ಕೊವಿಶೀಲ್ಡ್‌ 2ನೇ ಡೋಸ್‌ ಅವಧಿ 6-8 ವಾರಗಳಿಗೆ ಹೆಚ್ಚಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ


Team Udayavani, Mar 22, 2021, 7:40 PM IST

ಕೊವಿಶೀಲ್ಡ್‌ 2ನೇ ಡೋಸ್‌ ಅವಧಿ 6-8 ವಾರಗಳಿಗೆ ಹೆಚ್ಚಿಸಿ: ರಾಜ್ಯಗಳಿಗೆ ಕೇಂದ್ರ ಪತ್ರ

ನವದೆಹಲಿ: ಕೊವಿಶೀಲ್ಡ್‌ ಲಸಿಕೆಯ ಮೊದಲ ಡೋಸ್‌ ಪಡೆದ ಬಳಿಕ ಎರಡನೇ ಡೋಸ್‌ ಪಡೆಯಲು ಇರುವ ಅವಧಿಯನ್ನು ಈಗಿನ 28 ದಿನಗಳ ಬದಲಾಗಿ 6-8 ವಾರಗಳಿಗೆ ಹೆಚ್ಚಿಸಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ದೇಶಾದ್ಯಂತ ಎರಡನೇ ಹಂತದ ಲಸಿಕೆ ವಿತರಣೆ ನಡೆಯುತ್ತಿರುವ ಸಮಯದಲ್ಲೇ ಈ ಬೆಳವಣಿಗೆ ನಡೆದಿದೆ. ಎರಡು ಡೋಸ್‌ಗಳ ನಡುವಿನ ಅವಧಿಯನ್ನು ಹೆಚ್ಚಿಸಿದರೆ “ಸೋಂಕಿನಿಂದ ಸಂರಕ್ಷಣೆಯೂ ಹೆಚ್ಚುತ್ತದೆ’ ಎಂದು ಸರ್ಕಾರ ಅಭಿಪ್ರಾಯ ಪಟ್ಟಿದೆ.

ಪ್ರಸ್ತುತ ಮೊದಲ ಡೋಸ್‌ ಪಡೆದವರು 28 ದಿನಗಳ ಬಳಿಕ ಎರಡನೇ ಡೋಸ್‌ ಪಡೆಯುತ್ತಾರೆ. ಆದರೆ, ಈ ಅವಧಿಯನ್ನು 6ರಿಂದ 8 ವಾರಗಳಿಗೆ ಹೆಚ್ಚಿಸಬೇಕು ಎನ್ನುವುದು ಕೇಂದ್ರ ಸರ್ಕಾರದ ಸಲಹೆಯಾಗಿದೆ. ಆದರೆ, ಡೋಸ್‌ ನೀಡುವಿಕೆಯ ಅವಧಿ ವಿಸ್ತರಣೆಯು ಕೇವಲ ಆಕ್ಸ್‌ ಫ‌ರ್ಡ್‌ ಆಸ್ಟ್ರಜೆನೆಕಾ ಅಭಿವೃದ್ಧಿಪಡಿಸಿರುವ, ಸೀರಂ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯಾ ತಯಾರಿಸಿರುವ “ಕೊವಿಶೀಲ್ಡ್‌’ ಲಸಿಕೆಗೆ ಮಾತ್ರ ಅನ್ವಯವಾಗುತ್ತದೆ. ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ಇದು ಅನ್ವಯವಾಗುವುದಿಲ್ಲ ಎಂದೂ ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ :ಆನ್‌ಲೈನ್‌ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪ್ರಭಾವ ಬೀರುತ್ತಿದೆ: ಸುರೇಶ್‌ ಕುಮಾರ್‌

6 ಮತ್ತು 8 ವಾರಗಳ ಅವಧಿಯಲ್ಲಿ 2ನೇ ಡೋಸ್‌ ನೀಡಿದರೆ ಸೋಂಕಿನಿಂದ ಹೆಚ್ಚು ಸುರಕ್ಷತೆ ಸಿಗಲಿದೆ ಎಂಬುದು ಅರಿವಾದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಆದರೆ, ಈ ಅವಧಿಯು 8 ವಾರಗಳನ್ನು ದಾಟುವಂತಿಲ್ಲ ಎಂದೂ ಸರ್ಕಾರ ಹೇಳಿದೆ.

46,951 ಪ್ರಕರಣ:
ಭಾನುವಾರದಿಂದ ಸೋಮವಾರಕ್ಕೆ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 46,951 ಮಂದಿಗೆ ಸೋಂಕು ದೃಢಪಟ್ಟಿದ್ದು, 212 ಮಂದಿ ಸಾವಿಗೀಡಾಗಿದ್ದಾರೆ. ಕೇವಲ 2 ದಿನಗಳಲ್ಲಿ 90,797 ಮಂದಿಯ ವರದಿ ಪಾಸಿಟಿವ್‌ ಎಂದು ಬಂದಂತಾಗಿದೆ. ಮಹಾರಾಷ್ಟ್ರವೊಂದರಲ್ಲೇ 24 ಗಂಟೆಗಳಲ್ಲಿ 30,535 ಹೊಸ ಪ್ರಕರಣ ಪತ್ತೆಯಾಗಿದೆ. ಇದೇ ವೇಳೆ, ಉತ್ತರಾಖಂಡ ಸಿಎಂ ತೀರಥ್‌ ಸಿಂಗ್‌ ರಾವತ್‌ ಅವರಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.