ಕೋವಿಡ್ ನಿಯಮ: ಗೊಂದಲಗಳು ನಿವಾರಣೆಯಾಗಲಿ


Team Udayavani, Mar 27, 2021, 6:20 AM IST

ಕೋವಿಡ್ ನಿಯಮ: ಗೊಂದಲಗಳು ನಿವಾರಣೆಯಾಗಲಿ

ಕಳೆದೊಂದು ತಿಂಗಳಿಂದೀಚೆಗೆ ದೇಶದ ಹಲವಾರು ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ವ್ಯಾಪಕವಾಗಿ ಹರಡಲಾರಂಭಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕೆಲವೊಂದು ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ, ಲಾಕ್‌ಡೌನ್‌ ಅನ್ನು ಜಾರಿಗೊಳಿಸಲಾಗಿದೆ. ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರನೆ ಏರಿಕೆಯಾಗಿದ್ದರಿಂದ ಕರ್ನಾಟಕದಲ್ಲೂ ಕಳೆದ ಕೆಲವು ದಿನಗಳಿಂದ ಸೋಂಕುಪೀಡಿತರ ಸಂಖ್ಯೆ ಏರುಗತಿಯಲ್ಲಿದೆ.

ಕಳೆದ ವರ್ಷಾಂತ್ಯದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್ಲ ವಲಯಗಳಲ್ಲೂ ದೈನಂದಿನ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳಿದ್ದವು. ಇದೀಗ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಲವೊಂದು ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಇದರ ಮಧ್ಯೆಯೇ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಸರದಿಯಂತೆ ಬರಲಿರುವ ವಿವಿಧ ಧರ್ಮಗಳ ಹೋಳಿ, ಯುಗಾದಿ, ಶಬ್‌-ಎ-ಬರಾತ್‌, ಗುಡ್‌ಫ್ರೈಡೇ ಆದಿಯಾಗಿ ಎಲ್ಲ ಹಬ್ಬಗಳನ್ನೂ ಸಾರ್ವಜನಿಕವಾಗಿ ಆಚರಿಸದೇ ಮನೆಯಲ್ಲಿಯೇ ಸರಳವಾಗಿ ಆಚರಿಸುವಂತೆ ಜನತೆಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳ, ಮಾರುಕಟ್ಟೆ, ಧಾರ್ಮಿಕ ಕೇಂದ್ರಗಳಲ್ಲಿ ಹಬ್ಬಗಳನ್ನು ಆಚರಿಸದಂತೆ ಮತ್ತು ಸಭೆ, ಸಮಾರಂಭಗಳನ್ನು ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ಕೊರೊನಾ ನಿಯಂತ್ರಣ ಮತ್ತು ಜನರ ಆರೋಗ್ಯದ ದೃಷ್ಟಿಯಿಂದ ಸರಕಾರ ಈ ಆದೇಶ ಹೊರಡಿಸಿದೆಯಾದರೂ ಇದು ಜನರ ಅಸಮಾಧಾನಕ್ಕೆ ಕಾರಣವಾಗಿರುವುದಂತೂ ಸುಳ್ಳಲ್ಲ. ಕಳೆದ ವರ್ಷದುದ್ದಕ್ಕೂ ಯಾವುದೇ ಹಬ್ಬ, ಹರಿದಿನಗಳನ್ನು ಸಡಗರ, ಸಂಭ್ರಮದಿಂದ ಆಚರಿಸದೇ ತೀವ್ರ ನಿರಾಸೆ ಅನುಭವಿಸಿದ್ದ ಜನರಿಗೆ ಸರಕಾರದ ಈ ಆದೇಶ ಅತ್ತ ನುಂಗಲೂ ಆಗದ, ಇತ್ತ ಉಗುಳಲೂ ಆಗದ ನಾಲಗೆ ಮೇಲಣ ಬಿಸಿ ತುಪ್ಪದಂತಾಗಿದೆ.

ಅಷ್ಟು ಮಾತ್ರವಲ್ಲದೆ ರಾಜ್ಯ ಸರಕಾರ ಕೇವಲ ಜನಸಾಮಾನ್ಯರ ಮೇಲೆ ಮಾತ್ರವೇ ಕೊರೊನಾ ನಿಯಮಾವಳಿಗಳನ್ನು ಹೇರುತ್ತಿದೆ ಎಂಬ ಆಕ್ರೋಶವೂ ಇತ್ತೀಚೆಗೆ ಸಾರ್ವಜನಿಕ ವಲಯದಲ್ಲಿ ಹೆಚ್ಚುತ್ತಿದೆ. ಕೊರೊನಾ ನಿಯಮಾವಳಿಗಳ ವಿಚಾರದಲ್ಲಿ ಸರಕಾರ ತಾರತಮ್ಯದ ಧೋರಣೆಯನ್ನು ಅನುಸರಿಸುತ್ತಿದೆ. ರಾಜಕೀಯ ಸಭೆ, ಸಮಾವೇಶಗಳಿಗೆ ಮತ್ತು ನಾಯಕರಿಗೆ ಯಾವುದೇ ನಿರ್ಬಂಧ, ನಿಯಮಗಳನ್ನು ಯಾಕಾಗಿ ಅನ್ವಯಿಸಲಾಗುತ್ತಿಲ್ಲ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ. ಇನ್ನು ಧಾರ್ಮಿಕ ಮತ್ತು ಕೌಟುಂಬಿಕ ಕಾರ್ಯಕ್ರಮಗಳಿಗೂ ಕೊರೊನಾ ನೆಪದಲ್ಲಿ ವಿನಾಕಾರಣ ಅಡ್ಡಿ ಉಂಟುಮಾಡಲಾಗುತ್ತಿರುವ ಬಗೆಗೂ ಜನರು ಆಕ್ರೋಶ ಹೊರಹಾಕತೊಡಗಿದ್ದಾರೆ.

ನೆರೆಯ ರಾಜ್ಯಗಳಿಂದ ಬರುವವರ ಕೋವಿಡ್‌ ಪರೀಕ್ಷಾ ವರದಿ, ಹೋಂ ಐಸೋಲೇಶನ್‌, ಮೈಕ್ರೋ ಕಂಟೈನ್‌ಮೆಂಟ್‌ ಝೋನ್‌ ಈ ಎಲ್ಲ ವಿಚಾರಗಳಲ್ಲಿಯೂ ಕೂಡ ಸರಕಾರ ಮತ್ತು ಆಡಳಿತ ವಲಯದಲ್ಲಿ ಗೊಂದಲಗಳು ಮುಂದುವರಿದಿರುವುದು ತುಸು ಆತಂಕಕಾರಿ ವಿಷಯವೇ. ರಾಜ್ಯದ ಹಿತದೃಷ್ಟಿಯಿಂದ ಈ ವಿಷಯಗಳತ್ತ ಸರಕಾರ ತತ್‌ಕ್ಷಣ ಗಮನಹರಿಸಿ ಈ ಎಲ್ಲ ಗೊಂದಲಗಳನ್ನು ನಿವಾರಿಸಬೇಕಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.