ಬಾಕಿ ಬಿಲ್ ಪಾವತಿಸಿ ಕೋವಿಡ್ ಸೋಂಕಿತನ ಶವ ಪಡೆಯಲು ಆಸ್ಪತ್ರೆ ತಾಕೀತು! ಸಂಬಂಧಿಕರ ಪ್ರತಿಭಟನೆ
Team Udayavani, Sep 23, 2020, 1:07 PM IST
ವಿಜಯಪುರ : ಕೋವಿಡ್ ಸೋಂಕಿತ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬಾಕಿ ಬಿಲ್ ಪಾವತಿಸಿ ಶವ ಪಡೆಯಲು ಆಸ್ಪತ್ರೆ ಸಿಬ್ಬಂದಿ ತಾಕೀತು ಮಾಡಿದ್ದಾರೆ. ಇದರಿಂದ ಮೃತನ ಕುಟುಂಬಸ್ತರು ತಮಟೆ ಬಾರಿಸುತ್ತ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ನಗರದ ಬಂಜಾರಾ ಕ್ರಾಸ್ ಬಳಿಯ ಕೋಟಿ ಆಸ್ಪತ್ರೆಯಲ್ಲಿ ಘಟನೆ ವರದಿಯಾಗಿದ್ದು, ಬೆಳಗಾವಿ ಜಿಲ್ಲೆ ಸಂಕೇಶ್ವರ ಮೂಲದ ರಾಜು ಬೋವಿ(40) ಎಂಬವರು ಕಳೆದ 12 ದಿನಗಳ ಹಿಂದೆ ನಗರ ಕೋಟಿ ಆಸ್ಪತ್ರೆಗೆ ದಾಖಲಾಗಿದ್ದರು.
ಸದರಿ ರೋಗಿ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಿಸದೇ ರಾಜು ಮೃತಪಟ್ಡಿದ್ದರು. ಇಷ್ಟಾದರೂ ಮೃತನ ಸಂಬಂಧಿಗಳು ಈಗಾಗಲೇ 4.87 ಲಕ್ಷ ರೂ. ಬಿಲ್ ಪಾವತಿಸಿದ್ದಾರೆ. ಇದೀಗ ಇನ್ನೂ 3 ಲಕ್ಷ ರೂ. ಬಾಕಿ ಬಿಲ್ ಭರಿಸಿ, ನಂತರವೇ ಮೃತ ದೇಹ ತೆಗೆದುಕೊಂಡು ಹೋಗವಂತೆ ಆಸ್ಪತ್ರೆ ವೈದ್ಯರು- ಸಿಬ್ಬಂದಿಗಳು ಸೂಚನೆ ನೀಡಿದ್ದಾರೆ.
ಆಸ್ಪತ್ರೆ ಸಿಬ್ಬಂದಿಯ ನಡೆ ಖಂಡಿಸಿ ಮೃತನ ಸಂಬಂಧಿಕರಿಂದ ಆಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ತಮಟೆ ಬಾರಿಸುವ ಮೂಲಕ ಹೋರಾಟ ನಡೆಸುತ್ತಿದ್ದಾರೆ.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರವ ಆದರ್ಶ ನಗರ ಠಾಣೆ ಪೊಲೀಸರು ಪರಿಸ್ಥಿತಿ ಸುಧಾರಣೆಗೆ ಮುಂದಾಗಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ