ಭಯಪಡುವ ಅವಶ್ಯಕತೆ ಇಲ್ಲ: ಚಾಮರಾಜನಗರದಲ್ಲಿ ಮೊದಲ ಲಸಿಕೆ ಪಡೆದ ಮಂಜುನಾಥ್ ಅವರ ಅಭಿಪ್ರಾಯ
Team Udayavani, Jan 16, 2021, 1:48 PM IST
ಚಾಮರಾಜನಗರ : ಕೋವಿಡ್ ಲಸಿಕೆಯಿಂದ ಜನ ಭಯಪಡುವ ಅವಶ್ಯಕತೆ ಇಲ್ಲ ಎಂದು ಚಾಮರಾಜನಗರದಲ್ಲಿ ಮೊದಲ ಲಸಿಕೆ ಪಡೆದ ಡಿ ಗ್ರೂಪ್ ನೌಕರ ಮಂಜುನಾಥ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಾದ್ಯಂತ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕಾ ಅಭಿಯಾನಕ್ಕೆ ಚಾಲನೆ. ಚಾಮರಾಜನಗರದ ಸರ್ಕಾರಿ ವೈದ್ಯಕೀಯ ಕಾಲೇಜ್ ನಲ್ಲಿ ಡಿ ಗ್ರೂಪ್ ನೌಕರ ಮಂಜುನಾಥ್ ಎಂಬುವರಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು.
ಲಸಿಕೆಯನ್ನು ಎರಡನೆಯವರಾಗಿ ಡಾ.ಸಂಜೀವ್ ಅವರೇ ಪಡೆದು ಇತರರಲ್ಲೂ ವಿಶ್ವಾಸ ಮೂಡಿಸಿದರು.
ಜಿಲ್ಲೆಯ ಕೊಳ್ಳೇಗಾಲದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿ ಗ್ರೂಪ್ ನೌಕರ ಪ್ರಕಾಶ್ ಎಂಬಾತ ಕೊಳ್ಳೇಗಾಲ ತಾಲೂಕಿನಲ್ಲಿ ಮೊದಲಿಗನಾಗಿ ಲಸಿಕೆ ಪಡೆದು ಕೊಂಡಿದ್ದಾರೆ.
ಲಸಿಕೆ ಕುರಿತು ಮಾತನಾಡಿದ ಮಂಜುನಾಥ್ ಅವರು ಮೊದಲು ಹೇಗಿದ್ದೆನೋ ಈಗಲು ಹಾಗೆಯೆ ಇದ್ದೇನೆ ಜನ ಭಯಪಡುವ ಅವಶ್ಯಕತೆ ಇಲ್ಲ, ಜ್ವರ ಬಂದರೆ ಇಂಜೆಕ್ಷನ್ ತೆಗೆದುಕೊಳ್ಳುವುದಿಲ್ಲವೇ, ಹಾಗೆಯೇ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದೇನೆ ಯಾವುದೇ ತೊಂದರೆ ಇಲ್ಲದೆ ಆರಾಮವಾಗಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ
ಮೊದಲನೆ ಹಂತದಲ್ಲಿ 814 ಮಂದಿಗೆ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಮೊದಲ ದಿನ 600 ಜನರಿಗೆ ಅಂತೆಯೇ ಸೋಮವಾರ ಉಳಿದ 214 ಮಂದಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಮದ್ಯಾಹ್ನದ ವರೆಗೆ ಸುಮಾರು 320 ಮಂದಿಗೆ ಲಸಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!