಾ ಅವರನ್ನು ಕರೆದುಕೊಂಡು ಬರುತ್ತೇವೆ. ಬಿಜೆಪಿ ನಾಯರನ್ನು ಜನ ದೇಶದ ಭವಿಷ್ಯದ ನಾಯಕರು ಅಂತ ಭಾವಿಸ್ತಾರೆ. ಪ್ರಮುಖವಾಗಿ ನಮ್ಮ ನಾಯಕರುಗಳ ಮೇಲೆ ಜನರಿಗೆ ವಿಶ್ವಾಸ ಇದೆ ಹಾಗಾಗಿ ಅವರು ರಾಜ್ಯಕ್ಕೆ ಬರುತ್ತಾರೆ. ಕಾಂಗ್ರೆಸ್ ನವರಿಗೆ ಫೇಸ್ ವ್ಯಾಲ್ಯೂವೇ ಇಲ್ಲ. ಬೇಕಾದ್ರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವಾದ್ರಾ ಯಾರನ್ನು ಬೇಕಾದ್ರೂ ಕರೆಸಲಿ, ಬೇಡ ಅಂದವರಾರು? ಎಂದು ತೀಕ್ಣವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನವರು ಕಚ್ಚಾಡ್ತಿದ್ದಾರೆ ಎಂದರು.
ಮಾಜಿ ಸಿಎಂ ಸಿದ್ಧರಾಮಯ್ಯ ಬಗ್ಗೆ ಅಶ್ವಥನಾರಾಯಣ ಅವರು ಹೇಳಿಕೆ ನೀಡಿರುವುದು ತಪ್ಪು. ಅದಕ್ಕಾಗಿಯೇ ಅವರು ಕ್ಷಮೆಯನ್ನ ಕೇಳಿದ್ದಾರೆ.ಆದರೆ ಸಿದ್ರಾಮಯ್ಯ ಅವರು ಮೋದಿ ಅವರಿಗೆ ನರ ಹಂತಕ ಅಂದಿದ್ದರು. ಆವಾಗ ಸಿದ್ಧರಾಮಯ್ಯ ಅವರು ಕ್ಷಮೆ ಕೇಳಲಿಲ್ಲ. ಅವರು ಕ್ಷಮೆ ಕೇಳಿದ್ರೆ ನಾನು ಒಪ್ಪುತಿದ್ದೆ ಎಂದರು.
ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ಅಂದ್ರೆ ಬಂಡಲ್ ಜನತಾ ಪಾರ್ಟಿ ಎಂದಿದ್ದಾರೆ. ಹಿಂದೆ ಅವರ ಅಪ್ಪನನ್ನು ಸೋಲಿಸಿದ್ದೇವೆ. ಈಗ ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸುತ್ತೇವೆ. ಅವಾಗ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ