Carnivak-Cov; ಮನುಷ್ಯರ ನಂತರ ಈಗ ರಷ್ಯಾದಲ್ಲಿ ಪ್ರಾಣಿಗಳಿಗೂ ಕೋವಿಡ್ ಲಸಿಕೆ ನೀಡಲು ಆರಂಭ!
ಜಗತ್ತಿನಾದ್ಯಂತ ವಿವಿಧ ಮಾದರಿಯ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
Team Udayavani, May 27, 2021, 11:49 AM IST
ಮಾಸ್ಕೋ: ಜಗತ್ತಿನಾದ್ಯಂತ ಕೋವಿಡ್ 19 ಸೋಂಕು ಬಿಕ್ಕಟ್ಟು, ಆತಂಕವನ್ನು ಸೃಷ್ಟಿಸಿದೆ. ಏತನ್ಮಧ್ಯೆ ಕೋವಿಡ್ ವೈರಸ್ ವಿರುದ್ಧ ರಷ್ಯಾ ಪ್ರಾಣಿಗಳಿಗೂ ಲಸಿಕೆ ನೀಡಲು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ನನ್ನ ಬಂಧಿಸುವ ಧೈರ್ಯ ಯಾರಿಗೂ ಇಲ್ಲ: ಐಎಂಎಗೆ ಸೆಡ್ಡುಹೊಡೆದ ಬಾಬಾ ರಾಮ್ ದೇವ್
ನಾಯಿಗಳು, ಬೆಕ್ಕುಗಳು, ನರಿ ಮತ್ತು ಮುಂಗುಸಿಗಳಲ್ಲಿ ಕೋವಿಡ್ 19 ವಿರುದ್ಧ ರೋಗ ನಿರೋಧಕ ಪ್ರತಿಕಾಯ ಉತ್ಪಾದಿಸಿದೆ ಎಂದು ಸಂಶೋಧನೆಯಲ್ಲಿ ತೋರಿಸಿದ ನಂತರ ರಷ್ಯಾ ಮಾರ್ಚ್ ನಲ್ಲಿ ಜಗತ್ತಿನ ಮೊದಲ ಪ್ರಾಣಿಗಳ ಕಾರ್ನಿವಾಕ್ ಕೋವ್ ಲಸಿಕೆಯನ್ನು ನೋಂದಾಯಿಸಿರುವುದಾಗಿ ತಿಳಿಸಿತ್ತು.
ಇದೀಗ ರಷ್ಯಾದ ಹಲವು ಪ್ರದೇಶಗಳಲ್ಲಿ ಪಶು ಚಿಕಿತ್ಸಾಲಯಗಳಲ್ಲಿ ಲಸಿಕೆ ನೀಡುವ ಕಾರ್ಯ ಆರಂಭವಾಗಿದೆ ಎಂದು ರಷ್ಯಾದ ವೆಟರ್ನರಿ ವಾಚ್ ಡಾಗ್ ಸ್ಥಳೀಯ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದೆ. ಮತ್ತೊಂದೆಡೆ ಕಾರ್ನಿವಾಕ್ ಕೋವ್ ಲಸಿಕೆ ಬಗ್ಗೆ ಯುರೋಪಿಯನ್ ಒಕ್ಕೂಟ, ಅರ್ಜೈಂಟೀನಾ, ದಕ್ಷಿಣ ಕೊರಿಯಾ ಮತ್ತು ಜಪಾನ್ ಕೂಡಾ ಆಸಕ್ತಿ ತೋರಿಸಿರುವುದಾಗಿ ವರದಿ ವಿವರಿಸಿದೆ.
ಕೋವಿಡ್ 19 ಸೋಂಕು ಪ್ರಾಣಿಗಳಿಂದ ಮನುಷ್ಯನಿಗೆ ಹರಡುತ್ತದೆ ಎಂಬ ಬಗ್ಗೆ ಸದ್ಯ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಆದರೆ ಜಗತ್ತಿನಾದ್ಯಂತ ವಿವಿಧ ಮಾದರಿಯ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಬೆಕ್ಕು ಮತ್ತು ನಾಯಿಗಳು ಮನುಷ್ಯರಿಗೆ ಕೋವಿಡ್ ವೈರಸ್ ಹರಡುವಲ್ಲಿ ಪ್ರಮುಖ ಪಾತ್ರ ವಹಿಸುವುದಿಲ್ಲ, ಅಲ್ಲದೇ ಕೋವಿಡ್ 19 ಪಾಸಿಟಿವ್ ಗೊಳಗಾದವರು ಅವುಗಳ ಲಕ್ಷಣಗಳು ಹೆಚ್ಚಾಗಿ ಗಂಭೀರ ಸ್ವರೂಪದ್ದಾಗಿರುವುದಿಲ್ಲ ಎಂದು ಕೆಲವು ವಿಜ್ಞಾನಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ