ದಾವಣಗೆರೆ ಜಿಲ್ಲೆಯಲ್ಲಿಂದು ಮತ್ತೆ ಮೂವರಿಗೆ ಕೋವಿಡ್ ಸೋಂಕು ದೃಢ
Team Udayavani, Jun 20, 2020, 9:18 PM IST
ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ ಮತ್ತೆ ಹೊಸದಾಗಿ ಮೂರು ಕೋವಿಡ್-19 ಪ್ರಕರಣ ದೃಢಪಟ್ಟಿವೆ. ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
ರೋಗಿ ನಂಬರ್ 7778ರ ಸಂಪರ್ಕದಿಂದ 38 ವರ್ಷದ ವ್ಯಕ್ತಿ(ರೋಗಿ ನಂಬರ್ 8490) ಹಾಗೂ 30 ವರ್ಷದ ಮಹಿಳೆ(ರೋಗಿ ನಂಬರ್ 8491) ಸೋಂಕು ಕಾಣಿಸಿಕೊಂಡಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ 54 ವರ್ಷದ ವೃದ್ಧೆ(ರೋಗಿ ನಂಬರ್ 8492) ಸೋಂಕು ದೃಢಪಟ್ಟಿದೆ.
ಕೋವಿಡ್-19 ಸೋಂಕಿಗೆ ತುತ್ತಾಗಿದ್ದ 90 ವರ್ಷದ ವಯೋವೃದ್ಧ(ರೋಗಿ ನಂಬರ್ 7208) ಶನಿವಾರ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಜೂ.13 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟಾರೆ 7 ಜನರು ಮಹಾಮಾರಿ ಕೊರೊನಾಕ್ಕೆ ಬಲಿಯಾಗಿದ್ದಾರೆ.
ಕೋವಿಡ್ದಿಂದ ಗುಣಮುಖರಾದ ರೋಗಿ ನಂಬರ 6040, 5169, 6575, 6576, 6577 ಶನಿವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟು 248 ಪ್ರಕರಣಗಳಲ್ಲಿ ಇದುವರೆಗೆ 220 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ. 7 ಜನರು ಮೃತಪಟ್ಟಿದ್ದು, 21 ಸಕ್ರಿಯ ಪ್ರಕರಣಗಳಿವೆ.
ಶುಕ್ರವಾರ ಕೋವಿಡ್-19 ಚಿಕಿತ್ಸೆಗೆ ದಾಖಲಾಗಿದ್ದ ಐವರು ಗರ್ಭಿಣಿಯರಲ್ಲಿ 20 ವರ್ಷದ ದಾವಣಗೆರೆ ತಾಲೂಕಿನ ದೊಡ್ಡಬಾತಿ ಗ್ರಾಮದ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಐವರ ಸೋಂಕಿನ ಬಗ್ಗೆ ಖಚಿತಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ. ಭಾನುವಾರ ವರದಿ ದೊರೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!
ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?
ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ
ಸಿಎಂ ದಾವೋಸ್ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ
ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!
ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ
ಮಳಲಿ ಮಸೀದಿಯ ಸರ್ವೇ ನಡೆಯಬೇಕು, ಜನರು ಸತ್ಯ ತಿಳಿಯಲಿ: ಡಾ ಸುರೇಂದ್ರ ಕುಮಾರ್ ಜೈನ್
ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಪೆರ್ಮುದೆಯಲ್ಲಿ ಜಿಲ್ಲೆಯ ಪ್ರಥಮ ಬೀಕನ್ ಲೈಬ್ರೆರಿ