ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ
ಆಯ್ದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಮಾತ್ರ ಈ ಅನುಕೂಲ
Team Udayavani, Oct 20, 2021, 9:15 PM IST
ನವದೆಹಲಿ: ಹೊರದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಹಿಂದೆ ವಿಧಿಸಲಾಗಿದ್ದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಎರಡು ಡೋಸ್ ಕೊರೊನಾ ಲಸಿಕೆಯನ್ನು ಪಡೆದಿರುವ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್ ಹಾಗೂ ಇನ್ನಿತರ ಮರುಪರೀಕ್ಷೆಗಳಿಂದ ವಿನಾಯ್ತಿ ನೀಡಲಾಗಿದೆ. ಆರ್ಟಿ-ಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರವನ್ನು ತೋರಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಪ್ರಮಾಣಪತ್ರಗಳ ಖಚಿತತೆ ಖಾತ್ರಿಯಾಗದ ಹೊರತು ಯಾರನ್ನೂ ವಿಮಾನ ನಿಲ್ದಾಣದಿಂದ ಆಚೆ ಕಳಿಸಲಾಗದು. ಈ ಹೊಸ ನಿಯಮಗಳು ಅ. 25ರಿಂದ ಜಾರಿಗೊಳ್ಳಲಿದ್ದು, ಈ ಹಿಂದೆ, ಫೆ. 17ರಂದು ವಿದೇಶಿ ಪ್ರಯಾಣಿಕರಿಗಾಗಿ ಜಾರಿಗೊಳಿಸಲಾಗಿದ್ದ ಮಾರ್ಗಸೂಚಿಗಳ ಬದಲಾಗಿ ಜಾರಿಗೊಳ್ಳುತ್ತದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತ ಸರ್ಕಾರಗಳಿಂದ ಅಂಗೀಕೃತಗೊಂಡಿರುವ ದೇಶಗಳಿಂದ ಆಗಮಿಸುವವರಿಗೆ ಮಾತ್ರ ಭಾರತಕ್ಕೆ ಬರಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡೋಸ್ ಪಡೆಯದಿದ್ದರೆ ಕ್ವಾರಂಟೈನ್
ಒಂದು ಡೋಸ್ ಪಡೆದವರು ಅಥವಾ ಯಾವುದೇ ಡೋಸ್ ಪಡೆಯದಿದ್ದವರು, ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಅವರು ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪರೀಕ್ಷೆಗಳಿಗಾಗಿ ಸ್ಯಾಂಪಲ್ಗಳನ್ನು ಸಂಗ್ರಹಿಸಿದ ನಂತರ ಅವರನ್ನು ವಿಮಾನ ನಿಲ್ದಾಣದಿಂದ ಹೊರಕ್ಕೆ ಹೋಗಲು ಅನುಮತಿ ನೀಡಲಾಗುತ್ತದೆ. ಕೊರೊನಾ ಲಕ್ಷಣಗಳಿದ್ದರೆ, ಕಡ್ಡಾಯವಾಗಿ 7 ದಿನಗಳ ಕ್ವಾರಂಟೈನ್ಗೆ ಒಳಪಡಬೇಕಾಗುತ್ತದೆ. ಎಂಟನೇ ದಿನ ಅವರು ಪುನಃ ಮರು ಪರೀಕ್ಷೆಗೊಳಗಾಗಬೇಕಿರುತ್ತದೆ. ಆಗ, ಪುನಃ ನೆಗೆಟಿವ್ ಫಲಿತಾಂಶ ಬಂದರೆ, ಅಂಥವರು ಇನ್ನೂ ಏಳು ದಿನ ಸ್ವಯಂ ಅವಗಾಹನೆಗೆ ಒಳಪಡಬೇಕಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ :ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ
ಯಾವ ದೇಶದಿಂದ ಬರುವವರಿಗೆ ಅನ್ವಯ?
ಯುನೈಟೆಡ್ ಕಿಂಗ್ಡಮ್, ಫ್ರಾನ್ಸ್, ಜರ್ಮನಿ, ನೇಪಾಳ, ಬೆಲಾರಸ್, ಲೆಬನಾನ್, ಅರ್ಮೇನಿಯಾ, ಉಕ್ರೇನ್, ಬೆಲ್ಜಿಯಂ, ಹಂಗೇರಿ, ಸರ್ಬಿಯಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!