2ನೇ ಅಲೆ ನಿಯಂತ್ರಣಕ್ಕೆ ಅಧಿಕಾರಿಗಳು ಮಾರ್ಗಸೂಚಿ ಪಾಲಿಸಿ, ತಪ್ಪಿದರೆ ಕ್ರಮ: ಡಿಸಿ ಸೂಚನೆ


Team Udayavani, Apr 27, 2021, 7:12 PM IST

2ನೇ ಅಲೆ ನಿಯಂತ್ರಣಕ್ಕೆ ಎಲ್ಲ ಅಧಿಕಾರಿಗಳು ಮಾರ್ಗಸೂಚಿ ಪಾಲಸಿ, ತಪ್ಪಿದರೆ ಕ್ರಮ: ಡಿಸಿ ಸೂಚನೆ

ಉಡುಪಿ: ಕೋವಿಡ್‌ 2ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎ. 27 ರಿಂದ ಮೇ 12ರ ವರೆಗೆ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಮಾರ್ಗಸೂಚಿಗಳನ್ನು ಕಾಟಾಚಾರಕ್ಕೆ ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ಧ ಎಪಿಡಮಿಕ್‌ ಕಾಯಿದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಎಚ್ಚರಿಕೆ ನೀಡಿದರು.

ಅವರು ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ಕೋವಿಡ್‌ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ಜಿಲ್ಲೆಯಲ್ಲಿ ಕೋವಿಡ್‌ ಉಲ್ಬಣವಾಗುವುದನ್ನು ನಿಯಂತ್ರಿಸಬೇಕು. ರೈಲು ಮತ್ತು ವಿಮಾನ ಪ್ರಯಾಣ ಮಾಡುವವರನ್ನು ಅವರು ಹೊಂದಿರುವ ಅಧಿಕೃತ ಟಿಕೆಟ್‌ ಆಧಾರದಲ್ಲಿ ಸಂಚಾರಕ್ಕೆ ಅನುಮತಿ ನೀಡಿ. ತುರ್ತು ಆರೋಗ್ಯ ಸಮಸ್ಯೆಯಿರುವ ರೋಗಿಗಳು ಆಟೋ, ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳಲ್ಲಿ ಸಂಚರಿಸಲು ಅನುಮತಿ ಇದೆ. ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶವಿದೆ ಎಂದರು.

ಇದನ್ನೂ ಓದಿ :ಕೊಪ್ಪಳದಲ್ಲಿ ಮುಸ್ಲಿಂ ಯುವಕರಿಂದ ಹಿಂದೂ ವೃದ್ಧನ ಅಂತ್ಯಸಂಸ್ಕಾರ

ಅವಶ್ಯಕ ಮತ್ತು ತುರ್ತು ಸೇವೆ ಒದಗಿಸುವ ಸಿಬಂದಿಗಳಿಗೆ ಅವರ ಗುರುತಿನ ಚೀಟಿ ಆಧಾರದಲ್ಲಿ ಸಂಚರಿಸಲು ಅವಕಾಶ ಇದೆ. ಗಾರ್ಮೆಂಟ್ಸ್‌ ಹೊರತುಪಡಿಸಿ ಎಲ್ಲ ಕೈಗಾರಿಕೆಗಳಲ್ಲಿ ಹಾಗೂ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಸೂಕ್ತ ಗುರುತಿನ ಚೀಟಿ ಹೊಂದಿ ಸಂಚರಿಸಲು ಅವಕಾಶ ಇದೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್‌ ಮಾಧ್ಯಮದವರು ತಮ್ಮ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು. ಸರಕು ಸಾಗಾಣಿಕೆ ವಾಹನಗಳು ಲೋಡ್‌ ಮತ್ತು ಅನ್‌ಲೋಡ್‌ ಮಾಡಿ ಸಂಚರಿಸಲು ಯಾವುದೇ ನಿರ್ಭಂಧಗಳಿಲ್ಲ. ಅಂತಹ ವಾಹನಗಳನ್ನು ತಡೆಯಬಾರದು ಎಂದು ಡಿಸಿ ಹೆಳಿದರು.

ಬೆಳಗ್ಗೆ 6ರಿಂದ 10ರ ವರೆಗೆ ಅವಕಾಶ
ದಿನಬಳಕೆಯ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 6 ರಿಂದ 10 ರ ವರೆಗೆ ಅವಕಾಶವಿದ್ದು, ಸಾರ್ವಜನಿಕರು ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಬೇಕು. ಅನಾವಶ್ಯಕವಾಗಿ ಸಂಚರಿಸಬಾರದು.

ಲಸಿಕೆ: ಅಂತರ ಅಗತ್ಯ
ಕೋವಿಡ್‌ ಲಸಿಕೆ ಪಡೆಯುವವರು ತಮ್ಮ ಸಮೀಪದ ಆಸ್ಪತ್ರೆಗಳಿಗೆ ಮಾತ್ರ ತೆರಳಿ, ಲಸಿಕೆ ಪಡೆಯಲು ಅವಕಾಶವಿದೆ. ಲಸಿಕೆ ಪಡೆಯುವ ಉದ್ದೇಶದಿಂದ ಅನಗತ್ಯ ಸಂಚಾರ ಮಾಡುವಂತಿಲ್ಲ. ಲಸಿಕೆ ನೀಡುವ ಕೇಂದ್ರಗಳಲ್ಲಿ ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ನೀಡಲು ವ್ಯವಸ್ಥೆ ಮಾಡುವಂತೆ ಡಿಸಿ ಸೂಚನೆ ನೀಡಿದರು.

ನಿರ್ಮಾಣ, ಮೀನುಗಾರಿಕೆ
ಕಟ್ಟಡ ನಿರ್ಮಾಣ ಚಟುವಟಿಕೆಗೆ ಅವಕಾಶವಿದ್ದು, ಕಾರ್ಮಿಕರಿಗೆ ಸಂಬಂಧಪಟ್ಟ ನಿರ್ಮಾಣ ಸಂಸ್ಥೆ ಅಥವಾ ಮಾಲೀಕರು ಸೂಕ್ತ ಗುರುತಿನ ಚೀಟಿ ಒದಗಿಸಬೇಕು. ಮೀನುಗಾರಿಕೆಯನ್ನು ನಿಗದಿತ ಅವಧಿಯೊಳಗೆ ಮಾಡಲು ಕ್ರಮ ಕೈಗೊಳ್ಳಿ. ಕೃಷಿ ಚಟುವಟಿಕೆ ನಡೆಸಲು ನಿರ್ಬಂಧಗಳಿಲ್ಲ.

ಮದುವೆಗೆ 50, ಶವಸಂಸ್ಕಾರಕ್ಕೆ 5 ಮಂದಿ
ಮದುವೆ ಕಾರ್ಯಕ್ರಮಕ್ಕೆ 50 ಮಂದಿ, ಶವ ಸಂಸ್ಕಾರಕ್ಕೆ 5 ಮಂದಿ ಮಾತ್ರ ಭಾಗವಹಿಸಲು ಅವಕಾಶವಿದೆ. ಮೊನ್ನೆ ನಡೆದ ವಿವಾಹ ಕಾರ್ಯಕ್ರಮಗಳ ಬಗ್ಗೆ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಕೋವಿಡ್‌ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಂಡಿದ್ದಾರೆ. ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೇ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿ.ಜಗದೀಶ್‌ ಹೇಳಿದರು.

ಜಿ.ಪಂ. ಸಿಇಓ ಡಾ| ನವೀನ್‌ ಭಟ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಬಾಗಾಧಿಕಾರಿ ರಾಜು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಫ‌ಡ್ನೇಕರ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.