ಹೆಚ್ಚುತ್ತಿರುವ ಕೋವಿಡ್ ಪ್ರಕರಣ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
Team Udayavani, Apr 16, 2021, 10:26 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಸರಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರಂತೆ ರಾಜ್ಯದಲ್ಲಿ ನಡೆಸುವ ಸಾರ್ವಜನಿಕ ಸಮಾರಂಭಗಳು, ಆಚರಣೆಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳಿಗೆ ಹೆಚ್ಚಿನ ಮಿತಿಯನ್ನು ಹೇರಲಾಗಿದೆ. ಈ ಹೊಸ ಮಾರ್ಗಸೂಚಿಯು ಏಪ್ರಿಲ್ 30 ರ ವರೆಗೆ ಜಾರಿಯಲ್ಲಿರಲಿದೆ.
ಮಾರ್ಗಸೂಚಿಗಳು :
– ತೆರೆದ ಪ್ರದೇಶದಲ್ಲಿ ನಡೆಸುವ ಮದುವೆ ಕಾರ್ಯಕ್ರಮಗಳಲ್ಲಿ 200 ಮಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಹಾಗೂ ಕಲ್ಯಾಣ ಮಂಟಪ, ಹಾಲ್ ಹಾಗೂ ಸಭಾಂಗಣಗಳಲ್ಲಿ ನಡೆಸುವ ಮದುವೆಗೆ 100 ಮಂದಿಗೆ ಅವಕಾಶ ಕಲ್ಪಿಸಲಾಗಿದೆ.
– ಹುಟ್ಟು ಹಬ್ಬ ಆಚರಣೆ ಹಾಗೂ ಇತರ ಸಂಭ್ರಮಾಚರಣೆಗಳಲ್ಲಿ ತೆರೆದ ಪ್ರದೇಶದಲ್ಲಿ 50 ಮಂದಿಗೆ ಹಾಗೂ ಸಭಾಂಗಣ ಮತ್ತು ಹಾಲ್ ಗಳಲ್ಲಿ 25 ಮಂದಿಗೆ ಅವಕಾಶ.
– ನಿಧನರಾದವರ ಅಂತಿಮ ದರ್ಶನಕ್ಕೆ 50 ಜನರಿಗೆ ಮಾತ್ರ ಅವಕಾಶ, ಹಾಗೂ ಅಂತ್ಯಕ್ರೀಯೆಯಲ್ಲಿ ಭಾಗವಹಿಸಲು 25 ಮಂದಿಗೆ ಮಾತ್ರ ಅವಕಾಶ.
– ಇತರ ಸಮಾರಂಭಗಳಲ್ಲೂ 50 ಮಂದಿಯನ್ನು ಮೀರದಂತೆ ಕಾರ್ಯಕ್ರಮಗಳನ್ನು ನಡೆಸಲು ಮಿತಿ ಹೇರಲಾಗಿದೆ.
ಇದನ್ನೂ ಓದಿ :ಸಿಡಿ ಪ್ರಕರಣ : ಏ.20ರಂದು ವಿಚಾರಣೆಗೆ ಹಾಜರಾಗುವಂತೆ ರಮೇಶ್ ಜಾರಕಿಹೊಳಿಗೆ ಎಸ್ಐಟಿ ನೋಟಿಸ್
ಧಾರ್ಮಿಕ ಆಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಪ್ರಕಟಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ