5 ರಾಜ್ಯಗಳಲ್ಲಿ 5 ಸಾವಿರ ಡೋಸ್ ಲಸಿಕೆ ವೇಸ್ಟ್! ನಿರಾಸಕ್ತಿಯೇ ಕಾರಣ ಎಂದ ಅಧಿಕಾರಿಗಳು
Team Udayavani, Jan 29, 2021, 11:34 PM IST
ನವದೆಹಲಿ: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭವಾದಾಗಿನಿಂದ ಈವರೆಗೆ ಅಂದರೆ ಜ.16ರಿಂದ 29ರವರೆಗೆ 5 ರಾಜ್ಯಗಳಲ್ಲಿ ಸುಮಾರು 5 ಸಾವಿರ ಡೋಸ್ಗಳಷ್ಟು ಲಸಿಕೆ ವ್ಯರ್ಥವಾಗಿ ಹೋಗಿದೆ. ಈ ಪೈಕಿ ತ್ರಿಪುರಾ ಮೊದಲ ಸ್ಥಾನದಲ್ಲಿದ್ದು ಇಲ್ಲಿ ಶೇ.11ರಷ್ಟು ಲಸಿಕೆ ವೇಸ್ಟ್ ಆಗಿದೆ ಎಂದು ಹಿಂದುಸ್ತಾನ್ ಟೈಮ್ಸ್ನ ವರದಿ ತಿಳಿಸಿದೆ.
ಲಸಿಕೆಯ ಒಂದು ಸೀಸೆ ತೆರೆದರೆ, ಅದನ್ನು 4 ಗಂಟೆಗಳ ಒಳಗಾಗಿ ಬಳಸಬೇಕು. ತದನಂತರ ಬಳಸುವಂತಿಲ್ಲ. ಆದರೆ, ಲಸಿಕೆ ಪಡೆಯುವವರ ಸಂಖ್ಯೆ ಇಳಿಮುಖವಾದ ಕಾರಣ, ಸೀಸೆಯಲ್ಲಿರುವ ಹನಿಗಳು ಖಾಲಿಯಾಗುತ್ತಿಲ್ಲ. ಹೀಗಾಗಿ, ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ವೇಸ್ಟ್ ಆಗುತ್ತಿದೆ ಎಂದು ವರದಿ ಹೇಳಿದೆ.
ಕೆಲವು ಕಡೆ ಅಧಿಕಾರಿಗಳು ನಿಗದಿತ ವ್ಯಕ್ತಿಗಳ ಹೊರತಾಗಿ ಇತರರನ್ನೂ ಕರೆದು ಲಸಿಕೆ ವಿತರಿಸುವ ಮೂಲಕ ವ್ಯರ್ಥವಾಗುವುದನ್ನು ತಡೆಯುತ್ತಿದ್ದಾರೆ. ಅನೇಕರು ಲಸಿಕೆ ಪಡೆಯುಲು ಹಿಂಜರಿಯುತ್ತಿದ್ದು, ಪ್ರತಿ 100 ಮಂದಿಯ ಪೈಕಿ ಕೇವಲ 55 ಮಂದಿ ಮಾತ್ರ ಲಸಿಕೆ ಪಡೆಯುತ್ತಿದ್ದಾರೆ ಎಂದೂ ವರದಿ ಹೇಳಿದೆ. ಇನ್ನು, ಜಾರ್ಖಂಡ್, ಆಂಧ್ರ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಕೇರಳ ಮತ್ತು ಛತ್ತೀಸ್ಗಡದಲ್ಲಿ ಲಸಿಕೆ ವ್ಯರ್ಥವಾಗಿಲ್ಲ ಎಂದು ಈ ರಾಜ್ಯಗಳ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ, ಗುರುವಾರದಿಂದ ಶುಕ್ರವಾರಕ್ಕೆ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 18,855 ಮಂದಿಗೆ ಸೋಂಕು ದೃಢ ಪಟ್ಟಿದೆ.
ಲಂಕಾದಲ್ಲಿ ವಿತರಣೆ ಆರಂಭ:
ಶ್ರೀಲಂಕಾದಲ್ಲಿ ಶುಕ್ರವಾರ ದೇಶವ್ಯಾಪಿ ಲಸಿಕೆ ಅಭಿಯಾನ ಆರಂಭವಾಗಿದೆ. ಮುಂಚೂಣಿ ಆರೋಗ್ಯ ಕಾರ್ಯಕರ್ತರು, ಯೋಧರು, ಭದ್ರತಾ ಸಿಬ್ಬಂದಿಗೆ ಆರಂಭದಲ್ಲಿ ಲಸಿಕೆ ನೀಡಲಾಗುತ್ತದೆ. ಭಾರತವು ಲಂಕೆಗೆ 5 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ಉಡುಗೊರೆಯಾಗಿ ಕಳುಹಿಸಿದ ಬೆನ್ನಲ್ಲೇ ವಿತರಣೆ ಪ್ರಕ್ರಿಯೆ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ