ಗದಗ ನಗರದ 80ರ ವೃದ್ಧೆಗೆ ಸೋಂಕು: 44 ಜನರ ವೈದ್ಯಕೀಯ ತಪಾಸಣೆ
Team Udayavani, Apr 7, 2020, 3:30 PM IST
ಗದಗ: ಜಿಲ್ಲೆಯ ಮೊದಲ ಕೋವಿಡ್-19 ಸೋಂಕು ಮಂಗಳವಾರ ದೃಢ ಪಟ್ಟಿದೆ. ನಗರದ ದತ್ತಾತ್ರೇಯ ರಸ್ತೆಯ ರಂಗನವಾಡ ಓಣಿಯ ನಿವಾಸಿ 80 ವರ್ಷದ ವೃದ್ಧೆಗೆ ಕೊರೋನಾ ಸೋಂಕು ತಗುಲಿದೆ. ಅವರೊಂದಿಗೆ ಸಂಪರ್ಕದಲ್ಲಿ ಒಟ್ಟು 44 ಜನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ರಂಗನವಾಡ ಓಣಿ ನಿವಾಸಿಯಾಗಿರುವ 80 ವರ್ಷದ ವೃದ್ಧೆ ತನ್ನ ತಂಗಿಯ ಮನೆಯಲ್ಲಿ ವಾಸವಿದ್ದಾಳೆ. ವೃದ್ಧೆ, ಆಕೆಯ ತಂಗಿ ಹಾಗೂ ಅವರ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಒಟ್ಟಾಗಿ ವಾಸವಿದ್ದರು.
ಇತ್ತೀಚೆಗೆ ಎಸ್.ಎಂ.ಕೃಷ್ಣಾ ನಗರದಲ್ಲಿ ನಡೆದಿದ್ದ ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ಆಕೆ ಭಾಗವಹಿಸಿದ್ದರು. ಇದೇ ಕಾರ್ಯಕ್ರಕ್ಕೆ ಗೋವಾದಿಂದ ಏಳು ಜನರು ಆಗಮಿಸಿದ್ದು, ಅವರಿಂದ ಸೋಂಕು ಹರಡಿರಬಹುದು ಎಂದು ಸಂಶಯ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ವೃದ್ಧೆಯೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಒಟ್ಟು 44 ಜನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ತಿಳಿಸಿದರು.
ದೇಶಾದ್ಯಂತ ಕೋವಿಡ್-19 ಭೀತಿ ಆವರಿಸಿದ್ದರೂ, ಜಿಲ್ಲೆಯಲ್ಲಿ ಈವರೆಗೂ ವೈರಸ್ ಪತ್ತೆಯಾಗಿರಲಿಲ್ಲ. ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಾಕಷ್ಟು ಉಪಕ್ರಮಗಳನ್ನಯ ಕೈಗೊಂಡಿತ್ತು. ಆದರೂ, ಇದೀಗ ಜಿಲ್ಲೆಯಲ್ಲಿ ಒಂದು ಪ್ರಕರಣ ದೃಢ ಪಟ್ಟಿರುವುದು ವಿಷಾದನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಜಿಲ್ಲಾದ್ಯಂತ ನೀರಿಗಾಗಿ ಹಾಹಾಕಾರ ಶುರು-ಅಂತರ್ಜಲ ಮಟ್ಟ ಕುಸಿತ
Gadag: ಜಮೀನು ಮಾರಾಟದ ಹಣಕ್ಕಾಗಿ ತಂದೆಯನ್ನೇ ಕೊಂದ ಮಕ್ಕಳು
Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ
Mundargi; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಕೊಲೆಗೈದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!
ಧರ್ಮ ಪಾಲನೆಯಿಂದ ಶಾಂತಿ ಸಾಧ್ಯ; ಸಂಪತ್ತಿನೊಂದಿಗೆ ಶಿವಜ್ಞಾನವು ಮುಖ್ಯ
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ