ಇಂದು ಮೋದಿ ಲಸಿಕೆ ಪ್ರವಾಸ : ಅಹ್ಮದಾಬಾದ್, ಪುಣೆ, ಹೈದರಾಬಾದ್ ಸಂಸ್ಥೆಗಳಿಗೆ ಭೇಟಿ
Team Udayavani, Nov 28, 2020, 6:50 AM IST
ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ಲಸಿಕೆ ಸಿದ್ಧಪಡಿಸುತ್ತಿರುವ ಮೂರು ಪ್ರಮುಖ ಸಂಸ್ಥೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೊಚ್ಚಲ ಭೇಟಿ ನೀಡಲಿದ್ದಾರೆ.
ಅಹ್ಮದಾಬಾದ್ನ ಝೈಡಸ್ ಕ್ಯಾಡಿಲಾ, ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಹೈದರಾಬಾದ್ನ
ಭಾರತ್ ಬಯೋಟೆಕ್ ಸಂಸ್ಥೆಗಳಿಗೆ ಮೋದಿ ಭೇಟಿ ನೀಡಿ, ಲಸಿಕೆ ಅಭಿವೃದ್ಧಿಯ ಪ್ರಗತಿಯನ್ನು ವೀಕ್ಷಿಸಲಿದ್ದಾರೆ. ಲಸಿಕೆ ಸಂಸ್ಕರಣೆ, ಸರಬರಾಜು ಕುರಿತು ಸಂಸ್ಥೆಯ ತಜ್ಞರೊಂದಿಗೆ ಚರ್ಚಿಸಲಿದ್ದಾರೆ.
ಎಲ್ಲಿಂದ ಆರಂಭ?
ಪ್ರಧಾನಿ ಶನಿವಾರ ಬೆಳಗ್ಗೆ 9.30ಕ್ಕೆ ಅಹ್ಮದಾಬಾದ್ಗೆ ತಲುಪಲಿದ್ದು, ಅಲ್ಲಿಂದ ಚಾಂಗೋದರ್ ಕೈಗಾರಿಕಾ ಪ್ರದೇಶದ ಝೈಡಸ್ ಕ್ಯಾಡಿಲಾ ಸಂಸ್ಥೆಗೆ ಮೊದಲು ಭೇಟಿ ನೀಡಲಿದ್ದಾರೆ. ಸಂಸ್ಥೆಯು ಝೈಕೋವಿ-ಡಿ ಲಸಿಕೆ ಶೋಧಿಸು ತ್ತಿದ್ದು, ಇದರ 2ನೇ ಹಂತದ ಪ್ರಯೋಗ ಈಗಾಗಲೇ ಪ್ರಗತಿಯಲ್ಲಿದೆ.
ಅಲ್ಲಿಂದ ಪ್ರಧಾನಿ ಮಧ್ಯಾಹ್ನ 12.30ರ ಸುಮಾರಿಗೆ ಪುಣೆ ತಲುಪಲಿದ್ದಾರೆ. ಜಾಗತಿಕ ಫಾರ್ಮಾ ದೈತ್ಯ ಅಸ್ಟ್ರಾ ಜೆನೆಕಾ ಮತ್ತು ಆಕ್ಸ್ಫರ್ಡ್ ವಿ.ವಿ. ಸಹಭಾಗಿತ್ವದಲ್ಲಿ ಭಾರತದಲ್ಲಿ ಲಸಿಕೆ ಸಿದ್ಧಪಡಿಸುತ್ತಿರುವ ಸೀರಮ್ ಇನ್ಸ್ಟಿಟ್ಯೂಟ್ಗೆ ಭೇಟಿ ನೀಡಲಿದ್ದಾರೆ. ಈ ಲಸಿಕೆ ಪ್ರಯೋಗ 3ನೇ ಹಂತದಲ್ಲಿದೆ.
ಸಂಜೆಯ ಸುಮಾರಿಗೆ ಪ್ರಧಾನಿ ಯವರು ಹೈದರಾಬಾದ್ನ ಹಕೀಮ್ಪೇಟ್ ಏರ್ಫೋರ್ಸ್ ಸ್ಟೇಷನ್ಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ 50 ಕಿ.ಮೀ. ದೂರದ ಜಿನೋಮ್ ವ್ಯಾಲಿಯಲ್ಲಿರುವ ಭಾರತ್ ಬಯೋಟೆಕ್ಗೆ ಭೇಟಿ ನೀಡಿ, ಕೊವ್ಯಾಕ್ಸಿನ್ ಲಸಿಕೆಯ ಪ್ರಗತಿ ವೀಕ್ಷಿಸಲಿದ್ದಾರೆ. ಈ ಲಸಿಕೆ ಪ್ರಯೋಗ 3ನೇ ಹಂತದಲ್ಲಿದೆ. ಆ ಬಳಿಕ ಪ್ರಧಾನಿ ಮರಳಿ ಹೊಸದಿಲ್ಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್