ಕೋವಿಡ್ ಹೆಚ್ಚಳ: ತಮಿಳುನಾಡಿನಲ್ಲಿ ಜುಲೈ 19ರವರೆಗೆ ಲಾಕ್ ಡೌನ್ ವಿಸ್ತರಣೆ
ಈವರೆಗೆ 24.46 ಲಕ್ಷ ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
Team Udayavani, Jul 10, 2021, 2:43 PM IST
ಚೆನ್ನೈ: ರಾಜ್ಯದಲ್ಲಿ ಸುಮಾರು ಮೂರು ಸಾವಿರದಷ್ಟು ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜುಲೈ 19ರವರೆಗೂ ಲಾಕ್ ಡೌನ್ ವಿಸ್ತರಿಸಲು ತಮಿಳುನಾಡು ಸರ್ಕಾರ ನಿರ್ಧಾರ ತೆಗೆದುಕೊಂಡಿರುವುದಾಗಿ ಶನಿವಾರ (ಜುಲೈ 10) ತಿಳಿಸಿದೆ.
ಇದನ್ನೂ ಓದಿ:ಮೋಹಕ ತಾರೆಗೆ ನುಗ್ಗೆ ಕಾಯಿ ಇಷ್ಟ ಇಲ್ವಂತೆ-ಹಾಲು ಕುಡಿಯಲ್ವಂತೆ!
ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಂತರ್ ರಾಜ್ಯ ಬಸ್ ಸಂಚಾರ(ಖಾಸಗಿ ಮತ್ತು ಸರ್ಕಾರಿ), ಸಿನಿಮಾ ಥಿಯೇಟರ್, ಬಾರ್, ಪಬ್ಸ್, ಈಜುಕೊಳ, ಸಾಂಸ್ಕೃತಿಕ ಹಾಗೂ ರಾಜಕೀಯ ಸಂಬಂಧಿತ ಕಾರ್ಯಕ್ರಮಗಳು, ಶಿಕ್ಷಣ ಸಂಸ್ಥೆ, ಪ್ರಾಣಿ ಸಂಗ್ರಹಾಲಯ ಬಂದ್ ಆಗಿರಲಿದೆ ಎಂದು ಹೇಳಿದೆ.
ಈ ನೂತನ ಮಾರ್ಗಸೂಚಿ ಜುಲೈ 12ರಿಂದ ಜಾರಿಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ವಿವಾಹ ಸಮಾರಂಭದಲ್ಲಿ 50 ಮಂದಿ ಹಾಗೂ ಶವಸಂಸ್ಕಾರಕ್ಕೆ 20 ಜನರು ಮಾತ್ರ ಪಾಲ್ಗೊಳ್ಳಬಹುದಾಗಿದೆ ಎಂದು ನಿಗದಿಪಡಿಸಲಾಗಿದೆ.
ರಾತ್ರಿ 9ಗಂಟೆವರೆಗೆ ಎಲ್ಲಾ ಅಂಗಡಿ, ವಾಣಿಜ್ಯ ಚಟುವಟಿಕೆಗಳು ನಡೆಸಲು ಅನುಮತಿ ನೀಡಿದೆ. ಪಾಂಡಿಚೇರಿಗೆ ಬಸ್ ಸಂಚರಿಸಲು ಅನುಮತಿ ನೀಡಲಾಗಿದೆ. ಹೋಟೆಲು, ಟೀ ಸ್ಟಾಲ್, ಬೇಕರಿ, ರಸ್ತೆ ಬದಿ ವ್ಯಾಪಾರಿಗಳು ರಾತ್ರಿ 9ಗಂಟೆವರೆಗೆ ವ್ಯವಹಾರ ನಡೆಸಬಹುದಾಗಿದೆ ಎಂದು ತಿಳಿಸಿದೆ.
ತಮಿಳುನಾಡಿನಲ್ಲಿ 33 ಸಾವಿರಕ್ಕೂ ಅಧಿಕ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ದಿನಂಪ್ರತಿ 1.5 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿದೆ. ಈವರೆಗೆ 24.46 ಲಕ್ಷ ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ