ಈ ವರ್ಷದಲ್ಲಿ ಮೊದಲ ಬಾರಿ ಒಂದು ಸಾವಿರ ಗಡಿದಾಟಿದ ಕೋವಿಡ್ ಕೇಸ್
Team Udayavani, Mar 16, 2021, 10:50 PM IST
ಬೆಂಗಳೂರು: ಹೊಸ ವರ್ಷದಿಂದೀಚೆಗೆ ಮೊದಲ ಬಾರಿ ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ಪ್ರಕರಣಗಳು ಒಂದು ಸಾವಿರ ಗಡಿದಾಟಿವೆ. ಮಂಗಳವಾರ 1,135 ಮಂದಿಗೆ ಸೋಂಕು ತಗುಲಿದ್ದು, ಆರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕಳೆದ ವರ್ಷ ಡಿ.25 ರಂದು 1,005 ಹೊಸ ಪ್ರಕರಣಗಳು ವರದಿಯಾಗಿದ್ದವು. ಆ ಬಳಿಕ ಪ್ರಕರಣಗಳು ಇಳಿಮುಖವಾಗಿ ಸಾಗಿ 200 ಆಸುಪಾಸಿಗೆ ತಲುಪಿದ್ದವು. ಮತ್ತೆ 80 ದಿನಗಳ ನಂತರ, 2021 ರಲ್ಲಿ ಮೊದಲ ಬಾರಿ ಒಂದೇ ದಿನದಲ್ಲಿ ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಅತಿ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ 710, ಮೈಸೂರು 58, ದಕ್ಷಿಣ ಕನ್ನಡ 50, ಕಲಬುರಗಿ 46, ಬೆಂಗಳೂರು ಗ್ರಾಮಾಂತರ 38, ತುಮಕೂರು, ಬೀದರ್ ಹಾಗೂ ಉಡುಪಿ ತಲಾ 32, ಬೆಳಗಾವಿ 12, ಹಾಸನ 15, ವಿಜಯಪುರ 13, ಚಿಕ್ಕಬಳ್ಳಾಪುರ 14, ಚಿತ್ರದುರ್ಗ 11 ಹೊರತುಪಡಿಸಿದರೆ ರಾಜ್ಯದ ಬಾಕಿ 16 ಜಿಲ್ಲೆಗಳಲ್ಲಿ ಬೆರಳೆಣಿಕೆ, ಚಾಮರಾಜನಗರ, ಹಾವೇರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನ ಮೂರು ಮಂದಿ, ಧಾರವಾಡ, ಮೈಸೂರು, ಕಲಬುರಗಿಯ ತಲಾ ಒಬ್ಬರು ಸೇರಿ ಆರು ಮಂದಿ ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ :ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು
ಸತತ ಏಳು ದಿನಗಳಿಂದ ಏರಿಕೆ ಹಾದಿಯಲ್ಲಿದ್ದ ಸಾಗಿದ್ದ ಕೊರೊನಾ ಪ್ರಕರಣಗಳು ಸೋಮವಾರ ಎರಡು ಪ್ರಕರಣಗಳು ಕಡಿಮೆಯಾಗಿದ್ದವು. ಆದರೆ, ಮಂಗಳವಾರ ಒಂದು ಸಾವಿರ ಗಡಿದಾಟಿರುವುದು ಆತಂಕ ಹೆಚ್ಚಿಸಿದೆ. ಸೋಂಕು ಇದೇ ರೀತಿ ಏರಿಕೆಯಲ್ಲೆ ಸಾಗಿದರೆ ಮತ್ತೆ ಲಾಕ್ಡೌನ್ ಸಾಧ್ಯತೆಗಳು ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ 68,479 ಪರೀಕ್ಷೆಗಳು ನಡೆದಿವೆ. ರಾಜ್ಯದ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 9.62 ಲಕ್ಷಕ್ಕೆ ಹೆಚ್ಚಳವಾಗಿದ್ದು, 9.4 ಲಕ್ಷ ಮಂದಿ ಗುಣಮುಖರಾಗಿದ್ದಾರೆ. 12403 ಸೋಂಕಿತರು ಸಾವಿಗೀಡಾಗಿದ್ದಾರೆ. 9,428 ಸೋಂಕಿತರು ಆಸ್ಪತ್ರೆ, ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಈ ಪೈಕಿ 129 ಮಂದಿ ಪರಿಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !