ಮತಾಂತರ ಕಾಯಿದೆ : ಒಂದೇ ಕಲ್ಲಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರ
ಒಂದು ಮತದ ಕೊರತೆ ಬಿಜೆಪಿಗೆ ಅಡ್ಡಿಯಾಗಲಿದೆಯೇ ?
Team Udayavani, Dec 23, 2021, 12:33 PM IST
ಬೆಳಗಾವಿ : ಮತಾಂತರ ನಿಷೇಧ ಕಾಯಿದೆ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಬಿಗ್ ಫೈಟ್ ಆರಂಭವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕಾಯಿದೆ ವಾಪಾಸ್ ತೆಗೆದುಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈಗಾಗಲೇ ಮಂಡನೆಯಾಗಿರುವ ಈ ವಿಧೇಯಕದ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಚರ್ಚೆ ಆರಂಭವಾಗಲಿದೆ. ಆದರೆ ಉಭಯ ಸದನಗಳಲ್ಲಿ ವಿಧೇಯಕವನ್ನು ಮತಕ್ಕೆ ಹಾಕುವಂತೆ ಮಾಡಲು ಕಾಂಗ್ರೆಸ್ ತಂತ್ರ ರೂಪಿಸಿದ್ದು, ಜೆಡಿಎಸ್ ನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಮುಂದಾಗಿದೆ.
ವಿಧಾನಸಭೆಯಲ್ಲಿ ವಿಧೇಯಕ ಒಪ್ಪಿಗೆ ಪಡೆದರೂ ವಿಧಾನ ಪರಿಷತ್ ನಲ್ಲಿ ಒಂದು ಸ್ಥಾನದ ಕೊರತೆಯಾಗಲಿದೆ. ಮೇಲ್ಮನೆಯಲ್ಲಿ ಬಿಜೆಪಿ36 ಸ್ಥಾನ ಹೊಂದಿದ್ದು, ಬಹುಮತಕ್ಕೆ 37 ಮತ ಅಗತ್ಯ. ಒಂದೊಮ್ಮೆ ಜೆಡಿಎಸ್ ಬೆಂಬಳಿಸಿದರೆ ಅಥವಾ ಸಭಾತ್ಯಾಗ ಮಾಡಿದರೆ ಮಾತ್ರ ಬಿಜೆಪಿ ಹಾದಿ ಸುಗಮವಾಗುತ್ತದೆ.
ಆದರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈಗಾಗಲೇ ಕಾಯಿದೆಯನ್ನು ವಿರೋಧಿಸಿದ್ದಾರೆ. ಹೀಗಾಗಿ ವಿಧೇಯಕವನ್ನು ಮತಕ್ಕೆ ಹಾಕುವಂತೆ ಮಾಡಿ ಜೆಡಿಎಸ್ ಸದನದಲ್ಲೂ ವಿರೋಧಿಸುವಂತೆ ಮಾಡುವ ಮೂಲಕ ಇಕ್ಕಟ್ಟಿಗೆ ಸಿಲುಕಿಸುವುದು ಕಾಂಗ್ರೆಸ್ ತಂತ್ರ. ಒಂದೊಮ್ನೆ ಜೆಡಿಎಸ್ ಸಭಾತ್ಯಾಗ ಮಾಡಿದರೆ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡಿದಂತಾಗುತ್ತದೆ. ಈ ಮೂಲಕ ಜೆಡಿಎಸ್ ಅಲ್ಪಸಂಖ್ಯಾತ ಸಮುದಾಯದ ವಿಚಾರಸಲ್ಲಿ ದ್ವಂದ್ವ ನಿಲುವು ತಾಳುತ್ತದೆ ಎಂದು ಸ್ಥಾಪಿಸುವುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.
ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯಿದೆ ಎರಡನ್ನು ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಸಂಖ್ಯಾಬಲ ಇದೆ ಎಂದು ಏನು ಬೇಕಾದರೂ ಮಾಡುವುದು ಸಂವಿಧಾನ ವಿರೋಧವಾಗುತ್ತದೆ. ಮೇಲ್ಮನೆಯಲ್ಲಿ ನಮಗೆ ಬಹುಮತವಿದೆ. ಹೀಗಾಗಿ ಎರಡು ಕಡೆ ಮತಕ್ಕೆ ಹಾಕುವಂತೆ ಮಾಡುತ್ತೇವೆ. ಸಭಾತ್ಯಾಗ ಮಾಡುವುದೂ ಬಿಜೆಪಿಗೆ ಬೆಂಬಲ ಕೊಟ್ಟಂತೆ. ಹೊರಗಡೆ ವಿರೋಧಿಸಿದರೆ ಸಾಲದು ಎಂದು ಜೆಡಿಎಸ್ ಗೆ ಟಾಂಗ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ