ಕೋವಿಡ್ : ಮುಂಜಾಗ್ರತೆಯೇ ಬಲುದೊಡ್ಡ ಲಸಿಕೆ


Team Udayavani, Mar 19, 2021, 7:25 AM IST

ಕೋವಿಡ್ : ಮುಂಜಾಗ್ರತೆಯೇ ಬಲುದೊಡ್ಡ ಲಸಿಕೆ

ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಎರಡನೇ ಅಲೆ ಕಾಣಿಸಿ­ಕೊಂಡಿದ್ದು ಜನರನ್ನು ತಲ್ಲಣಗೊಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಿಸಲಾರಂಭಿಸಿದ ಪರಿಣಾಮ ಕೇಂದ್ರ ಸರಕಾರ ಲಾಕ್‌ಡೌನ್‌ ಜಾರಿಗೊಳಿಸಿ ಹಲವಾರು ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮಗಳನ್ನು ಪಾಲಿಸುವಂತೆ ಜನತೆಗೆ ಸೂಚಿಸಿತ್ತು. ಈ ಸಂದರ್ಭದಲ್ಲಿ ದೇಶದ ಒಟ್ಟಾರೆ ವ್ಯವಸ್ಥೆಯಲ್ಲಾದ ಅಲ್ಲೋಲಕಲ್ಲೋಲದ ಪರಿಸ್ಥಿತಿ ಇನ್ನೂ ಜನಮಾನಸದಿಂದ ಮಾಸಿಲ್ಲ.

ಈಗ ಮತ್ತೆ ದೇಶದ ಕೆಲವೊಂದು ಅದರಲ್ಲೂ ಮಹಾರಾಷ್ಟ್ರ, ಪಂಜಾಬ್‌, ಮಧ್ಯಪ್ರದೇಶ, ಕರ್ನಾಟಕ, ಗುಜರಾತ್‌, ತಮಿಳುನಾಡು, ಪಶ್ಚಿಮ ಬಂಗಾಲ ರಾಜ್ಯಗಳಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚುತ್ತಲಿವೆ. ಒಂದೆಡೆಯಿಂದ ಸರಕಾರ ಹಂತಹಂತವಾಗಿ ಕೊರೊನಾ ಲಸಿಕೆ ನೀಡಿಕೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರೆ ಮತ್ತೂಂದೆಡೆಯಿಂದ ಸೋಂಕು ಕೂಡ ಮತ್ತೆ ಸಕ್ರಿಯವಾಗಿದೆ. ಸಹಜವಾಗಿಯೇ ಈ ಬೆಳವಣಿಗೆ ಸರಕಾರ ಮತ್ತು ಜನರನ್ನು ವಿಚಲಿತರನ್ನಾಗಿಸಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ ಕೊರೊನಾ ಎರಡನೇ ಅಲೆ ವ್ಯಾಪಿಸಿರು­ವುದನ್ನು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಬೇರೆ ರಾಜ್ಯ ಗ ಳಲ್ಲೂ ಇದೇ ಭೀತಿ ಇದೆ. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಉಳಿದ ರಾಜ್ಯಗಳಲ್ಲೂ ಎರಡನೇ ಅಲೆ ಹರಡುತ್ತಿರುವ ಬಗೆಗೆ ಸರಕಾರದಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ­ವಾದರೂ ಇಂತಹ ಒಂದು ಮುನ್ಸೂಚನೆಯಂತೂ ಲಭಿಸಿದೆ. ಕಳೆದ ವರ್ಷದಂತೆ ಈ ಬಾರಿಯೂ ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಲಾಕ್‌ಡೌನ್‌, ರಾತ್ರಿ ಕರ್ಫ್ಯೂನಂತಹ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಧ್ಯಪ್ರದೇಶ, ಗುಜರಾತ್‌, ಪಂಜಾಬ್‌ ಮತ್ತು ಉತ್ತರಾಖಂಡ್‌ನ‌ ಕೆಲವೊಂದು ನಗರಗಳಲ್ಲೂ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ಕೆಲವೊಂದು ರಾಜ್ಯಗಳಂತೂ ಹೊರ ರಾಜ್ಯಗಳಿಂದ ಬರುವವರಿಗೆ ಆರ್‌ಟಿ-­ಪಿಸಿಆರ್‌ ಪರೀಕ್ಷೆ ಕಡ್ಡಾಯಗೊಳಿಸಿವೆ ಮಾತ್ರವಲ್ಲದೆ ಕೋವಿಡ್‌ ಪ್ರಕರಣ­ಗಳು ಹೆಚ್ಚಿರುವ ರಾಜ್ಯಗಳಿಂದ ಬಂದವರಿಗೆ ಏಳು ದಿನಗಳ ಕ್ವಾರಂಟೈನ್‌ ಅನ್ನು ಕಡ್ಡಾಯಗೊಳಿಸಿದೆ. ಆರ್ಥಿಕವಾಗಿ ತೀವ್ರ ಹಿನ್ನಡೆಗೆ ಕಾರಣ­ವಾಗುವಂತಹ ಇಂತಹ ಕ್ರಮಗಳಿಂದ ಸೋಂಕು ಪಸರಣವನ್ನು ತಡೆಗಟ್ಟಬಹುದು ಎಂಬ ವಾದ ಬಾಲಿಶವಾದೀತು. ಈ ಎಲ್ಲ ಕ್ರಮಗಳು ತಾತ್ಕಾಲಿಕ ಉಪಶಮನ­ಗಳಾದೀತೇ ವಿನಾ ಕೊರೊನಾ ನಿವಾರಣೆಗೆ ಪೂರಕವಾ­ಗದು ಎಂಬುದನ್ನು ಜನಸಾಮಾನ್ಯರು ಮಾತ್ರವಲ್ಲದೆ ಸರಕಾರ ಕೂಡ ಮನಗಾಣಬೇಕಿದೆ.

ಕೊರೊನಾ ಸೋಂಕಿನಿಂದ ಪಾರಾಗಲು ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಸ್ವತ್ಛತೆಯಂಥ ಕಟ್ಟುನಿಟ್ಟಿನ ಕ್ರಮಗಳ ಪಾಲನೆ ಅನಿವಾರ್ಯ. ಕೊರೊನಾ ಸೋಂಕನ್ನು ನಿಗ್ರಹಿಸಬಲ್ಲ ಪ್ರತಿರೋಧಕವನ್ನು ನಮ್ಮ ದೇಹದಲ್ಲಿ ಸೃಷ್ಟಿಸುವಂಥ ಲಸಿಕೆಯನ್ನು ಸಂಶೋಧಿಸಲಾಗಿದ್ದು ಇದರ ನೀಡಿಕೆ ಪ್ರಕ್ರಿಯೆ ಈಗ ದೇಶಾದ್ಯಂತ ನಡೆಯುತ್ತಿದೆ. ಸದ್ಯ ದೇಶದಲ್ಲಿ ಉತ್ಪಾದನೆಯಾಗುತ್ತಿ­ರುವ ಲಸಿಕೆಯ ಪ್ರಮಾಣಕ್ಕನುಗುಣವಾಗಿ ಹಂತ ಹಂತದಲ್ಲಿ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇತರ ದೇಶಗಳಿಗೆ ಹೋಲಿಸಿದಲ್ಲಿ ಭಾರತದಲ್ಲಿ ಲಸಿಕೆ ನೀಡಿಕೆ ಭರದಿಂದ ಸಾಗಿದ್ದು ಅಲ್ಪಾವಧಿಯಲ್ಲಿ 3.72 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಆದರೆ ಇದು ದೇಶದ ಒಟ್ಟಾರೆ ಜನಸಂಖ್ಯೆಯ ಶೇ. 2ರಷ್ಟು ಮಾತ್ರ ಎಂಬುದು ಗಮನಾರ್ಹ. ಈ ಹಿನ್ನೆಲೆಯಲ್ಲಿ ಸರಕಾರ ಕೋವಿಡ್‌ ಪರೀಕ್ಷೆ ಮತ್ತು ಲಸಿಕೆ ವಿತರಣೆ ಪ್ರಕ್ರಿಯೆಗೆ ಇನ್ನಷ್ಟು ವೇಗ ನೀಡಬೇಕಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.