ಒಂದು ವಾರದಲ್ಲಿ ಕೋವಿಡ್ ನಾಲ್ಕನೆ ಅಲೆಯ ಚಿತ್ರಣ : ಡಾ. ಸುಧಾಕರ್
ಮಾಸ್ಕ್ ಧರಿಸುವುದೇ ಉತ್ತಮ
Team Udayavani, Apr 20, 2022, 12:56 PM IST
ಬೆಂಗಳೂರು: ಮುಂದಿನ ಒಂದು ವಾರದಲ್ಲಿ ರಾಜ್ಯದಲ್ಲಿ ಕೋವಿಡ್ ನಾಲ್ಕನೆ ಅಲೆಯ ಚಿತ್ರಣ ಗೊತ್ತಾಗಬಹುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಹಾವಳಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಸದ್ಯಕ್ಕೆ ಇನ್ನೂ ಆ ಪರಿಸ್ಥಿತಿ ಇಲ್ಲ. ಮುಂದೊಂದು ವಾರದಲ್ಲಿ ಸ್ಪಷ್ಟ ಚಿತ್ರಣ ಸಿಗಬಹುದು ಎಂದರು.
ಸದ್ಯಕ್ಕೆ ಮಾಸ್ಕ್ ಕಡ್ಡಾಯ ಇಲ್ಲ. ಆದರೆ, ಸಭೆ- ಸಮಾರಂಭಗಳಲ್ಲಿ ಪಾಲನೆ ಮಾಡುವಂತೆ ಕಟ್ಟುನಿಟ್ಟಾಗಿ ಸೂಚಿಸುವುದರ ಜತೆಗೆ ನಿರ್ವಹಣೆ ಮಾಡಲಾಗುತ್ತಿದೆ. ಅದೇನೇ ಇರಲಿ, ಮಾಸ್ಕ್ ಧರಿಸುವುದು ಉತ್ತಮ ಎಂದು ಹೇಳಿದರು.