Covid Updates: ಶೀಘ್ರದಲ್ಲೇ ಕೊರೊನಾ ಅಂತ್ಯ
Team Udayavani, Apr 13, 2023, 8:05 AM IST
ಹೊಸದಿಲ್ಲಿ: ದೇಶದಲ್ಲಿ ಸಾಂಕ್ರಾಮಿಕ ಪರಿಸ್ಥಿತಿ ಅಂತ್ಯಕ್ಕೆ ತಲುಪಿದ್ದು, ಇನ್ನೇನು 10-12 ದಿನಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ. ಬುಧವಾರದ ವರದಿಗಳ ಪ್ರಕಾರ ದೇಶದಲ್ಲಿ ಒಂದೇ ದಿನದಲ್ಲಿ 7,830 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದು ಕಳೆದ 7 ತಿಂಗಳಲ್ಲಿ ದಾಖಲಾದ ಅತೀಹೆಚ್ಚು ಏಕದಿನ ಪ್ರಕ ರಣವಾಗಿದೆ. ಹೊಸ ಸೇರ್ಪಡೆಯೊಂದಿಗೆ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 40,215ಕ್ಕೆ ಏರಿಕೆಯಾಗಿದೆ.
ಆದಾಗ್ಯೂ ಪ್ರಕರಣಗಳ ಹೆಚ್ಚಳದ ನಡುವೆಯೂ ಆಸ್ಪತ್ರೆಗೆ ದಾಖಲಾಗುವಂಥ ಪರಿಸ್ಥಿತಿ ಕಡಿಮೆಯೇ ಇದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಇಳಿಕೆಯಾಗಲಿದೆ. ಈ ಮೂಲಕ ಪ್ರಕರಣಗಳು ಅಂತ್ಯಕ್ಕೆ ತಲುಪಲಿವೆ ಎನ್ನಲಾಗಿದೆ.
ಇನ್ನು ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಬೂಸ್ಟರ್ ಡೋಸ್ಗಳ ಅಗತ್ಯವಿದ್ದು, ಲಸಿಕೆ ತಯಾರಕ ಸಂಸ್ಥೆ ಸೀರಂ ಇನ್ಸ್ಟಿಟ್ಯೂಟ್, ಕೋವಿಶೀಲ್ಡ್ ಲಸಿಕೆಗಳ ಮರು ಉತ್ಪಾದನೆಗೆ ಸಜ್ಜುಗೊಂಡಿದೆ ಎಂದು ಸಂಸ್ಥೆ ಮುಖ್ಯಸ್ಥ ಅಡಾರ್ ಪೂನಾವಾಲಾ ತಿಳಿಸಿದ್ದಾರೆ. ಮತ್ತೂಂದೆಡೆ ಹೊಸದಾಗಿ ಹೆಚ್ಚುವರಿ ಲಸಿಕೆ ಖರೀದಿ ಬಗ್ಗೆ ಕೇಂದ್ರ ಸರಕಾರ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಕೇಂದ್ರ ಆರೋಗ್ಯ ಸಚಿವ ರಾದ ಮನ್ಸುಖ್ ಮಾಂಡವೀಯ ಶೀಘ್ರವೇ ಈ ಕುರಿತು ಸಭೆ ನಡೆಸಲಿದ್ದು, ಔಷಧಗಳ ಲಭ್ಯತೆ, ದತ್ತಾಂಶ ಗೌಪ್ಯತೆ ಸಹಿತ ಅನೇಕ ಕಾಳಜಿ ವಿಚಾರಗಳ ಕುರಿತು ಇ-ಫಾರ್ಮಸಿ ಪ್ರತಿನಿಧಿಗಳ ಜತೆಗೂ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ