ಕೋವಿಡ್‌ನಿಂದ ದೀರ್ಘ‌ಕಾಲಿಕ ಪ್ರತಿರಕ್ಷಣೆೆ ಮುಖ್ಯ


Team Udayavani, Feb 18, 2021, 7:15 AM IST

ಕೋವಿಡ್‌ನಿಂದ ದೀರ್ಘ‌ಕಾಲಿಕ ಪ್ರತಿರಕ್ಷಣೆೆ ಮುಖ್ಯ

ದೇಶದಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಿ ಫೆಬ್ರವರಿ 16ಕ್ಕೆ ಒಂದು ತಿಂಗಳಾಗಿದೆ. 28 ದಿನಗಳ ಅನಂತರ ಜನರಿಗೆ ಎರಡನೇ ಡೋಸ್‌ ಕೂಡ ಆರಂಭಿಸಲಾಗುತ್ತಿದೆ. ಇದರ ನಡುವೆಯೇ ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲೂ ಗಣನೀಯ ಇಳಿಕೆಯಾಗಿದೆಯಾದರೂ, ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಮತ್ತೆ ಹೆಚ್ಚುತ್ತಿರುವ ಸಂಖ್ಯೆ ಗಾಬರಿ ಹುಟ್ಟಿಸುವಂತಿದೆ.

ಆದಾಗ್ಯೂ ಗಮನಿಸಬೇಕಾದ ಸಂಗತಿಯೆಂದರೆ, ಜಗತ್ತಿನಾದ್ಯಂತ ಕೋವಿಡ್‌ ಸಾಂಕ್ರಾಮಿಕದ ಮೊದಲನೆ ಅಲೆ ಮುಗಿಯುತ್ತಿದ್ದಂತೆಯೇ ಎರಡನೇ ಅಲೆಯನ್ನು ಎದುರಿಸಿದ ಅನೇಕ ರಾಷ್ಟ್ರಗಳಿವೆ. ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಒಂದು ಹಂತದಲ್ಲಿ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಗಳು ಬಹಳವೇ ಕೆಳಕ್ಕೆ ಕುಸಿದಿದ್ದವು. ಆದರೆ ಈ ಎಲ್ಲ ರಾಷ್ಟ್ರಗಳಲ್ಲೂ ಹೇಗೆ ಪ್ರಕರಣಗಳ ಸಂಖ್ಯೆ ಅಧಿಕವಾಯಿತು ಎನ್ನುವುದನ್ನು ನಾವು ನೋಡಿದ್ದೇವೆ.

ಭಾರತದಲ್ಲಿ ಎರಡನೆ ಅಲೆಯ ಆರಂಭ ವ್ಯಾಪಕವಾಗಿ ಆಗಬಹುದೇ ಎನ್ನುವ ಬಗ್ಗೆ ಪರ-ವಿರೋಧದ ವಾದಗಳಂತೂ ಇವೆ. ಕೆಲವು ತಜ್ಞರು ಎರಡನೆಯ ಅಲೆಯ ಸಾಧ್ಯತೆಯನ್ನು ಅಲ್ಲಗಳೆದರೆ, ಇನ್ನೂ ಕೆಲವರು ಆ ಅಪಾಯದ ತೂಗುಗತ್ತಿ ತೂಗಾಡುತ್ತಲೇ ಇದೆ ಎಂದು ಎಚ್ಚರಿಸುತ್ತಾರೆ. ಕಳೆದ ವರ್ಷದ ಸೆಪ್ಟಂಬರ್‌ ತಿಂಗಳಲ್ಲಿ ಭಾರತದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಉತ್ತುಂಗ ತಲುಪಿತ್ತು, ಆಗ ನಿತ್ಯ ಹತ್ತಿರಹತ್ತಿರ 1 ಲಕ್ಷ ಪ್ರಕರಣಗಳು ದಾಖಲಾಗುತ್ತಿದ್ದವು. ಈಗ 11 ಸಾವಿರದ ಆಸುಪಾಸು ಪ್ರಕರಣಗಳು ವರದಿಯಾಗುತ್ತಿವೆೆ.

ಆದರೆ ನೆನಪಿಡಬೇಕಾದ ಸಂಗತಿಯೆಂದರೆ ಪ್ರಕರಣಗಳ ಇಳಿಕೆಯಲ್ಲಿ ಲಸಿಕೆಯ ಭೂಮಿಕೆಯೇನೂ ಇಲ್ಲ. ಏಕೆಂದರೆ, ಲಸಿಕೆ ಪ್ರಕ್ರಿಯೆ ಆರಂಭವಾಗಿ ಇನ್ನೂ ಒಂದು ತಿಂಗಳಾಗಿದೆ. ಎರಡನೇ ಡೋಸ್‌ ಪಡೆಯದವರ ಸಂಖ್ಯೆಯೂ ಬಹಳಷ್ಟಿದೆ ಎಂದು ವರದಿಯಾಗುತ್ತಿವೆ. ಎರಡನೆಯದಾಗಿ, ಪ್ರಸಕ್ತ ಲಸಿಕೆಯನ್ನು ವೈದ್ಯರು, ಆಸ್ಪತ್ರೆ ಸಿಬಂದಿಯಂಥ ಫ್ರಂಟ್ ಲೈನ್‌ ಕೊರೊನಾ ವಾರಿಯರ್‌ಗಳಿಗಷ್ಟೇ ನೀಡಲಾಗುತ್ತಿದೆ. ಲಸಿಕೆಯ ಪೂರ್ಣ ಪರಿಣಾಮ ಎರಡನೇ ಡೋಸ್‌ ಮುಗಿದ ಕೆಲವು ದಿನಗಳ
ಅನಂತರವೇ ತಿಳಿಯುತ್ತದೆ.

ಹಾಗಿದ್ದರೆ ಈಗ ಪ್ರಕರಣಗಳು ತಗ್ಗಿರುವುದೇಕೆ ಎನ್ನುವ ಬಗ್ಗೆಯೂ ಚರ್ಚೆ ಆರಂಭವಾಗಿದೆ. ಕೆಲವು ಪರಿಣಿತರ ಪ್ರಕಾರ ದೇಶವಾಸಿಗಳ ದೇಹದಲ್ಲಿ ಭಾರೀ ಪ್ರಮಾಣದಲ್ಲಿ ನೈಸರ್ಗಿಕವಾಗಿ ಉತ್ಪನ್ನವಾಗಿರುವ ಪ್ರತಿಕಾಯಗಳೂ ಇದಕ್ಕೆ ಕಾರಣವಾಗಿರಬಹುದು. ಆದರೆ ಹೀಗೆ ಉತ್ಪನ್ನವಾದ ಪ್ರತಿಕಾಯಗಳು ಹೆಚ್ಚು ದಿನ ದೇಹದಲ್ಲಿ ಇರಲಾರವು ಎಂದೂ ಎಚ್ಚರಿಸಲಾಗುತ್ತಿದೆ. ದೀರ್ಘ‌ಕಾಲಿಕ ಪ್ರತಿರಕ್ಷಣ ವ್ಯವಸ್ಥೆಗೆ ಲಸಿಕೆಯೇ ಪರಿಹಾರ.

ಲಸಿಕೆ ಪ್ರಕ್ರಿಯೆಯ ಮುಂದಿನ ಚರಣ ಮಾರ್ಚ್‌ 1ರಿಂದ ಆರಂಭವಾಗಲಿದೆ. ಅಂದಿನಿಂದ 50 ವರ್ಷಕ್ಕೂ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದೆ. ಆದರೆ ಅಲ್ಲಿಯವರೆಗೂ ಭಾರತ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆಯಿಡಲೇಬೇಕಿದೆ. ಪ್ರತಿಯೊಬ್ಬರೂ ಸುರಕ್ಷತ ಕ್ರಮಗಳನ್ನು ಚಾಚೂ ತಪ್ಪದೇ ಪಾಲಿಸುವುದು ಅತ್ಯಗತ್ಯ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ ತಗ್ಗುವುದೂ ಸಹ ಜಾಗೃತಿಯ ದೃಷ್ಟಿಯಿಂದ ಮುಖ್ಯವಾಗಿದೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.