ಕೋವಿಡ್-19 ಆತಂಕದ ನಡುವೆಯೇ ದ.ಕ. ಡಿಸಿ ವರ್ಗಾವಣೆ ಪ್ರಯತ್ನ !
Team Udayavani, May 19, 2020, 7:00 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೋವಿಡ್-19 ಮಹಾಮಾರಿ ವ್ಯಾಪಕ ವಾಗಿ ಹರಡುತ್ತಿರುವ ನಡುವೆಯೇ ದಿಢೀರಾಗಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ತೆರೆಮರೆಯಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯು ತ್ತಿರುವುದು ಗೊತ್ತಾಗಿದೆ.
ಮೂಲಗಳ ಪ್ರಕಾರ, ಜಿಲ್ಲಾಡಳಿತದಲ್ಲಿ ಆಡಳಿತಾತ್ಮಕ ಬದಲಾವಣೆ ತರುವುದಕ್ಕೆ ಕೆಲವು ಪ್ರಭಾವಿ ರಾಜಕೀಯ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ವರ್ಗಾವಣೆ ಯತ್ನ ನಡೆಯುತ್ತಿರು ವುದು ನಿಜ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ನಡುವೆ ಸಾಮಾಜಿಕ ಜಾಲ ತಾಣದಲ್ಲಿ ಜಿಲ್ಲಾಧಿಕಾರಿ ಹಾಗೂಅಪರ ಜಿಲ್ಲಾಧಿಕಾರಿಗಳ ವರ್ಗಾ ವಣೆ ಬಹುತೇಕ ಖಚಿತ ಎಂಬ ವಿಚಾರವು ಸೋಮವಾರ ಬೆಳಗ್ಗಿನಿಂದ ಹರಿದಾಡುತ್ತಿತ್ತು. ಜಿಲ್ಲೆಯಲ್ಲಿ ಸೋಂಕು ಮೂಲ ಪತ್ತೆ ವಿಳಂಬಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಈಗಾಗಲೇ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಈ ಎಲ್ಲ ಬೆಳವಣಿಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಕಟ್ಟು-ನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿತ್ತು ಎನ್ನಲಾಗಿದೆ. ಈ ಹಂತದಲ್ಲಿ ಜಿಲ್ಲಾಧಿ ಕಾರಿಯನ್ನು ವರ್ಗಾವಣೆ ಮಾಡಿದರೆ ಅದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆ ಹಾಗೂ ಅನುಮಾನಕ್ಕೆ ಎಡೆ ಮಾಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ