ತೀರ್ಥಹಳ್ಳಿ: ಉದ್ಯಮದಲ್ಲಿ ನಷ್ಟ ಅನುಭವಿಸಿ ನೇಣಿಗೆ ಶರಣಾದ ದಂಪತಿ
Team Udayavani, Jan 13, 2022, 6:13 PM IST
ತೀರ್ಥಹಳ್ಳಿ : ಅಡಿಕೆ ಚೇಣಿ ಮಾಡಿ ಸಾಲ ಮಾಡಿ, ಉದ್ಯಮದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದಾರುಣ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ.
ಸಂತೆಹಕ್ಲು ಸಮೀಪದ ಮಂಜುನಾಥ್ (46 )ಮತ್ತು ಪತ್ನಿ ಉಷಾ ( 43) ನೇಣಿಗೆ ಶರಣಾದ ದಂಪತಿ. ಇವರಿಗೆ 18 ಮತ್ತು 16 ವರ್ಷದ ಎರಡು ಗಂಡು ಮಕ್ಕಳು ಇದ್ದಾರೆ.ಇವರಿಗೆ ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಎಂದು ಹಲವುಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದರೆ.
ಕೊರೊನಾ ಮೊದಲ ಅಲೆಯಿಂದ ಪ್ರಾರಂಭವಾದ ಸಾಲದ ಹೊಡೆತ ಮೂರನೆ ಅಲೆಯ ಹೊತ್ತಿನಲ್ಲಿ ಆ ದಂಪತಿಯ ಬದುಕನ್ನೇ ಕತ್ತಲುಮಯ ಮಾಡಿದೆ. ಕೊರೊನಾ ಲಾಕ್ ಡೌನ್ ಎಫೆಕ್ಟ್ ನಿಂದ ವ್ಯವಹಾರ ವಹಿವಾಟು ಇಲ್ಲದೆ ಮಾಡಿದ ಸಾಲವನ್ನು ಇವರಿಗೆ ತೀರಿಸಲು ಆಗಿರಲಿಲ್ಲ ಎನ್ನುವ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ ಇವರು ಅಕ್ಷಯ್ ಹಾಗು ಆಕಾಶ್ ಎಂಬ ಗಂಡುಮಕ್ಕಳನ್ನು ದಂಪತಿ ಅಗಲಿರುವುದಕ್ಕೆ ಗ್ರಾಮಸ್ಥರು ಮರುಗಿದ್ದಾರೆ. ಒಬ್ಬರ ಸಾಲ ತೀರಿಸಲು ಮತ್ತೊಬ್ಬರ ಹತ್ತಿರ ಸಾಲ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎನ್ನಲಾಗಿದೆ
ಲಕ್ಷಾಂತರ ಸಾಲವನ್ನು ಹೇಗೆ ತೀರಿಸುವುದೆಂಬ ಆತಂಕ ಮಾತು ಈ ದಂಪತಿಗಳಿಂದ ಕೇಳಿ ಬರುತ್ತಿತ್ತು ಎನ್ನುವ ಮಾತು ಊರಿನ ಗ್ರಾಮಸ್ಥರಿಂದಲೇ ಕೇಳಿ ಬರುತ್ತಿದೆ. ಕೊರೊನಾ ಮೂರನೇ ಅಲೆಯ ವಾರಾಂತ್ಯದ ಲಾಕ್ ಡೌನ್ ಶುರುವಾಗುತ್ತಿದ್ದಂತೆ ಇನ್ನು ನಾವು ಸಾಲ ತೀರಿಸಲು ಸಾಧ್ಯವಿಲ್ಲ ಎಂಬಂತ ಹತಾಶೆ ದಂಪತಿಯನ್ನು ಕಾಡಿದೆ. ಹೀಗಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದು, ಮಕ್ಕಳಿಲ್ಲದ ಸಂದರ್ಭದಲ್ಲಿ ಮನೆಯಲ್ಲಿ ಡೆತ್ ನೋಟ್ ಬರೆದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…