ಬದಲಾಯ್ತು ಬಿಜೆಪಿ ಪಟ್ಟಿ: ಲಕ್ಷ್ಮಣ ಸವದಿ, ಹೇಮಲತಾ ನಾಯಕ್ ಗೆ ಪರಿಷತ್ ಟಿಕೆಟ್
Team Udayavani, May 24, 2022, 11:11 AM IST
ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಅಧಿಕೃತವಾಗಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನಿರಾಕರಿಸಲಾಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ.
ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಕೇಶವ ಪ್ರಸಾದ್ ಮತ್ತು ಚಲವಾದಿ ನಾರಾಯಣ ಸ್ವಾಮಿಗೆ ಟಿಕೆಟ್ ಅಂತಿಮ ಮಾಡಲಾಗಿದೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಸವರಾಜ ಹೊರಟ್ಟಿಯವರಿಗೆ ಟಿಕೆಟ್ ನೀಡಲಾಗಿದೆ.
ಇದನ್ನೂ ಓದಿ:ಬಸವರಾಜ ಹೊರಟ್ಟಿಗೆ ಶಿಷ್ಯನೇ ಎದುರಾಳಿ
ವಿಜಯೇಂದ್ರಗೆ ಟಿಕೆಟ್ ಕೈ ತಪ್ಪಿದ್ದು ರಾಜಕೀಯ ವಲಯದಲ್ಲಿ ನಾನಾ ಚರ್ಚೆಗೆ ಕಾರಣವಾಗಿದೆ. ವಿಜಯೇಂದ್ರ ಕಾರಣಕ್ಕೆ ಅಭ್ಯರ್ಥಿಗಳ ಲಿಸ್ಟ್ ಅಂತಿಮಗೊಳಿಸಲು ತಡರಾತ್ರಿವರೆಗೆ ಕಸರತ್ತು ನಡೆಸಲಾಗಿತ್ತು. ಆದರೆ ವಿಜಯೇಂದ್ರಗೆ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿದ ಆರೋಪಕ್ಕೆ ತುತ್ತಾಗುವ ಆತಂಕದಿಂದ ಬಿಜೆಪಿ ವರಿಷ್ಠರು ಹಿಂದೇಟು ಹಾಕಿದ್ದಾರೆ ಎನ್ನುತ್ತಿವೆ ಮೂಲಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ