ಕೋವಿಡ್ ಪ್ರಕರಣ ಹೆಚ್ಚಳ : ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಿಎಂ ಸೂಚನೆ


Team Udayavani, May 25, 2021, 9:57 PM IST

ಕೋವಿಡ್ ಪ್ರಕರಣ ಹೆಚ್ಚಳ : ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಿಎಂ ಸೂಚನೆ

ಬೆಂಗಳೂರು: ಹಳ್ಳಿಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ತೀವ್ರ ನಿಗಾ ಇಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್‌ -19 ನಿಯಂತ್ರಣದ ಕುರಿತು ಚರ್ಚೆ ನಡೆಸಿದ ಬಳಿಕ ಕೆಲ ಗ್ರಾಮಗಳಲ್ಲಿ ಜನತೆ ಕೊರೊನಾ ಪರೀಕ್ಷೆಗೆ ಹಿಂದೇಟು ಹಾಕುತ್ತಿರುವುದು ಕೇಳಿಬರುತ್ತಿದೆ. ಇವರ ಮನವೊಲಿಕೆ ಮಾಡಿ ಪರೀಕ್ಷೆ ನಡೆಸಬೇಕು. ಹಾಗೆಯೇ, ಗ್ರಾಮಗಳಲ್ಲಿ ಮನೆಯಲ್ಲೇ ಐಸೋಲೇಶನ್‌ ಮಾಡಿಕೊಳ್ಳಲು ಅವಕಾಶ ನೀಡದೇ, ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ ಗಳಿಗೆ ದಾಖಲಿಸಬೇಕು ಎಂದು ಸೂಚನೆ ನೀಡಿದರು.

ನಗರಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದು ಇದೇ ರೀತಿ ಕಠಿಣ ನಿಯಮಗಳನ್ನು ತಪ್ಪದೆ ಜಾರಿಗೆ ತರಬೇಕು ಎಂದೂ ಸೂಚಿಸಿದರು.

ಬ್ಲಾಕ್‌ ಫಂಗಸ್‌ಗೆ ಈಗಾಗಲೇ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದು ಅದಕ್ಕೆ ಬೇಕಾಗುವ ಔಷಧವನ್ನು ಖರೀದಿಸಲು ಸೂಚಿಸಿದರು. ಹೊಸ ಡಿಸ್ಚಾರ್ಜ್ ಮಾರ್ಗಸೂಚಿಗಳನ್ನು ಪಾಲನೆ ಮಾಡಲು ಆಸ್ಪತ್ರೆಗಳಿಗೆ ತಿಳಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಇದನ್ನೂ ಓದಿ :ಮೇ 29, 30ರಂದು ಬೆಳಗಾವಿ ಸಂಪೂರ್ಣ ಲಾಕ್ ಡೌನ್ ಘೋಷಣೆ : ಜಿಲ್ಲಾಧಿಕಾರಿ ಆದೇಶ

ಮೈಕ್ರೋ ಕಂಟೈನ್ಮೆಂಟ್‌ ವಲಯ
ಕೊರೊನಾ ಪ್ರಮಾಣ ಹೆಚ್ಚಾಗಿರುವ ಗ್ರಾಮಾಂತರ ಪ್ರದೇಶದಲ್ಲಿ ಮೈಕ್ರೋ ಕಂಟೈನ್ಮೆಂಟ್‌ ವಲಯ ನಿರ್ಮಾಣ ಮಾಡುವ ಮೂಲಕ ಕೋವಿಡ್‌ ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಮೈಕ್ರೋ ಕಂಟೈನ್ಮೆಂಟ್‌ ವಲಯ ಸ್ಥಾಪಿಸುವ ಜವಾಬ್ದಾರಿಯನ್ನು ಪಿಡಿಓ, ತಾಲೂಕು ಆರೋಗ್ಯ ಅಧಿಕಾರಿ ಮತ್ತು ಪೊಲೀಸರಿಗೆ ವಹಿಸಲಾಗಿದೆ ಎಂದರು.

ಕೋವಿಡ್‌ ಸೋಂಕಿತರು ಯಾವ ಗ್ರಾಮ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೋ ಆ ಗ್ರಾಮಗಳಲ್ಲಿ ಮೈಕ್ರೋ ಕಂಟೈನ್ಮೆಂಟ್‌ ಜೋನ್‌ ಗಳನ್ನು ನಿರ್ಮಿಸಲಾಗುವುದು. ಈ ರೀತಿ ಜೋನ್‌ ನಿರ್ಮಿಸದ ಹೊರತು ಕೋವಿಡ್‌ ಹರಡುವುದನ್ನು ನಿಲ್ಲಿಸಲು ಗ್ರಾಮಾಂತರ ಪ್ರದೇಶದಲ್ಲಿ ಅಸಾಧ್ಯ. ಹೀಗಾಗಿ ಈ ಜೋನ್‌ಗಳಿಗೆ ಭೇಟಿ ನೀಡಿ ಸೋಂಕಿತರ ಆರೋಗ್ಯ ತಪಾಸಣೆ ನಡೆಸುವಂತೆ ವೈದ್ಯರಿಗೆ ಆದೇಶ ನೀಡಲಾಗಿದೆ. ಸೋಂಕಿತರಿಗೆ ವಿಟಮಿನ್‌-ಸಿ, ಜಿಂಕ್‌ ಸೇರಿದಂತೆ ಕೋವಿಡ್‌ಗೆ ನೀಡಲಾಗುವ ಎಲ್ಲಾ ಔಷದೋಪಚಾರವನ್ನು ನೀಡಲಾಗುವುದು. ಪ್ರಾಥಮಿಕ ಮಾಹಿತಿಯನ್ನು ಕಡ್ಡಾಯವಾಗಿ ಆರ್ಟಿಪಿಸಿಆರ್‌ ಮತ್ತು ಆರ್‌ಎಟಿ ಟೆಸ್ಟಿಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದರು.

ಬುಧವಾರ ಆಯ್ದ ಗ್ರಾಪಂಗಳ ಜತೆ ಸಿಎಂ ಸಂವಾದ
ಕೊರೊನಾ ಹೆಚ್ಚಾಗಿ ಕಾಣಿಸಿಕೊಂಡಿರುವ ರಾಜ್ಯದ ಆಯ್ದ ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಜತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಬುಧವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಗ್ರಾಮಾಂತರ ಪ್ರದೇಶದಲ್ಲಿನ ಕೋವಿಡ್‌ ಪರಿಸ್ಥಿತಿಯನ್ನು ಸಿಎಂ ಅವಲೋಕನ ಮಾಡಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.