ಕೋವಿಡ್ ಲಸಿಕೆ ಅಭಿಯಾನ : 50 ವರ್ಷ ಮೇಲ್ಪಟ್ಟವರ ಸರ್ವೇ ಕಾರ್ಯ


Team Udayavani, Feb 17, 2021, 12:15 AM IST

ಕೋವಿಡ್ ಲಸಿಕೆ ಅಭಿಯಾನ : 50 ವರ್ಷ ಮೇಲ್ಪಟ್ಟವರ ಸರ್ವೇ ಕಾರ್ಯ

ಮಹಾನಗರ: ಕೊರೊನಾ ರೋಗ ನಿರೋಧಕ ಲಸಿಕೆಯ ಮೂರನೇ ಹಂತವನ್ನು ಪರಿಪೂರ್ಣವಾಗಿ ನಿರ್ವಹಿ ಸುವ ಉದ್ದೇಶದಿಂದ ದ.ಕ. ಜಿಲ್ಲೆಯಲ್ಲಿ ಐವತ್ತು ವರ್ಷ ಮೇಲ್ಪಟ್ಟವರ ಸರ್ವೇ ನಡೆ ಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ದ.ಕ. ಜಿಲ್ಲೆಯ ಪ್ರತಿಯೊಂದು ಗ್ರಾಮ ದಲ್ಲಿಯೂ ಈ ಸರ್ವೇ ನಡೆಯಲಿದೆ. ಸರ್ವೇಯ ಉದ್ದೇಶಕ್ಕೆಂದು ಮನೆ-ಮನೆ ಭೇಟಿಗೆ ಆಶಾ ಕಾರ್ಯಕರ್ತೆಯರು ಮತ್ತು ಕಿರಿಯ ಆರೋಗ್ಯ ಸಹಾಯಕರನ್ನು ನೇಮಕ ಮಾಡಲಾಗಿದ್ದು, ಅವರು ದತ್ತಾಂಶ ಸಂಗ್ರಹ ಮಾಡಲಿದ್ದಾರೆ. ದ.ಕ. ಜಿಲ್ಲೆಗೆ ಮೂರನೇ ಹಂತದಲ್ಲಿ ಲಸಿಕೆ ಎಷ್ಟು ಪ್ರಮಾಣದಲ್ಲಿಬೇಕು ಎಂದು ಅಂದಾಜು ಪಟ್ಟಿಗೆ ಈ ಸರ್ವೇ ಸಹಾಯಕವಾಗಲಿದೆ.

ದ.ಕ. ಜಿಲ್ಲೆಯಲ್ಲಿ ಈಗಾಗಲೇ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ (ಫ್ರಂಟ್‌ ಲೈನ್‌ ವರ್ಕರ್) ಲಸಿಕೆ ನೀಡಲಾಗುತ್ತಿದೆ. ಈ ಎರಡೂ ವಿಭಾಗಗಳಲ್ಲಿ ಲಸಿಕೆ ಪಡೆಯಲು ಫಲಾನುಭವಿಗಳು ನಿರೀಕ್ಷಿತ ಪ್ರಮಾಣದಲ್ಲಿ ಬರಲಿಲ್ಲ. ಇದೇ ಕಾರಣಕ್ಕೆ ಮೂರನೇ ಹಂತದಲ್ಲಿ ಹಿರಿಯ ನಾಗರಿಕರು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರ ದತ್ತಾಂಶ ಸಂಗ್ರಹಿಸಿ, ಆ ಪಟ್ಟಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗುತ್ತದೆ.

ದ.ಕ. ಜಿಲ್ಲೆಯಲ್ಲಿ ಮೊದಲ ಮತ್ತು ಎರಡನೇ ಹಂತದ ಲಸಿಕೆ ಅಭಿಯಾನದಲ್ಲಿ ಶೇ. 50ರಷ್ಟೂ ಗುರಿ ತಲುಪಿಲ್ಲ. ಆರೋಗ್ಯ ಇಲಾಖೆಯ ಮಾಹಿತಿಯಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 56,632 ಮಂದಿ ಆರೋಗ್ಯ ಕಾರ್ಯಕರ್ತರು ಮೊದಲನೇ ಹಂತದ ಲಸಿಕೆ ಪಡೆಯಲು ನೋಂದಣಿ ಮಾಡಿದ್ದು, ಸದ್ಯ 26,821 ಮಂದಿ ಮಾತ್ರ ಲಸಿಕೆ ಪಡೆದಿದ್ದಾರೆ. ಇದರೊಂದಿಗೆ ಶೇ. 48ರಷ್ಟು ಗುರಿ ಮಾತ್ರ ತಲುಪಿದೆ. ಕೆಲ ದಿನಗಳ ಹಿಂದೆ ಎರಡನೇ ಹಂತವೂ ಆರಂಭಗೊಂಡಿದ್ದು, ಒಟ್ಟು 8,593 ಮಂದಿ ನೋಂದಣಿಯಲ್ಲಿ 2,801 ಮಂದಿ ಮಾತ್ರ ಲಸಿಕೆ ಪಡೆದು ಶೇ.33 ಗುರಿ ತಲುಪಿದೆ.

ಕೊರೊನಾ ವಾರಿಯರ್ ನಿರೀಕ್ಷಿತ ಪ್ರಮಾಣದಲ್ಲಿ ಲಸಿಕೆ ಪಡೆಯಲು ಮುಂದೆ ಬಾರದೇ ಇರುವುದು ಮೂರನೇ ಹಂತದ ಅಭಿಯಾನ ಜಿಲ್ಲಾಡಳಿತಕ್ಕೆ ಸವಾಲಾಗಿದೆ.

ಸರ್ವೇ ಆರಂಭ
ಕೊರೊನಾ ಮೂರನೇ ಹಂತದ ಲಸಿಕೆ ಆರಂಭಕ್ಕೂ ಮುನ್ನ ಆರೋಗ್ಯ ಇಲಾಖೆಯ ಸೂಚನೆಯಂತೆ ದ.ಕ. ಜಿಲ್ಲೆಯಲ್ಲಿ ಸರ್ವೇ ಆರಂಭವಾಗಿದೆ. ಅದರಂತೆ ಜಿಲ್ಲೆಯಲ್ಲಿ 50 ವರ್ಷ ಮೇಲ್ಪಟ್ಟವರ ಸರ್ವೇ ನಡೆಸಲಾಗುತ್ತಿದೆ. ಅವರಿಗೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸಹಿತ ಬೇರೆ ಕಾಯಿಲೆ ಇದೆಯೇ ಎಂಬ ದತ್ತಾಂಶ ಸಂಗ್ರಹ ಮಾಡಲಾಗುತ್ತಿದೆ. ಇದಕ್ಕೆಂದು ಮಾದರಿಯೊಂದನ್ನು ಸಿದ್ಧಪಡಿಸಲಾಗಿದೆ.
-ಡಾ| ರಾಮಚಂದ್ರ ಬಾಯರಿ, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

ಮಾರ್ಚ್‌ನಲ್ಲಿ ಮೂರನೇ ಹಂತ
ಕೊರೊನಾ ರೋಗ ನಿರೋಧಕ ಲಸಿಕೆಯನ್ನು ಮೂರನೇ ಹಂತದಲ್ಲಿ ಆದ್ಯತೆಯ ಗುಂಪು 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಆರೋಗ್ಯ ಸಮಸ್ಯೆ ಹೊಂದಿದವರಿಗೆ (ಕೊಮೊರ್ಬಿಡಿಟಿ) ನೀಡಲಾಗುತ್ತದೆ. ಮೊದಲನೇ ಮತ್ತು ಎರಡನೇ ಹಂತದ ಲಸಿಕೆ ಅಭಿಯಾನ ಸದ್ಯ ನಡೆಯುತ್ತಿದ್ದು, ಮೂರನೇ ಹಂತದ ಅಭಿಯಾನಕ್ಕೆ ಮಾರ್ಚ್‌ ತಿಂಗಳಲ್ಲಿ ನೋಂದಣಿ ನಡೆಯುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿದೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.